ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿ ಧರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ಈ ಬಾರಿ ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಾರೆ. ಟೋಪಿಯ ಮೇಲೆ ಉತ್ತರಾಖಂಡ್​ ರಾಜ್ಯದ ಹೂವು ಬ್ರಹ್ಮಕಮಲವನ್ನು ಕಾಣಬಹುದು. ಈ ಹಿಂದೆ ಉತ್ತರಾಖಂಡ್​ನ ಕೇದಾರನಾಥಕ್ಕೆ ಭೇಟಿ ನೀಡಿದ ವೇಳೆ ಬ್ರಹ್ಮಕಮಲವನ್ನು ಪೂಜೆಗೆ ಬಳಸಿದ್ದರು

ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿ ಧರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
| Updated By: Digi Tech Desk

Updated on:Jan 26, 2022 | 12:59 PM

ದೇಶದೆಲ್ಲೆಡೆ 73ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆಯುತ್ತಿರುವ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರತೀ ಬಾರಿಯಂತೆ ಈ ಬಾರಿಯೂ ವಿಭಿನ್ನ ಉಡುಗೆಯನ್ನು ಧರಿಸಿ ಪ್ರಧಾನಿ ಮೋದಿ ಅವರು ರಾಷ್ಟ್ರದ ಹಬ್ಬದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ಈ ಬಾರಿ ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಾರೆ. ಟೋಪಿಯ ಮೇಲೆ ಉತ್ತರಾಖಂಡ್​ ರಾಜ್ಯದ ಹೂವು ಬ್ರಹ್ಮಕಮಲವನ್ನು ಕಾಣಬಹುದು. ಈ ಹಿಂದೆ ಉತ್ತರಾಖಂಡ್​​ನ ಕೇದಾರನಾಥಕ್ಕೆ ಭೇಟಿ ನೀಡಿದ ವೇಳೆ ಬ್ರಹ್ಮಕಮಲವನ್ನು ಪೂಜೆಗೆ ಬಳಸಿದ್ದರು. ಇದೀಗ ಗಣರಾಜ್ಯೋತ್ಸವ ಕಾರ್ಯಕ್ರಮದ ಉಡುಗೆಯಲ್ಲಿಯೂ ಬ್ರಹ್ಮಕಮಲ ಹೂವು ಕಾಣಿಸುತ್ತಿದೆ. ಜತೆಗೆ ಪ್ರಧಾನಿ ಮೋದಿ ಇಂದು ಒಂದು ಶಾಲನ್ನು ಧರಿಸಿದ್ದಾರೆ. ಈ ಶಾಲು ಮಣಿಪುರದ್ದಾಗಿದೆ.

ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಮಾಸ್ಕ್​ ಕಡ್ಡಾಯವಾಗಿದೆ. ಹೀಗಾಗಿ ಪ್ರಧಾನಿ ಕೂಡ ಮಾಸ್ಕ್​ ಧರಿಸಿದ್ದಾರೆ. ಇದರಲ್ಲೂ ಒಂದು ವಿಶೇಷತೆ ಇದೆ. ಪ್ರಧಾನಿ ಮೋದಿ ಧರಿಸಿದ ಮಾಸ್ಕ್​ ಅನ್ನು ಮಣಿಪುರದ ಹ್ಯಾಂಡಲೂಮ್​ ಬಟ್ಟೆ ತಯಾರಿಸುವ ಅಂಗಡಿಯಲ್ಲಿ ತಯಾರಿಸಲಾಗಿದೆ. ಇದನ್ನು ಗುಮ್ಚಾ ಮಾಸ್ಕ್​ ಎಂದು ಕರೆಯುತ್ತಾರೆ.  ಇದರ ಜತೆಗೆ ಕಪ್ಪು ಮತ್ತು ಬಿಳಿಯ ಬಣ್ಣದ ದಾರದಲ್ಲಿ ನೇಯ್ದ ಉಡುಗೆಯನ್ನು ಧರಿಸಿದ್ದು, ಇದು ಮಣಿಪುರದ ಮೆಟೈ ಬುಡಕಟ್ಟು ಜನಾಂಗ ತಯಾರಿಸುವ ವಿಶೇಷ ಉಡುಗೆಯಾಗಿದೆ. ಈ ಬಾರಿಯ ಪ್ರಧಾನಿ ಮೋದಿ ಉಡುಗೆ ಪಂಚರಾಜ್ಯ ಚುನಾವಣೆಯನ್ನು ಪ್ರತಿನಿಧಿಸುವಂತಿದೆ. ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಕ್ಕಾಗಿ ಉತ್ತರಾಖಂಡ್​ ರಾಜ್ಯದ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಕಳೆದ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾಮ್ನಗರ್ ಕುಟುಂಬ ನೀಡಿದ ಹಲಾರಿ ಪಾಗ್​ ಟೋಪಿಯನ್ನು ಧರಿಸಿದಿದ್ದರು. ಜತಗೆ ಬೂದು ಬಣ್ಣದ ಜಾಕೆಟ್​ ಮತ್ತು ಬಳಿಯ ಬಣ್ಣದ ಶಾಲನ್ನು ಧರಿಸಿದ್ದರು.

ಇಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ಬಳಿಕ  ರಕ್ಷಣಾ ಸಚಿವ ರಾಜನಾಥ ಸಿಂಗ್​ ಅವರೊಂದಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಸೈನಿಕರಿಗೆ ನಮನ ಸಲ್ಲಿಸಿದರು.

ಇದನ್ನೂ ಓದಿ: Republic Day 2022: ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್​ ಶಾ

Published On - 12:40 pm, Wed, 26 January 22

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ