AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರ ಸಿಎಂಗಳ ಜತೆ ಮೋದಿ ಸಭೆ​, ಲಾಕ್​ಡೌನ್ ಭವಿಷ್ಯ ನಿರ್ಧಾರವಾಗುತ್ತಾ?

ಬೆಂಗಳೂರು: ಲಾಕ್​ಡೌನ್.. ಲಾಕ್​ಡೌನ್.. ಲಾಕ್​ಡೌನ್.. ಎರಡನೇ ಹಂತದ ಲಾಕ್​ಡೌನ್ ಜಾರಿಯಾಗಿ ಇಂದಿಗೆ 11 ದಿನಗಳಾಗಿವೆ. ಆದ್ರೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶಾದ್ಯಂತ 25 ಸಾವಿರಕ್ಕೂ ಅಧಿಕ ಮಂದಿಗೆ ಮಹಾಮಾರಿ ಅಟ್ಯಾಕ್ ಮಾಡಿದೆ. 826 ಮಂದಿಯನ್ನು ಡ್ರ್ಯಾಗನ್ ವೈರಸ್ ಬಲಿ ಪಡೆದಿದೆ. ಹೆಮ್ಮಾರಿ ಕೊರೊನಾ ತನ್ನ ಬಾಹುವನ್ನು ಕ್ಷಣಕ್ಷಣಕ್ಕೂ ಚಾಚುತ್ತಿದೆ. ಸಿಎಂಗಳ ಜತೆ ಸಭೆಯಲ್ಲಿ ಲಾಕ್​ಡೌನ್ ಭವಿಷ್ಯ ನಿರ್ಧಾರ? 2ನೇ ಹಂತದ ಲಾಕ್​ಡೌನ್ ಮೇ 3ಕ್ಕೆ ಅಂತ್ಯವಾಗಲಿದೆ. ಕೊರೊನಾ ಸೋಂಕು ತಡೆಗಟ್ಟೋ […]

ಸೋಮವಾರ ಸಿಎಂಗಳ ಜತೆ ಮೋದಿ ಸಭೆ​, ಲಾಕ್​ಡೌನ್ ಭವಿಷ್ಯ ನಿರ್ಧಾರವಾಗುತ್ತಾ?
ಸಾಧು ಶ್ರೀನಾಥ್​
|

Updated on:Apr 26, 2020 | 7:45 PM

Share

ಬೆಂಗಳೂರು: ಲಾಕ್​ಡೌನ್.. ಲಾಕ್​ಡೌನ್.. ಲಾಕ್​ಡೌನ್.. ಎರಡನೇ ಹಂತದ ಲಾಕ್​ಡೌನ್ ಜಾರಿಯಾಗಿ ಇಂದಿಗೆ 11 ದಿನಗಳಾಗಿವೆ. ಆದ್ರೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶಾದ್ಯಂತ 25 ಸಾವಿರಕ್ಕೂ ಅಧಿಕ ಮಂದಿಗೆ ಮಹಾಮಾರಿ ಅಟ್ಯಾಕ್ ಮಾಡಿದೆ. 826 ಮಂದಿಯನ್ನು ಡ್ರ್ಯಾಗನ್ ವೈರಸ್ ಬಲಿ ಪಡೆದಿದೆ. ಹೆಮ್ಮಾರಿ ಕೊರೊನಾ ತನ್ನ ಬಾಹುವನ್ನು ಕ್ಷಣಕ್ಷಣಕ್ಕೂ ಚಾಚುತ್ತಿದೆ.

ಸಿಎಂಗಳ ಜತೆ ಸಭೆಯಲ್ಲಿ ಲಾಕ್​ಡೌನ್ ಭವಿಷ್ಯ ನಿರ್ಧಾರ? 2ನೇ ಹಂತದ ಲಾಕ್​ಡೌನ್ ಮೇ 3ಕ್ಕೆ ಅಂತ್ಯವಾಗಲಿದೆ. ಕೊರೊನಾ ಸೋಂಕು ತಡೆಗಟ್ಟೋ ನಿಟ್ಟಿನಲ್ಲಿ ಲಾಕ್​ಡೌನ್ ವಿಧಿಸಲಾಗಿತ್ತು. ಇನ್ನು 8 ದಿನಗಳಲ್ಲಿ ಲಾಕ್​ಡೌನ್ ಅವಧಿ ಮುಗಿಯಲಿದೆ. ಹೀಗಾಗಿ ಮೇ 3ರ ನಂತರ ಏನು ಅನ್ನೋ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಲಾಕ್​ಡೌನ್ ಮತ್ತೆ ಮುಂದುವರಿಸ್ತಾರಾ ಅಥವಾ ಲಾಕ್​ಡೌನ್ ತೆರವು ಮಾಡ್ತಾರಾ ಅನ್ನೋ ಕುತೂಹಲ ಎಲ್ಲರಲ್ಲೂ ಮನೆಮಾಡಿದೆ.

ಲಾಕ್​ಡೌನ್ ಮುಂದುವರಿಸೋ ಬಗ್ಗೆ 6 ರಾಜ್ಯಗಳ ನಿರ್ಧಾರ: ಈ ನಡುವೆ ಕೆಲ ರಾಜ್ಯಗಳಲ್ಲಿ ಕೊರೊನಾ ಸೋಂಕು ಆತಂಕಕಾರಿಯಾಗಿ ಹರಡ್ತಿದ್ದು, ಕೆಲ ರಾಜ್ಯಗಳಲ್ಲಿ ಪರಿಸ್ಥಿತಿ ಕೈ ಮೀರೋ ಹಂತಕ್ಕೆ ತಲುಪಿದೆ. ಹೀಗಾಗಿ ಲಾಕ್​ಡೌನ್ ಮತ್ತಷ್ಟು ದಿನಗಳ ಕಾಲ ಮುಂದುವರಿಸೋ ಬಗ್ಗೆ ರಾಜ್ಯಗಳು ಇಂಗಿತ ವ್ಯಕ್ತಪಡಿಸಿವೆ. ದೆಹಲಿ ಬಳಿಕ ಒಡಿಶಾ, ಮಹಾರಾಷ್ಟ್ರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಪಂಜಾಬ್​ನಲ್ಲಿ ಲಾಕ್​ಡೌನ್ ಮುಂದುವರಿಸೋ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಮೇ 16ರವರೆಗೆ ಅಂದ್ರೆ ಮತ್ತೆ 13 ದಿನಗಳ ಕಾಲ ಈ ರಾಜ್ಯಗಳು ಲಾಕ್​ಡೌನ್ ಮುಂದುವರಿಸಲಿವೆ.

ಮಹಾಮಾರಿ ಹೊಡೆತಕ್ಕೆ ಕೊರೊನಾ ವಾರಿಯರ್ಸ್ ಬಲಿ: ಈ ನಡುವೆ ಮಹಾಮಾರಿ ಕೊರೊನಾಗೆ ಇಂದು ಇಬ್ಬರು ಕೊರೊನಾ ವಾರಿಯರ್ಸ್ ಬಲಿಯಾಗಿದ್ದಾರೆ. ಮುಂಬೈನಲ್ಲಿ 52 ವರ್ಷದ ಪೊಲೀಸ್ ಪೇದೆ ಕೊರೊನಾಗೆ ಪ್ರಾಣ ತೆತ್ತಿದ್ದಾರೆ. ಮತ್ತೊಂದೆಡೆ ಪಶ್ಚಿಮ ಬಂಗಾಳದಲ್ಲಿ ಕೊರೊನಾ ವಿರುದ್ಧ ಹೋರಾಡ್ತಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಕೂಡ ಸೋಂಕಿನಿಂದಾಗಿ ಬಲಿಯಾಗಿದ್ದಾರೆ.

ಒಟ್ನಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ನಾಳೆ ನಡೆಯಲಿರೋ ಸಿಎಂಗಳ ವಿಡಿಯೋ ಕಾನ್ಫರೆನ್ಸ್ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಕೆಲ ರಾಜ್ಯಗಳು ಮನವಿ ಮಾಡಿರೋದನ್ನು ನೋಡಿದ್ರೆ ಲಾಕ್​ಡೌನ್ ಎರಡು ವಾರಗಳ ಮಟ್ಟಿಗಾದ್ರೂ ಮುಂದುವರಿಸಿದ್ರೂ ಅಚ್ಚರಿ ಇಲ್ಲ.

https://www.facebook.com/Tv9Kannada/videos/1050024458732273/

Published On - 7:39 pm, Sun, 26 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ