AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿ ಧರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ಈ ಬಾರಿ ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಾರೆ. ಟೋಪಿಯ ಮೇಲೆ ಉತ್ತರಾಖಂಡ್​ ರಾಜ್ಯದ ಹೂವು ಬ್ರಹ್ಮಕಮಲವನ್ನು ಕಾಣಬಹುದು. ಈ ಹಿಂದೆ ಉತ್ತರಾಖಂಡ್​ನ ಕೇದಾರನಾಥಕ್ಕೆ ಭೇಟಿ ನೀಡಿದ ವೇಳೆ ಬ್ರಹ್ಮಕಮಲವನ್ನು ಪೂಜೆಗೆ ಬಳಸಿದ್ದರು

ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿ ಧರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jan 26, 2022 | 12:59 PM

Share

ದೇಶದೆಲ್ಲೆಡೆ 73ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆಯುತ್ತಿರುವ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರತೀ ಬಾರಿಯಂತೆ ಈ ಬಾರಿಯೂ ವಿಭಿನ್ನ ಉಡುಗೆಯನ್ನು ಧರಿಸಿ ಪ್ರಧಾನಿ ಮೋದಿ ಅವರು ರಾಷ್ಟ್ರದ ಹಬ್ಬದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ಈ ಬಾರಿ ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಾರೆ. ಟೋಪಿಯ ಮೇಲೆ ಉತ್ತರಾಖಂಡ್​ ರಾಜ್ಯದ ಹೂವು ಬ್ರಹ್ಮಕಮಲವನ್ನು ಕಾಣಬಹುದು. ಈ ಹಿಂದೆ ಉತ್ತರಾಖಂಡ್​​ನ ಕೇದಾರನಾಥಕ್ಕೆ ಭೇಟಿ ನೀಡಿದ ವೇಳೆ ಬ್ರಹ್ಮಕಮಲವನ್ನು ಪೂಜೆಗೆ ಬಳಸಿದ್ದರು. ಇದೀಗ ಗಣರಾಜ್ಯೋತ್ಸವ ಕಾರ್ಯಕ್ರಮದ ಉಡುಗೆಯಲ್ಲಿಯೂ ಬ್ರಹ್ಮಕಮಲ ಹೂವು ಕಾಣಿಸುತ್ತಿದೆ. ಜತೆಗೆ ಪ್ರಧಾನಿ ಮೋದಿ ಇಂದು ಒಂದು ಶಾಲನ್ನು ಧರಿಸಿದ್ದಾರೆ. ಈ ಶಾಲು ಮಣಿಪುರದ್ದಾಗಿದೆ.

ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಮಾಸ್ಕ್​ ಕಡ್ಡಾಯವಾಗಿದೆ. ಹೀಗಾಗಿ ಪ್ರಧಾನಿ ಕೂಡ ಮಾಸ್ಕ್​ ಧರಿಸಿದ್ದಾರೆ. ಇದರಲ್ಲೂ ಒಂದು ವಿಶೇಷತೆ ಇದೆ. ಪ್ರಧಾನಿ ಮೋದಿ ಧರಿಸಿದ ಮಾಸ್ಕ್​ ಅನ್ನು ಮಣಿಪುರದ ಹ್ಯಾಂಡಲೂಮ್​ ಬಟ್ಟೆ ತಯಾರಿಸುವ ಅಂಗಡಿಯಲ್ಲಿ ತಯಾರಿಸಲಾಗಿದೆ. ಇದನ್ನು ಗುಮ್ಚಾ ಮಾಸ್ಕ್​ ಎಂದು ಕರೆಯುತ್ತಾರೆ.  ಇದರ ಜತೆಗೆ ಕಪ್ಪು ಮತ್ತು ಬಿಳಿಯ ಬಣ್ಣದ ದಾರದಲ್ಲಿ ನೇಯ್ದ ಉಡುಗೆಯನ್ನು ಧರಿಸಿದ್ದು, ಇದು ಮಣಿಪುರದ ಮೆಟೈ ಬುಡಕಟ್ಟು ಜನಾಂಗ ತಯಾರಿಸುವ ವಿಶೇಷ ಉಡುಗೆಯಾಗಿದೆ. ಈ ಬಾರಿಯ ಪ್ರಧಾನಿ ಮೋದಿ ಉಡುಗೆ ಪಂಚರಾಜ್ಯ ಚುನಾವಣೆಯನ್ನು ಪ್ರತಿನಿಧಿಸುವಂತಿದೆ. ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಕ್ಕಾಗಿ ಉತ್ತರಾಖಂಡ್​ ರಾಜ್ಯದ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಕಳೆದ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾಮ್ನಗರ್ ಕುಟುಂಬ ನೀಡಿದ ಹಲಾರಿ ಪಾಗ್​ ಟೋಪಿಯನ್ನು ಧರಿಸಿದಿದ್ದರು. ಜತಗೆ ಬೂದು ಬಣ್ಣದ ಜಾಕೆಟ್​ ಮತ್ತು ಬಳಿಯ ಬಣ್ಣದ ಶಾಲನ್ನು ಧರಿಸಿದ್ದರು.

ಇಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ಬಳಿಕ  ರಕ್ಷಣಾ ಸಚಿವ ರಾಜನಾಥ ಸಿಂಗ್​ ಅವರೊಂದಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಸೈನಿಕರಿಗೆ ನಮನ ಸಲ್ಲಿಸಿದರು.

ಇದನ್ನೂ ಓದಿ: Republic Day 2022: ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್​ ಶಾ

Published On - 12:40 pm, Wed, 26 January 22

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು