AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿ ಧರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ಈ ಬಾರಿ ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಾರೆ. ಟೋಪಿಯ ಮೇಲೆ ಉತ್ತರಾಖಂಡ್​ ರಾಜ್ಯದ ಹೂವು ಬ್ರಹ್ಮಕಮಲವನ್ನು ಕಾಣಬಹುದು. ಈ ಹಿಂದೆ ಉತ್ತರಾಖಂಡ್​ನ ಕೇದಾರನಾಥಕ್ಕೆ ಭೇಟಿ ನೀಡಿದ ವೇಳೆ ಬ್ರಹ್ಮಕಮಲವನ್ನು ಪೂಜೆಗೆ ಬಳಸಿದ್ದರು

ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿ ಧರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jan 26, 2022 | 12:59 PM

Share

ದೇಶದೆಲ್ಲೆಡೆ 73ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆಯುತ್ತಿರುವ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರತೀ ಬಾರಿಯಂತೆ ಈ ಬಾರಿಯೂ ವಿಭಿನ್ನ ಉಡುಗೆಯನ್ನು ಧರಿಸಿ ಪ್ರಧಾನಿ ಮೋದಿ ಅವರು ರಾಷ್ಟ್ರದ ಹಬ್ಬದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ಈ ಬಾರಿ ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಾರೆ. ಟೋಪಿಯ ಮೇಲೆ ಉತ್ತರಾಖಂಡ್​ ರಾಜ್ಯದ ಹೂವು ಬ್ರಹ್ಮಕಮಲವನ್ನು ಕಾಣಬಹುದು. ಈ ಹಿಂದೆ ಉತ್ತರಾಖಂಡ್​​ನ ಕೇದಾರನಾಥಕ್ಕೆ ಭೇಟಿ ನೀಡಿದ ವೇಳೆ ಬ್ರಹ್ಮಕಮಲವನ್ನು ಪೂಜೆಗೆ ಬಳಸಿದ್ದರು. ಇದೀಗ ಗಣರಾಜ್ಯೋತ್ಸವ ಕಾರ್ಯಕ್ರಮದ ಉಡುಗೆಯಲ್ಲಿಯೂ ಬ್ರಹ್ಮಕಮಲ ಹೂವು ಕಾಣಿಸುತ್ತಿದೆ. ಜತೆಗೆ ಪ್ರಧಾನಿ ಮೋದಿ ಇಂದು ಒಂದು ಶಾಲನ್ನು ಧರಿಸಿದ್ದಾರೆ. ಈ ಶಾಲು ಮಣಿಪುರದ್ದಾಗಿದೆ.

ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಮಾಸ್ಕ್​ ಕಡ್ಡಾಯವಾಗಿದೆ. ಹೀಗಾಗಿ ಪ್ರಧಾನಿ ಕೂಡ ಮಾಸ್ಕ್​ ಧರಿಸಿದ್ದಾರೆ. ಇದರಲ್ಲೂ ಒಂದು ವಿಶೇಷತೆ ಇದೆ. ಪ್ರಧಾನಿ ಮೋದಿ ಧರಿಸಿದ ಮಾಸ್ಕ್​ ಅನ್ನು ಮಣಿಪುರದ ಹ್ಯಾಂಡಲೂಮ್​ ಬಟ್ಟೆ ತಯಾರಿಸುವ ಅಂಗಡಿಯಲ್ಲಿ ತಯಾರಿಸಲಾಗಿದೆ. ಇದನ್ನು ಗುಮ್ಚಾ ಮಾಸ್ಕ್​ ಎಂದು ಕರೆಯುತ್ತಾರೆ.  ಇದರ ಜತೆಗೆ ಕಪ್ಪು ಮತ್ತು ಬಿಳಿಯ ಬಣ್ಣದ ದಾರದಲ್ಲಿ ನೇಯ್ದ ಉಡುಗೆಯನ್ನು ಧರಿಸಿದ್ದು, ಇದು ಮಣಿಪುರದ ಮೆಟೈ ಬುಡಕಟ್ಟು ಜನಾಂಗ ತಯಾರಿಸುವ ವಿಶೇಷ ಉಡುಗೆಯಾಗಿದೆ. ಈ ಬಾರಿಯ ಪ್ರಧಾನಿ ಮೋದಿ ಉಡುಗೆ ಪಂಚರಾಜ್ಯ ಚುನಾವಣೆಯನ್ನು ಪ್ರತಿನಿಧಿಸುವಂತಿದೆ. ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಕ್ಕಾಗಿ ಉತ್ತರಾಖಂಡ್​ ರಾಜ್ಯದ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಕಳೆದ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾಮ್ನಗರ್ ಕುಟುಂಬ ನೀಡಿದ ಹಲಾರಿ ಪಾಗ್​ ಟೋಪಿಯನ್ನು ಧರಿಸಿದಿದ್ದರು. ಜತಗೆ ಬೂದು ಬಣ್ಣದ ಜಾಕೆಟ್​ ಮತ್ತು ಬಳಿಯ ಬಣ್ಣದ ಶಾಲನ್ನು ಧರಿಸಿದ್ದರು.

ಇಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ಬಳಿಕ  ರಕ್ಷಣಾ ಸಚಿವ ರಾಜನಾಥ ಸಿಂಗ್​ ಅವರೊಂದಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಸೈನಿಕರಿಗೆ ನಮನ ಸಲ್ಲಿಸಿದರು.

ಇದನ್ನೂ ಓದಿ: Republic Day 2022: ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್​ ಶಾ

Published On - 12:40 pm, Wed, 26 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ