Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Unveils National Emblem: ನೂತನ ಸಂಸತ್​ ಭವನದ ಮೇಲೆ ನರೇಂದ್ರ ಮೋದಿಯಿಂದ ಬೃಹತ್ ರಾಷ್ಟ್ರ ಲಾಂಛನ ಅನಾವರಣ

ನೂತನ ಸಂಸತ್ ಭವನದ ಮೇಲ್ಛಾವಣಿಯಲ್ಲಿ 6.5 ಮೀ ಎತ್ತರದ ಕಂಚಿನ ರಾಷ್ಟ್ರ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು.

PM Modi Unveils National Emblem: ನೂತನ ಸಂಸತ್​ ಭವನದ ಮೇಲೆ ನರೇಂದ್ರ ಮೋದಿಯಿಂದ ಬೃಹತ್ ರಾಷ್ಟ್ರ ಲಾಂಛನ ಅನಾವರಣ
ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನದ ಅನಾವರಣ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 11, 2022 | 2:14 PM

ನವದೆಹಲಿ: ದೆಹಲಿಯಲ್ಲಿರುವ ನೂತನ ಸಂಸತ್ ಭವನದ ಮೇಲೆ ಬೃಹತ್ ರಾಷ್ಟ್ರ ಲಾಂಛನವನ್ನು ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ನೂತನ ಸಂಸತ್​ ಭವನದ ಮೇಲೆ 6.5 ಮೀಟರ್ ಎತ್ತರ ಬೃಹತ್ ಅಶೋಕ ಸ್ತಂಭವನ್ನು ನಿರ್ಮಿಸಲಾಗಿದೆ. ಈ ರಾಷ್ಟ್ರ ಲಾಂಛನದ (National Emblem) ಉದ್ಘಾಟನೆ ವೇಳೆ ಪ್ರಧಾನಿ ಮೋದಿ ನೂತನ ಸಂಸತ್ತಿನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರು ಮತ್ತು ಕೆಲಸಗಾರರೊಂದಿಗೆ ಸಂವಾದ ನಡೆಸಿದ್ದಾರೆ.

ಈ ಬೃಹತ್ ರಾಷ್ಟ್ರೀಯ ಲಾಂಛನವನ್ನು ಕಂಚಿನಿಂದ ಮಾಡಲಾಗಿದ್ದು, ಒಟ್ಟು 9,500 ಕೆಜಿ ತೂಕ ಮತ್ತು 6.5 ಮೀ ಎತ್ತರವಿದೆ. ಹೊಸ ಪಾರ್ಲಿಮೆಂಟ್ ಕಟ್ಟಡದ ಸೆಂಟ್ರಲ್ ಫೋಯರ್‌ನ ಮೇಲ್ಭಾಗದಲ್ಲಿ ಇದನ್ನು ಇರಿಸಲಾಗಿದೆ.

ನೂತನ ಸಂಸತ್ ಭವನದ ಮೇಲ್ಛಾವಣಿಯಲ್ಲಿ ಕಂಚಿನ 6.5 ಮೀ ಉದ್ದದ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಪಾರಂಪರಿಕ ಸಂಸತ್ತಿನ ಕಟ್ಟಡದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಸಂಸತ್ ಕಟ್ಟಡ ತ್ರಿಕೋನ ಆಕಾರದಲ್ಲಿದೆ. ಈ ರಾಷ್ಟ್ರ ಲಾಂಛನವು ಕಟ್ಟಡದ ಮೇಲ್ಭಾಗದಲ್ಲಿ ಕಿರೀಟದಂತಿದೆ.

ಇದನ್ನೂ ಓದಿ: PM Modi Varanasi Visit: ವಾರಾಣಸಿಗೆ ಇಂದು ಪ್ರಧಾನಿ ಮೋದಿ ಭೇಟಿ; 1,800 ಕೋಟಿ ರೂ. ಯೋಜನೆಗಳಿಗೆ ಚಾಲನೆ

2021ರ ಜನವರಿಯಲ್ಲಿ 971 ಕೋಟಿ ರೂಪಾಯಿಗಳ ಅಂದಾಜು ವೆಚ್ಚದೊಂದಿಗೆ ಪ್ರಾರಂಭವಾದ ಸಂಸತ್ ಕಟ್ಟಡ ನಿರ್ಮಾಣ ಯೋಜನೆಯು ಸಂಸತ್ತಿನ ಚಳಿಗಾಲದ ಅಧಿವೇಶನದ ಸಮಯದಲ್ಲಿ ಪೂರ್ಣಗೊಳ್ಳಲಿದೆ. ಈ ಹೊಸ ಕಟ್ಟಡವು ಲೋಕಸಭೆಯಲ್ಲಿ 888 ಸದಸ್ಯರಿಗೆ, ರಾಜ್ಯಸಭೆಯಲ್ಲಿ 384 ಮತ್ತು ಜಂಟಿ ಅಧಿವೇಶನಕ್ಕಾಗಿ 1,272 ಸ್ಥಾನಗಳಿಗೆ ಅವಕಾಶ ಕಲ್ಪಿಸಲಿದೆ.

Published On - 1:29 pm, Mon, 11 July 22

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ