AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ

All Party Meeting: 17ನೇ ಲೋಕಸಭೆಯ 7ನೇ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಸರ್ಕಾರಿ ಕೆಲಸಗಳ ಅಗತ್ಯತೆಗಳಿಗೆ ಒಳಪಟ್ಟು ಇರಲಿದ್ದು, ಡಿಸೆಂಬರ್​ 23ರಂದು ಮುಕ್ತಾಯಗೊಳ್ಳಲಿದೆ.

ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on:Nov 22, 2021 | 4:27 PM

Share

ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಲಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 28 (ಭಾನುವಾರ) ಸರ್ವಪಕ್ಷಗಳ ಸಭೆ (All-Party Meet) ನಡೆಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಪಾರ್ಲಿಮೆಂಟ್​ನ ಚಳಿಗಾಲದ ಅಧಿವೇಶನ ನವೆಂಬರ್​ 29ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್​ 23ಕ್ಕೆ ಮುಕ್ತಾಯವಾಗಲಿದೆ. ಅದಕ್ಕೂ ಮೊದಲು ಪ್ರಧಾನಮಂತ್ರಿ ಸರ್ವಪಕ್ಷಗಳ ಸಭೆಯ ನೇತೃತ್ವ ವಹಿಸಲಿದ್ದಾರೆ.

17ನೇ ಲೋಕಸಭೆಯ 7ನೇ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಸರ್ಕಾರಿ ಕೆಲಸಗಳ ಅಗತ್ಯತೆಗಳಿಗೆ ಒಳಪಟ್ಟು ಇರಲಿದ್ದು, ಡಿಸೆಂಬರ್​ 23ರಂದು ಮುಕ್ತಾಯಗೊಳ್ಳಲಿದೆ ಎಂದು ಲೋಕಸಭೆಯ ಸಚಿವಾಲಯ ತಿಳಿಸಿದೆ. ಇನ್ನು ರಾಜ್ಯಸಭೆಯಲ್ಲೂ ಕೂಡ ಅದೇ ಸಮಯದಲ್ಲಿ ಅಧಿವೇಶನ ಪ್ರಾರಂಭಗೊಳ್ಳಲಾಗಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳ ವಿಚಾರ, ರೈತರ ಪ್ರತಿಭಟನೆ ವಿಷಯಗಳನ್ನು ಪ್ರಸ್ತಾಪ ಮಾಡುವ ಬಗ್ಗೆ ಪ್ರತಿಪಕ್ಷಗಳು ಸಿದ್ಧತೆ ನಡೆಸಿದ್ದರು. ಆದರೆ ಮೊನ್ನೆ ಶುಕ್ರವಾರ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ, ನವೆಂಬರ್​ 24ರಂದು ಅಂದರೆ ಚಳಿಗಾಲದ ಅಧಿವೇಶನ ಪ್ರಾರಂಭ ಆಗುವುದಕ್ಕೂ ಮೊದಲೇ ಅದನ್ನು ಸಂಸತ್ತಿನಲ್ಲಿಯೂ ರದ್ದುಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.  ಸಾಮಾನ್ಯವಾಗಿ ಪ್ರತಿ ಅಧಿವೇಶನಕ್ಕೂ ಮೊದಲು ಹೀಗೆ ಸರ್ವಪಕ್ಷಗಳ ಸಭೆ ನಡೆಯುತ್ತದೆ. ಅಧಿವೇಶನದಲ್ಲಿ ಸೌಹಾರ್ದಯುತವಾಗಿ ವರ್ತಿಸಬೇಕು..ಸಹಕಾರ ಕೊಡಬೇಕು ಎಂದು ಮನವಿ ಮಾಡುವ ನಿಟ್ಟಿನಲ್ಲಿ ಈ ಸಭೆ ನಡೆಯುತ್ತದೆ.

ಇದನ್ನೂ ಓದಿ: ಸೂಕ್ತ ಸಮಯಕ್ಕೆ ನೆರವು ಸಿಗದೇ ಹೋಗಿದ್ದರೆ, ತಂದೆ-ಮಗ ತಮ್ಮ ಹುಚ್ಚು ಸಾಹಸಕ್ಕೆ ಭಾರಿ ಬೆಲೆ ತೆರಬೇಕಾಗುತಿತ್ತು!

Published On - 4:25 pm, Mon, 22 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ