Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿ ಧರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ಈ ಬಾರಿ ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಾರೆ. ಟೋಪಿಯ ಮೇಲೆ ಉತ್ತರಾಖಂಡ್​ ರಾಜ್ಯದ ಹೂವು ಬ್ರಹ್ಮಕಮಲವನ್ನು ಕಾಣಬಹುದು. ಈ ಹಿಂದೆ ಉತ್ತರಾಖಂಡ್​ನ ಕೇದಾರನಾಥಕ್ಕೆ ಭೇಟಿ ನೀಡಿದ ವೇಳೆ ಬ್ರಹ್ಮಕಮಲವನ್ನು ಪೂಜೆಗೆ ಬಳಸಿದ್ದರು

ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿ ಧರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Digi Tech Desk

Updated on:Jan 26, 2022 | 12:59 PM

ದೇಶದೆಲ್ಲೆಡೆ 73ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆಯುತ್ತಿರುವ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರತೀ ಬಾರಿಯಂತೆ ಈ ಬಾರಿಯೂ ವಿಭಿನ್ನ ಉಡುಗೆಯನ್ನು ಧರಿಸಿ ಪ್ರಧಾನಿ ಮೋದಿ ಅವರು ರಾಷ್ಟ್ರದ ಹಬ್ಬದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ಈ ಬಾರಿ ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಾರೆ. ಟೋಪಿಯ ಮೇಲೆ ಉತ್ತರಾಖಂಡ್​ ರಾಜ್ಯದ ಹೂವು ಬ್ರಹ್ಮಕಮಲವನ್ನು ಕಾಣಬಹುದು. ಈ ಹಿಂದೆ ಉತ್ತರಾಖಂಡ್​​ನ ಕೇದಾರನಾಥಕ್ಕೆ ಭೇಟಿ ನೀಡಿದ ವೇಳೆ ಬ್ರಹ್ಮಕಮಲವನ್ನು ಪೂಜೆಗೆ ಬಳಸಿದ್ದರು. ಇದೀಗ ಗಣರಾಜ್ಯೋತ್ಸವ ಕಾರ್ಯಕ್ರಮದ ಉಡುಗೆಯಲ್ಲಿಯೂ ಬ್ರಹ್ಮಕಮಲ ಹೂವು ಕಾಣಿಸುತ್ತಿದೆ. ಜತೆಗೆ ಪ್ರಧಾನಿ ಮೋದಿ ಇಂದು ಒಂದು ಶಾಲನ್ನು ಧರಿಸಿದ್ದಾರೆ. ಈ ಶಾಲು ಮಣಿಪುರದ್ದಾಗಿದೆ.

ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಮಾಸ್ಕ್​ ಕಡ್ಡಾಯವಾಗಿದೆ. ಹೀಗಾಗಿ ಪ್ರಧಾನಿ ಕೂಡ ಮಾಸ್ಕ್​ ಧರಿಸಿದ್ದಾರೆ. ಇದರಲ್ಲೂ ಒಂದು ವಿಶೇಷತೆ ಇದೆ. ಪ್ರಧಾನಿ ಮೋದಿ ಧರಿಸಿದ ಮಾಸ್ಕ್​ ಅನ್ನು ಮಣಿಪುರದ ಹ್ಯಾಂಡಲೂಮ್​ ಬಟ್ಟೆ ತಯಾರಿಸುವ ಅಂಗಡಿಯಲ್ಲಿ ತಯಾರಿಸಲಾಗಿದೆ. ಇದನ್ನು ಗುಮ್ಚಾ ಮಾಸ್ಕ್​ ಎಂದು ಕರೆಯುತ್ತಾರೆ.  ಇದರ ಜತೆಗೆ ಕಪ್ಪು ಮತ್ತು ಬಿಳಿಯ ಬಣ್ಣದ ದಾರದಲ್ಲಿ ನೇಯ್ದ ಉಡುಗೆಯನ್ನು ಧರಿಸಿದ್ದು, ಇದು ಮಣಿಪುರದ ಮೆಟೈ ಬುಡಕಟ್ಟು ಜನಾಂಗ ತಯಾರಿಸುವ ವಿಶೇಷ ಉಡುಗೆಯಾಗಿದೆ. ಈ ಬಾರಿಯ ಪ್ರಧಾನಿ ಮೋದಿ ಉಡುಗೆ ಪಂಚರಾಜ್ಯ ಚುನಾವಣೆಯನ್ನು ಪ್ರತಿನಿಧಿಸುವಂತಿದೆ. ಉತ್ತರಾಖಂಡ್​ನ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ್ದಕ್ಕಾಗಿ ಉತ್ತರಾಖಂಡ್​ ರಾಜ್ಯದ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಕಳೆದ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾಮ್ನಗರ್ ಕುಟುಂಬ ನೀಡಿದ ಹಲಾರಿ ಪಾಗ್​ ಟೋಪಿಯನ್ನು ಧರಿಸಿದಿದ್ದರು. ಜತಗೆ ಬೂದು ಬಣ್ಣದ ಜಾಕೆಟ್​ ಮತ್ತು ಬಳಿಯ ಬಣ್ಣದ ಶಾಲನ್ನು ಧರಿಸಿದ್ದರು.

ಇಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ಬಳಿಕ  ರಕ್ಷಣಾ ಸಚಿವ ರಾಜನಾಥ ಸಿಂಗ್​ ಅವರೊಂದಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಸೈನಿಕರಿಗೆ ನಮನ ಸಲ್ಲಿಸಿದರು.

ಇದನ್ನೂ ಓದಿ: Republic Day 2022: ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್​ ಶಾ

Published On - 12:40 pm, Wed, 26 January 22

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ