AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Speech: ಇಂದು ಬೆಳಗ್ಗೆ 9ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ

PM Modi Address the Nation: ಇಂದು (ನವೆಂಬರ್ 19) ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದಿನ ಅವರ ಕಾರ್ಯಾಲಾಪಗಳ ಮಾಹಿತಿ ಇಲ್ಲಿದೆ.

Narendra Modi Speech: ಇಂದು ಬೆಳಗ್ಗೆ 9ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Nov 19, 2021 | 8:54 AM

Share

ಇಂದು (ನವೆಂಬರ್ 19) ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದ್ದು, ಮಾಹಿತಿ ಹಂಚಿಕೊಂಡಿದೆ. ಪ್ರಧಾನ ಮಂತ್ರಿಗಳ ಇಂದಿನ ಕಾರ್ಯಾಲಾಪಗಳ ಪಟ್ಟಿ ಬಿಡುಗಡೆ ಮಾಡಿರುವ ಪಿಎಮ್​ಒ, ಉತ್ತರ ಪ್ರದೇಶ ಪ್ರವಾಸದ ಮಾಹಿತಿ ಹಂಚಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸಲಿರುವ ಪ್ರಧಾನಿ, ನಂತರ ಝಾನ್ಸಿಯಲ್ಲಿ ‘ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ​’ನಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಅವರು ಭಾರತದಲ್ಲೇ ತಯಾರಿಸಲಾದ ರಕ್ಷಣಾ ಸಾಮಗ್ರಿಗಳನ್ನು ಸೇನೆಗೆ ಹಸ್ತಾಂತರಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮುನ್ನ ಪ್ರಧಾನಿ ಇಂದು ಬೆಳಗ್ಗೆ 9ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಗುರು ನಾನಕ್ ಅವರ ಜಯಂತಿಯ ಕುರಿತೂ ತಿಳಿಸಲಾಗಿದೆ.

ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಇಂದು ಝಾನ್ಸಿಯಲ್ಲಿ ಸಶಸ್ತ್ರ ಪಡೆಗಳಿಗೆ ಭಾರತದಲ್ಲೇ ತಯಾರಾದ ಹೆಲಿಕಾಫ್ಟರ್, ಡ್ರೋನ್​ಗಳನ್ನು ಹಸ್ತಾಂತರಿಸಲಿರುವ ಪ್ರಧಾನಿ: ಸ್ವಾತಂತ್ರ್ಯ ಬಂದು 75 ವರ್ಷಗಳಾದ ಹಿನ್ನೆಲೆಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ್’ ಅಭಿಯಾನವನ್ನು ಸರ್ಕಾರ ನಡೆಸುತ್ತಿದೆ. ಇದರ ಅಂಗವಾಗಿ ಝಾನ್ಸಿಯಲ್ಲಿ ನಡೆಯುತ್ತಿರುವ ‘ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ’ದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ವೇಳೆ ಅವರು, ಹಿಂದೂಸ್ತಾನ್ ಏರೊನಾಟಿಕ್ಸ್​ ಲಿಮಿಟೆಡ್ (ಎಚ್​ಎಎಲ್) ಅಭಿವೃದ್ಧಿಪಡಿಸಿರುವ ಯುದ್ಧ ಹೆಲಿಕಾಪ್ಟರ್​ಗಳನ್ನು ವಾಯುಪಡೆ ಮುಖ್ಯಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಇದರೊಂದಿಗೆ ಭಾರತದ ನವೋದ್ಯಮ ಅಭಿವೃದ್ಧಿಪಡಿಸಿರುವ ಡ್ರೋಣ್ ಮತ್ತು ಮಾನವ ರಹಿತ ವೈಮಾನಿಕ ಉಪಕರಣಗಳನ್ನು ಸೇನಾ ಮುಖ್ಯಸ್ಥರಿಗೆ ಹಸ್ತಾಂತರಿಸಲಿದ್ದಾರೆ. ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ಎಲೆಕ್ಟ್ರಾನಿಕ್ ಯುದ್ಧೋಪಕರಣಗಳನ್ನು ನೌಕಾಪಡೆ ಮುಖ್ಯಸ್ಥರಿಗೆ ಹಸ್ತಾಂತರಿಸಲಿದ್ದಾರೆ.

ಇದನ್ನೂ ಓದಿ:

Sydney Dialogue: ಕ್ರಿಪ್ಟೋಕರೆನ್ಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ ಮೋದಿ; ದುರ್ಬಳಕೆ ತಡೆಯಲು ಒಗ್ಗಟ್ಟಾಗುವಂತೆ ಪ್ರಜಾಪ್ರಭುತ್ವ ರಾಷ್ಟ್ರಗಳಿಗೆ ಕರೆ

Tirupathi: ಭಾರಿ ಮಳೆಯಿಂದ ಟಿಟಿಡಿಯ 2 ಘಾಟ್​ಗಳು ಕ್ಲೋಸ್; ಮನೆಗಳಿಂದ ಹೊರಗೆ ಬಾರದಂತೆ ತಿರುಪತಿ ಜನರಿಗೆ ಸೂಚನೆ

Published On - 8:32 am, Fri, 19 November 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ