AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ ತಲುಪಿದ ಪ್ರಧಾನಿ ಮೋದಿ; ರಾಜ್​ಕೋಟ್​ನಲ್ಲಿ ಮಾರಿಷಸ್ ಪ್ರಧಾನಮಂತ್ರಿಗೆ ಭರ್ಜರಿ ಸ್ವಾಗತ, ರೋಡ್ ಶೋ​

ಏಪ್ರಿಲ್​ 19ರಂದು ಬೆಳಗ್ಗೆ 9.40ಕ್ಕೆ ಬನಸ್ಕಾಂತಾದ ಡಿಯೋಡರ್​​ನಲ್ಲಿರುವ ಬನಾಸ್​ ಡೇರಿ ಸಂಕುಲ್​​ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದಾರೆ. ಮಧ್ಯಾಹ್ನ 3.30ರ ಹೊತ್ತಿಗೆ ಜಮ್ನಗರ್​​ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸಾಂಪ್ರದಾಯಿಕ ಔಷಧ ಜಾಗತಿಕ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಗುಜರಾತ್​​ ತಲುಪಿದ ಪ್ರಧಾನಿ ಮೋದಿ; ರಾಜ್​ಕೋಟ್​ನಲ್ಲಿ ಮಾರಿಷಸ್ ಪ್ರಧಾನಮಂತ್ರಿಗೆ ಭರ್ಜರಿ ಸ್ವಾಗತ, ರೋಡ್ ಶೋ​
ನರೇಂದ್ರ ಮೋದಿ
TV9 Web
| Edited By: |

Updated on: Apr 18, 2022 | 9:46 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದಿನಿಂದ ಗುಜರಾತ್ ಪ್ರವಾಸದಲ್ಲಿದ್ದಾರೆ. ಇಂದು ಗುಜರಾತ್​ಗೆ ಹೋದ ಅವರು ಮೊದಲು ಗಾಂಧಿನಗರದಲ್ಲಿರುವ ಕಮಾಂಡ್​ ಮತ್ತು ಕಂಟ್ರೋಲ್ ಸೆಂಟರ್ ಫಾರ್ ಸ್ಕೂಲ್​​ಗೆ ಭೇಟಿ ಕೊಟ್ಟರು.  ಅಲ್ಲಿ ನಡೆಯುತ್ತಿದ್ದ ವಸ್ತುಪ್ರದರ್ಶನದಲ್ಲಿ ಪಾಲ್ಗೊಂಡು ಪರಿಶೀಲನೆ ನಡೆಸಿದ್ದಾರೆ. ಅದಕ್ಕೂ ಮೊದಲು ಪ್ರಧಾನಿ ಮೋದಿ ವೇದವ್ಯಾಸ ಮಹರ್ಷಿಗೆ ಪುಷ್ಪ ನಮನ ಸಲ್ಲಿಸಿ, ದೀಪ ಹಚ್ಚಿದರು.  ಪ್ರಧಾನಿ  ನರೇಂದ್ರ ಮೋದಿ ಏಪ್ರಿಲ್​ 20ರವರೆಗೆ ಗುಜರಾತ್​ನಲ್ಲಿಯೇ ಇರಲಿದ್ದಾರೆ.

ಏಪ್ರಿಲ್​ 19ರಂದು ಬೆಳಗ್ಗೆ 9.40ಕ್ಕೆ ಬನಸ್ಕಾಂತಾದ ಡಿಯೋಡರ್​​ನಲ್ಲಿರುವ ಬನಾಸ್​ ಡೇರಿ ಸಂಕುಲ್​​ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದಾರೆ. ಮಧ್ಯಾಹ್ನ 3.30ರ ಹೊತ್ತಿಗೆ ಜಮ್ನಗರ್​​ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸಾಂಪ್ರದಾಯಿಕ ಔಷಧ ಜಾಗತಿಕ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ  ಡಬ್ಲ್ಯೂಎಚ್​ಒ ಮಹಾನಿರ್ದೇಶಕ ಟೆಡ್ರೊಸ್ ಘೆಬ್ರೆಯೆಸಸ್ ಕೂಡ ಇರಲಿದ್ದಾರೆ.

ಏಪ್ರಿಲ್​ 20ರಂದು ಬೆಲಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ಗಾಂಧಿನಗರದಲ್ಲಿ ಜಾಗತಿಕ ಆಯುಷ್​ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆ ಉದ್ಘಾಟಿಸುವರು. ಅಂದು ಮಧ್ಯಾಹ್ನ 3.30ಕ್ಕೆ ದಾಹೋದ್‌ನಲ್ಲಿ ಆದಿಜಾತಿ ಮಹಾ ಸಮ್ಮೇಳನ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.  ಇಂದು ಮಾರಿಷಸ್​ ಪ್ರಧಾನಮಂತ್ರಿ ಪ್ರವಿಂದ್ ಕುಮಾರ್ ಜುಗ್ನಾಥ್​ ಕೂಡ ಗುಜರಾತ್​ಗೆ ಆಗಮಿಸಿದ್ದು, ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅಲ್ಲದೆ, ರಾಜ್​ಕೋಟ್​​ನಿಂದ ಎರಡು ಕಿಮೀ ದೂರದವರೆಗೆ ರೋಡ್​ ಶೋ ಮೂಲಕ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ:  ಪುನೀತ್ ಜತೆ ಪ್ರಶಾಂತ್​ ನೀಲ್ ‘ಆಹ್ವಾನ’ ಚಿತ್ರ ಮಾಡಬೇಕಿತ್ತು; ಸಿನಿಮಾ ಟೇಕ್​ ಆಫ್ ಆಗದಿರಲು ಕಾರಣ ಇಲ್ಲಿದೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್