AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ

All Party Meeting: 17ನೇ ಲೋಕಸಭೆಯ 7ನೇ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಸರ್ಕಾರಿ ಕೆಲಸಗಳ ಅಗತ್ಯತೆಗಳಿಗೆ ಒಳಪಟ್ಟು ಇರಲಿದ್ದು, ಡಿಸೆಂಬರ್​ 23ರಂದು ಮುಕ್ತಾಯಗೊಳ್ಳಲಿದೆ.

ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ
ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Nov 22, 2021 | 4:27 PM

ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಲಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 28 (ಭಾನುವಾರ) ಸರ್ವಪಕ್ಷಗಳ ಸಭೆ (All-Party Meet) ನಡೆಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಪಾರ್ಲಿಮೆಂಟ್​ನ ಚಳಿಗಾಲದ ಅಧಿವೇಶನ ನವೆಂಬರ್​ 29ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್​ 23ಕ್ಕೆ ಮುಕ್ತಾಯವಾಗಲಿದೆ. ಅದಕ್ಕೂ ಮೊದಲು ಪ್ರಧಾನಮಂತ್ರಿ ಸರ್ವಪಕ್ಷಗಳ ಸಭೆಯ ನೇತೃತ್ವ ವಹಿಸಲಿದ್ದಾರೆ.

17ನೇ ಲೋಕಸಭೆಯ 7ನೇ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಸರ್ಕಾರಿ ಕೆಲಸಗಳ ಅಗತ್ಯತೆಗಳಿಗೆ ಒಳಪಟ್ಟು ಇರಲಿದ್ದು, ಡಿಸೆಂಬರ್​ 23ರಂದು ಮುಕ್ತಾಯಗೊಳ್ಳಲಿದೆ ಎಂದು ಲೋಕಸಭೆಯ ಸಚಿವಾಲಯ ತಿಳಿಸಿದೆ. ಇನ್ನು ರಾಜ್ಯಸಭೆಯಲ್ಲೂ ಕೂಡ ಅದೇ ಸಮಯದಲ್ಲಿ ಅಧಿವೇಶನ ಪ್ರಾರಂಭಗೊಳ್ಳಲಾಗಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳ ವಿಚಾರ, ರೈತರ ಪ್ರತಿಭಟನೆ ವಿಷಯಗಳನ್ನು ಪ್ರಸ್ತಾಪ ಮಾಡುವ ಬಗ್ಗೆ ಪ್ರತಿಪಕ್ಷಗಳು ಸಿದ್ಧತೆ ನಡೆಸಿದ್ದರು. ಆದರೆ ಮೊನ್ನೆ ಶುಕ್ರವಾರ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ, ನವೆಂಬರ್​ 24ರಂದು ಅಂದರೆ ಚಳಿಗಾಲದ ಅಧಿವೇಶನ ಪ್ರಾರಂಭ ಆಗುವುದಕ್ಕೂ ಮೊದಲೇ ಅದನ್ನು ಸಂಸತ್ತಿನಲ್ಲಿಯೂ ರದ್ದುಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.  ಸಾಮಾನ್ಯವಾಗಿ ಪ್ರತಿ ಅಧಿವೇಶನಕ್ಕೂ ಮೊದಲು ಹೀಗೆ ಸರ್ವಪಕ್ಷಗಳ ಸಭೆ ನಡೆಯುತ್ತದೆ. ಅಧಿವೇಶನದಲ್ಲಿ ಸೌಹಾರ್ದಯುತವಾಗಿ ವರ್ತಿಸಬೇಕು..ಸಹಕಾರ ಕೊಡಬೇಕು ಎಂದು ಮನವಿ ಮಾಡುವ ನಿಟ್ಟಿನಲ್ಲಿ ಈ ಸಭೆ ನಡೆಯುತ್ತದೆ.

ಇದನ್ನೂ ಓದಿ: ಸೂಕ್ತ ಸಮಯಕ್ಕೆ ನೆರವು ಸಿಗದೇ ಹೋಗಿದ್ದರೆ, ತಂದೆ-ಮಗ ತಮ್ಮ ಹುಚ್ಚು ಸಾಹಸಕ್ಕೆ ಭಾರಿ ಬೆಲೆ ತೆರಬೇಕಾಗುತಿತ್ತು!

Published On - 4:25 pm, Mon, 22 November 21

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ