AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೇಕೆ ದೊಡ್ಡ ರಫ್ತು ಮಾಡುವ ರಾಷ್ಟ್ರವಾಗಬಾರದು? ಮೋದಿ ಸವಾಲಿನ ಪ್ರಶ್ನೆ

ನವದೆಹಲಿ:ಕಲ್ಲಿದ್ದಲು ವಾಣಿಜ್ಯ ಗಣಿಗಾರಿಕೆ ಹರಾಜು ಪ್ರಕ್ರಿಯೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಇಂತಹ ಸಂದರ್ಭದಲ್ಲೂ ಹರಾಜು ಪ್ರಕ್ರಿಯೆ ಆರಂಭಿಸಿದ್ದೀರಿ. ಸಂಕಷ್ಟವನ್ನು ಅವಕಾಶವಾಗಿ ಬಳಸಿಕೊಳ್ಳಬೇಕು ಎಂದು ಮೋದಿ ಮೆಚ್ಚುಗೆ ಸೂಚಿಸಿದರು. ಕೊರೊನಾ ಲಾಕ್​ ಡೌನ್​ ಸಂದರ್ಭದಲ್ಲೂ ಹರಾಜು ಪ್ರಕ್ರಿಯೆ ಆರಂಭಿಸಿದ್ದೀರಿ. ಇದರಿಂದ ಅತಿ ದೊಡ್ಡ ಸಂದೇಶ ರವಾನೆಯಾಗುತ್ತದೆ. ಸಂಕಷ್ಟವನ್ನು ಅವಕಾಶವಾಗಿ ಬಳಸಿಕೊಳ್ಳಬೇಕು. ಆತ್ಮ ನಿರ್ಭರ ಭಾರತದಿಂದ ಆಮದು ನಿಲ್ಲಿಸಬೇಕು […]

ನಾವೇಕೆ ದೊಡ್ಡ ರಫ್ತು ಮಾಡುವ ರಾಷ್ಟ್ರವಾಗಬಾರದು? ಮೋದಿ ಸವಾಲಿನ ಪ್ರಶ್ನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 18, 2020 | 12:36 PM

Share

ನವದೆಹಲಿ:ಕಲ್ಲಿದ್ದಲು ವಾಣಿಜ್ಯ ಗಣಿಗಾರಿಕೆ ಹರಾಜು ಪ್ರಕ್ರಿಯೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಇಂತಹ ಸಂದರ್ಭದಲ್ಲೂ ಹರಾಜು ಪ್ರಕ್ರಿಯೆ ಆರಂಭಿಸಿದ್ದೀರಿ. ಸಂಕಷ್ಟವನ್ನು ಅವಕಾಶವಾಗಿ ಬಳಸಿಕೊಳ್ಳಬೇಕು ಎಂದು ಮೋದಿ ಮೆಚ್ಚುಗೆ ಸೂಚಿಸಿದರು.

ಕೊರೊನಾ ಲಾಕ್​ ಡೌನ್​ ಸಂದರ್ಭದಲ್ಲೂ ಹರಾಜು ಪ್ರಕ್ರಿಯೆ ಆರಂಭಿಸಿದ್ದೀರಿ. ಇದರಿಂದ ಅತಿ ದೊಡ್ಡ ಸಂದೇಶ ರವಾನೆಯಾಗುತ್ತದೆ. ಸಂಕಷ್ಟವನ್ನು ಅವಕಾಶವಾಗಿ ಬಳಸಿಕೊಳ್ಳಬೇಕು. ಆತ್ಮ ನಿರ್ಭರ ಭಾರತದಿಂದ ಆಮದು ನಿಲ್ಲಿಸಬೇಕು ಆಮದಿಗಿಂತ ಹೆಚ್ಚು ಪ್ರಮಾಣದಲ್ಲಿ ರಫ್ತು ಮಾಡಬೇಕು. ಸಮಗ್ರ ದೃಷ್ಟಿಯಿಂದ ಕೆಲಸ ಮಾಡಬೇಕು. ಈ ದಿಕ್ಕಿನಲ್ಲಿ ಇಂದಿನ ಕಾರ್ಯಕ್ರಮ ದೊಡ್ಡ ಹೆಜ್ಜೆಯಾಗಿದೆ. ಭಾರತವನ್ನು ಸ್ವಾವಲಂಬಿ ಮಾಡುವಲ್ಲಿ ಇದು ದೊಡ್ಡ ಹೆಜ್ಜೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮ ಕಲ್ಲಿದ್ದಲು ಸಂಬಂಧಪಟ್ಟಂತೆ ಮಾತ್ರವಲ್ಲ. 130 ಕೋಟಿ ಜನರ ಆಕಾಂಕ್ಷೆಗಳನ್ನು ಈಡೇರಿಸುವ ಬದ್ಧತೆ ಎದ್ದು ಕಾಣುತ್ತಿದೆ. ಲಕ್ಷಗಟ್ಟಲೇ ಉದ್ಯೋಗ ಸೃಷ್ಟಿಸುವ ಪ್ರಯತ್ನವಾಗಬೇಕು. ಆತ್ಮ ನಿರ್ಭರ ಭಾರತ ಸಾಮಾನ್ಯ ಸರ್ಕಾರಿ ಪ್ರಕ್ರಿಯೆ ಎಂದು ಅನಿಸಿದೆ. ಪ್ರತಿ ಕ್ಷೇತ್ರದಲ್ಲೂ ಅನೇಕ ನಿರ್ಣಯ ಕೈಗೊಳ್ಳಲಾಗುತ್ತಿದೆ. ಭಾರತ ಈ ಬಿಕ್ಕಟ್ಟನ್ನು ಅವಕಾಶವಾಗಿ ಬದಲಿಸಲು ಬದ್ಧತೆಯಿದೆ. ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮೋದಿ ಹೇಳಿದರು.

ಕಲ್ಲಿದ್ದಲು ವಲಯವನ್ನು ಲಾಕ್‌ಡೌನ್‌ನಿಂದ ಹೊರತರುತ್ತಿದ್ದೇವೆ. ಇದನ್ನು ನನಗಿಂತ ನಿಮಗೆ ಚೆನ್ನಾಗಿ ಗೊತ್ತಿದೆ. ಆರ್ಥಿಕತೆಯಲ್ಲಿ ವಿಶ್ವದಲ್ಲಿ ಭಾರತ 5ನೇ ಸ್ಥಾನದಲ್ಲಿದೆ. ಭಾರತ ಕಲ್ಲಿದ್ದಲು ಉತ್ಪಾದನೆಯಲ್ಲಿ 2ನೇ ಸ್ಥಾನದಲ್ಲಿದ್ದೇವೆ. ವಿಪರ್ಯಾಸವೆಂದರೆ ಕಲ್ಲಿದ್ದಲು ಆಮದಿನಲ್ಲೂ 2ನೇ ಸ್ಥಾನವಿದೆ. ಆರ್ಥಿಕತೆಯಲ್ಲೂ ಭಾರತ ದೊಡ್ಡ ರಾಷ್ಟ್ರವಾಗಿದೆ-ಮೋದಿ. ನಾವೇಕೆ ದೊಡ್ಡ ರಫ್ತು ಮಾಡುವ ರಾಷ್ಟ್ರವಾಗಬಾರದು? ಎಂದು ಸವಾಲಿನ ಪ್ರಶ್ನೆ ಎಸೆದರು.

Published On - 11:22 am, Thu, 18 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​