AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ ತಲುಪಿದ ಪ್ರಧಾನಿ ಮೋದಿ; ರಾಜ್​ಕೋಟ್​ನಲ್ಲಿ ಮಾರಿಷಸ್ ಪ್ರಧಾನಮಂತ್ರಿಗೆ ಭರ್ಜರಿ ಸ್ವಾಗತ, ರೋಡ್ ಶೋ​

ಏಪ್ರಿಲ್​ 19ರಂದು ಬೆಳಗ್ಗೆ 9.40ಕ್ಕೆ ಬನಸ್ಕಾಂತಾದ ಡಿಯೋಡರ್​​ನಲ್ಲಿರುವ ಬನಾಸ್​ ಡೇರಿ ಸಂಕುಲ್​​ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದಾರೆ. ಮಧ್ಯಾಹ್ನ 3.30ರ ಹೊತ್ತಿಗೆ ಜಮ್ನಗರ್​​ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸಾಂಪ್ರದಾಯಿಕ ಔಷಧ ಜಾಗತಿಕ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಗುಜರಾತ್​​ ತಲುಪಿದ ಪ್ರಧಾನಿ ಮೋದಿ; ರಾಜ್​ಕೋಟ್​ನಲ್ಲಿ ಮಾರಿಷಸ್ ಪ್ರಧಾನಮಂತ್ರಿಗೆ ಭರ್ಜರಿ ಸ್ವಾಗತ, ರೋಡ್ ಶೋ​
ನರೇಂದ್ರ ಮೋದಿ
TV9 Web
| Edited By: |

Updated on: Apr 18, 2022 | 9:46 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದಿನಿಂದ ಗುಜರಾತ್ ಪ್ರವಾಸದಲ್ಲಿದ್ದಾರೆ. ಇಂದು ಗುಜರಾತ್​ಗೆ ಹೋದ ಅವರು ಮೊದಲು ಗಾಂಧಿನಗರದಲ್ಲಿರುವ ಕಮಾಂಡ್​ ಮತ್ತು ಕಂಟ್ರೋಲ್ ಸೆಂಟರ್ ಫಾರ್ ಸ್ಕೂಲ್​​ಗೆ ಭೇಟಿ ಕೊಟ್ಟರು.  ಅಲ್ಲಿ ನಡೆಯುತ್ತಿದ್ದ ವಸ್ತುಪ್ರದರ್ಶನದಲ್ಲಿ ಪಾಲ್ಗೊಂಡು ಪರಿಶೀಲನೆ ನಡೆಸಿದ್ದಾರೆ. ಅದಕ್ಕೂ ಮೊದಲು ಪ್ರಧಾನಿ ಮೋದಿ ವೇದವ್ಯಾಸ ಮಹರ್ಷಿಗೆ ಪುಷ್ಪ ನಮನ ಸಲ್ಲಿಸಿ, ದೀಪ ಹಚ್ಚಿದರು.  ಪ್ರಧಾನಿ  ನರೇಂದ್ರ ಮೋದಿ ಏಪ್ರಿಲ್​ 20ರವರೆಗೆ ಗುಜರಾತ್​ನಲ್ಲಿಯೇ ಇರಲಿದ್ದಾರೆ.

ಏಪ್ರಿಲ್​ 19ರಂದು ಬೆಳಗ್ಗೆ 9.40ಕ್ಕೆ ಬನಸ್ಕಾಂತಾದ ಡಿಯೋಡರ್​​ನಲ್ಲಿರುವ ಬನಾಸ್​ ಡೇರಿ ಸಂಕುಲ್​​ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದಾರೆ. ಮಧ್ಯಾಹ್ನ 3.30ರ ಹೊತ್ತಿಗೆ ಜಮ್ನಗರ್​​ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸಾಂಪ್ರದಾಯಿಕ ಔಷಧ ಜಾಗತಿಕ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ  ಡಬ್ಲ್ಯೂಎಚ್​ಒ ಮಹಾನಿರ್ದೇಶಕ ಟೆಡ್ರೊಸ್ ಘೆಬ್ರೆಯೆಸಸ್ ಕೂಡ ಇರಲಿದ್ದಾರೆ.

ಏಪ್ರಿಲ್​ 20ರಂದು ಬೆಲಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ಗಾಂಧಿನಗರದಲ್ಲಿ ಜಾಗತಿಕ ಆಯುಷ್​ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆ ಉದ್ಘಾಟಿಸುವರು. ಅಂದು ಮಧ್ಯಾಹ್ನ 3.30ಕ್ಕೆ ದಾಹೋದ್‌ನಲ್ಲಿ ಆದಿಜಾತಿ ಮಹಾ ಸಮ್ಮೇಳನ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.  ಇಂದು ಮಾರಿಷಸ್​ ಪ್ರಧಾನಮಂತ್ರಿ ಪ್ರವಿಂದ್ ಕುಮಾರ್ ಜುಗ್ನಾಥ್​ ಕೂಡ ಗುಜರಾತ್​ಗೆ ಆಗಮಿಸಿದ್ದು, ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅಲ್ಲದೆ, ರಾಜ್​ಕೋಟ್​​ನಿಂದ ಎರಡು ಕಿಮೀ ದೂರದವರೆಗೆ ರೋಡ್​ ಶೋ ಮೂಲಕ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ:  ಪುನೀತ್ ಜತೆ ಪ್ರಶಾಂತ್​ ನೀಲ್ ‘ಆಹ್ವಾನ’ ಚಿತ್ರ ಮಾಡಬೇಕಿತ್ತು; ಸಿನಿಮಾ ಟೇಕ್​ ಆಫ್ ಆಗದಿರಲು ಕಾರಣ ಇಲ್ಲಿದೆ

Follow Us
Web contact
Web contact

TV9 Kannada

Read More
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!