AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪ್ರಗತಿ ಪರಿಶೀಲನೆ: ಲಸಿಕೆ ತಯಾರಿಕಾ ತಂಡಗಳ ಪರಿಶ್ರಮಕ್ಕೆ ಪ್ರಧಾನಿ ಶ್ಲಾಘನೆ

ದೇಶದ ಮೂರು ನಗರಗಳಲ್ಲಿರುವ ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಲಸಿಕೆ ತಯಾರಿ ಮತ್ತು ವಿತರಣೆ ಕುರಿತು ತಜ್ಞರ ಬಳಿ ಪ್ರಧಾನಿ ಮಾಹಿತಿ ಪಡೆದರು.

ಕೊರೊನಾ ಲಸಿಕೆ ಪ್ರಗತಿ ಪರಿಶೀಲನೆ: ಲಸಿಕೆ ತಯಾರಿಕಾ ತಂಡಗಳ ಪರಿಶ್ರಮಕ್ಕೆ ಪ್ರಧಾನಿ ಶ್ಲಾಘನೆ
ಪುಣೆಯ ಸೆರಂ ಇನ್ಸ್​ಟಿಟ್ಯೂಟ್​ ಆಫ್ ಇಂಡಿಯಾಗೆ ಬೇಟಿ ನೀಡಿದ ಪ್ರಧಾನಿ ಮೋದಿ ಕೊರೊನಾ ಲಸಿಕೆ ತಯಾರಿಯ ಪ್ರಗತಿ ಪರಿಶೀಲಿಸಿದರು.
guruganesh bhat
| Edited By: |

Updated on: Nov 28, 2020 | 8:13 PM

Share

ಅಹಮದಾಬಾದ್/ ಹೈದರಾಬಾದ್/ಪುಣೆ: ದೇಶದ ಮೂರು ನಗರಗಳಲ್ಲಿರುವ ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಲಸಿಕೆ ತಯಾರಿ ಮತ್ತು ವಿತರಣೆ ಕುರಿತು ತಜ್ಞರ ಬಳಿ ಪ್ರಧಾನಿ ಮಾಹಿತಿ ಪಡೆದರು. ಅಹಮದಾಬಾದ್​ನ ಝೈಕೋವಿಡ್ ಲಸಿಕೆಗೆ ಪ್ರಧಾನಿ ಶ್ಲಾಘನೆ ಮೊದಲು ಅಹಮದಾಬಾದ್​ನಲ್ಲಿರುವ ಝೈಡಸ್ ಬಯೋಟೆಕ್ ಪಾರ್ಕ್​ಗೆ ತೆರಳಿದ ಪ್ರಧಾನಿ ಮೋದಿ, ಝೈಕೋವಿಡ್ ಲಸಿಕೆ ಕುರಿತು ಸಂಸ್ಥೆಯ ತಜ್ಞರೊಂದಿಗೆ ಸಮಾಲೋಚಿಸಿದರು. ಎರಡನೇ ಹಂತದ ಪ್ರಯೋಗದ ತಯಾರಿಯಲ್ಲಿರುವ ಝೈಡಸ್ ಬಯೋಪಾರ್ಕ್ ಸಂಸ್ಥೆಯ ಲಸಿಕೆ ಕುರಿತು ತಜ್ಞರು ಪ್ರಧಾನಿ ಬಳಿ ವಿಶ್ವಾಸ ವ್ಯಕ್ತಪಡಿಸಿದರು. ನಂತರ ಟ್ವೀಟ್ ಮೂಲಕ, ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ DNA ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ. ಲಸಿಕೆ ತಯಾರಿಕೆ ಹಿಂದೆ ಶ್ರಮಿಸುತ್ತಿರುವ ತಂಡವನ್ನು ಶ್ಲಾಘಿಸುತ್ತೇನೆ. ಭಾರತ ಸರ್ಕಾರ ಈ ತಂಡಕ್ಕೆ ಅಗತ್ಯ ಬೆಂಬಲ ನೀಡಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಹೈದರಾಬಾದ್​ನಲ್ಲೇನಾಯ್ತು? ಮಧ್ಯಾಹ್ನ 1.30ಕ್ಕೆ ಹೈದರಾಬಾದ್ ಸಮೀಪದ ಭಾರತ್ ಬಯೋಟೆಕ್​ ಲಸಿಕೆ ಉತ್ಪಾದನಾ ಕಂಪನಿಗೆ ತಲುಪಿದ ಪ್ರಧಾನಿ ಮೋದಿ ಸಂಸ್ಥೆಯ ತಜ್ಞರ ಜೊತೆ ಚರ್ಚೆ ನಡೆಸಿದರು. ರಾಷ್ಟ್ರೀಯ ವೈರಾಣು ಅಧ್ಯಯನ ಸಂಸ್ಥೆ ಮತ್ತು ICMR ಸಹಯೋಗದಲ್ಲಿ ಉತ್ಪಾದನೆಯಾಗಿ ಮೂರನೇ ಹಂತದ ಪ್ರಯೋಗದಲ್ಲಿರುವ ಕೋವ್ಯಾಕ್ಸಿನ್ ಲಸಿಕೆಯ ಪ್ರಗತಿ ಕುರಿತು ಹರ್ಷ ವ್ಯಕ್ತಪಡಿಸಿದರು.

ಆಕ್ಸ್​ಫರ್ಡ್ ವಿವಿ ಲಸಿಕೆ ಪರಿಶೀಲನೆ ಪುಣೆಯಿಂದ 17 ಕಿ.ಮೀ ದೂರದಲ್ಲಿರುವ ಸೆರಂ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಹೆಲಿಕಾಪ್ಟರ್​ನಲ್ಲಿ ಬಂದಿಳಿದ ಪ್ರಧಾನಿ ಮೋದಿ, ಆಸ್ಟ್ರಾಜೆನೆಕಾ ಮತ್ತು ಆಕ್ಸ್​ಫರ್ಡ್​ ವಿವಿ ಸಹಯೋಗದಲ್ಲಿ ರೂಪಿಸಲಾದ ಲಸಿಕೆ ಲಭ್ಯತೆಯ ಕುರಿತು ಸಮಾಲೋಚನೆ ನಡೆಸಿದರು. ನಂತರ, ಸಂಜೆ 6 ಗಂಟೆಗೆ ದೆಹಲಿಯತ್ತ ಮುಖಮಾಡಿದರು. ಲಸಿಕೆಯ ತಯಾರಿ, ಬಿಡುಗಡೆ ಮತ್ತು ಹಂಚಿಕೆಯ ಕುರಿತು ಯೋಜನೆ ರೂಪಿಸಲು ಪ್ರಧಾನಿ ಮೋದಿಗೆ ಇಂದಿನ  ಭೇಟಿ ನೆರವಾಗಲಿದೆ ಎಂಬ ಮಾಹಿತಿ ದೊರೆತಿದೆ.

ಮೋದಿ ‘ಲಸಿಕೆ ಪ್ರವಾಸ’ಕ್ಕೆ ಕಾಂಗ್ರೆಸ್​ ಟೀಕೆ ಪ್ರಧಾನಿ ಕೈಗೊಂಡ ಇಂದಿನ ಭೇಟಿಯನ್ನು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಟೀಕಿಸಿದ್ದಾರೆ. ಈ ಭೇಟಿ ಪ್ರಧಾನಿಯ ಇವೆಂಟ್ ಮ್ಯಾನೇಜ್​ಮೆಂಟ್​ನ ಭಾಗವೇ ಹೊರತು, ನೈಜ ಕಾಳಜಿ ಹೊಂದಿಲ್ಲ ಎಂದು ಟೀಕಿಸಿದ್ದಾರೆ.

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!