AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಉತ್ತರಾಖಂಡ್​​ಗೆ ಪ್ರಧಾನಿ ಮೋದಿ ಭೇಟಿ; 35 ಪಿಎಸ್​ಎ ಆಮ್ಲಜನಕ ಸ್ಥಾವರಗಳ ಲೋಕಾರ್ಪಣೆ

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್​ಗೆ ಭೇಟಿ ನೀಡಿದ ಮೇಲೆ ಮತ್ತೆ ಆಗಮಿಸಿರಲಿಲ್ಲ. ಮುಂದಿನ ವರ್ಷ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ದೃಷ್ಟಿಯಿಂದ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದೆ.

ಇಂದು ಉತ್ತರಾಖಂಡ್​​ಗೆ ಪ್ರಧಾನಿ ಮೋದಿ ಭೇಟಿ; 35 ಪಿಎಸ್​ಎ ಆಮ್ಲಜನಕ ಸ್ಥಾವರಗಳ ಲೋಕಾರ್ಪಣೆ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on:Oct 07, 2021 | 9:50 AM

Share

ಪ್ರಧಾನಿ ನರೇಂದ್ರ ಮೋದಿ (PM Narendra Modi)ಯವರು ಇಂದು ಉತ್ತರಾಖಂಡ್​ಗೆ ಭೇಟಿ ನೀಡಲಿದ್ದು, ಪಿಎಂ ಕೇರ್ಸ್ ನಿಧಿ​ (PM CARES Fund) ಯಿಂದ ನಿರ್ಮಾಣ ಮಾಡಲಾಗಿರುವ 35 ಪ್ರೆಶರ್​ ಸ್ವಿಂಗ್ ಹೀರಿಕೊಳ್ಳುವಿಕೆಯ ಆಮ್ಲಜನಕ ಸ್ಥಾವರ (35 Pressure Swing Adsorption (PSA) oxygen plants)ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ರಿಶಿಕೇಶದಲ್ಲಿರುವ ಏಮ್ಸ್​​ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದೆ.  

ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ನಿನ್ನೆ ಟ್ವೀಟ್ ಮಾಡಿದ್ದರು. ನಾನು ನಾಳೆ (ಅಕ್ಟೋಬರ್​ 7) ದೇವಭೂಮಿ ಉತ್ತರಾಖಂಡ್​ಗೆ ತೆರಳುತ್ತಿದ್ದೇನೆ. ಅಲ್ಲಿ ನಡೆಯಲಿರುವ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ 35 ಪಿಎಸ್​ಎ ಆಕ್ಸಿಜನ್​ ಸ್ಥಾವರಗಳನ್ನು ಲೋಕಾರ್ಪಣೆ ಮಾಡಲಾಗುವುದು. ಇದೊಂದು ಪ್ರಮುಖ ಆರೋಗ್ಯ ಸೌಕರ್ಯವಾಗಿದ್ದು, ಹೆಚ್ಚಿನ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದಿದ್ದರು.

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್​ಗೆ ಭೇಟಿ ನೀಡಿದ ಮೇಲೆ ಮತ್ತೆ ಆಗಮಿಸಿರಲಿಲ್ಲ. ಮುಂದಿನ ವರ್ಷ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ದೃಷ್ಟಿಯಿಂದ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದೆ. ಅಂದಹಾಗೆ ಇಂದಿನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಜತೆ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಉತ್ತರಾಖಂಡ ರಾಜ್ಯಪಾಲ ಗುರ್ಮಿತ್​ ಸಿಂಗ್​, ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಕೂಡ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ; ಚಾಮರಾಜನಗರದಲ್ಲಿ ನೂತನ ಆಸ್ಪತ್ರೆ ಉದ್ಘಾಟನೆ

‘ಪುಷ್ಪ’ ಚಿತ್ರದ ಒಂದೇ ಹಾಡಿನಲ್ಲಿ ಡ್ಯಾನ್ಸ್​ ಮಾಡಲು 2 ಕೋಟಿ ರೂ. ಸಂಬಳ ಕೇಳಿದ ನೋರಾ ಫತೇಹಿ

Published On - 9:41 am, Thu, 7 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ