AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ

All Party Meeting: 17ನೇ ಲೋಕಸಭೆಯ 7ನೇ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಸರ್ಕಾರಿ ಕೆಲಸಗಳ ಅಗತ್ಯತೆಗಳಿಗೆ ಒಳಪಟ್ಟು ಇರಲಿದ್ದು, ಡಿಸೆಂಬರ್​ 23ರಂದು ಮುಕ್ತಾಯಗೊಳ್ಳಲಿದೆ.

ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ
ಪ್ರಧಾನಿ ಮೋದಿ
TV9 Web
| Edited By: |

Updated on:Nov 22, 2021 | 4:27 PM

Share

ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಲಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 28 (ಭಾನುವಾರ) ಸರ್ವಪಕ್ಷಗಳ ಸಭೆ (All-Party Meet) ನಡೆಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಪಾರ್ಲಿಮೆಂಟ್​ನ ಚಳಿಗಾಲದ ಅಧಿವೇಶನ ನವೆಂಬರ್​ 29ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್​ 23ಕ್ಕೆ ಮುಕ್ತಾಯವಾಗಲಿದೆ. ಅದಕ್ಕೂ ಮೊದಲು ಪ್ರಧಾನಮಂತ್ರಿ ಸರ್ವಪಕ್ಷಗಳ ಸಭೆಯ ನೇತೃತ್ವ ವಹಿಸಲಿದ್ದಾರೆ.

17ನೇ ಲೋಕಸಭೆಯ 7ನೇ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಸರ್ಕಾರಿ ಕೆಲಸಗಳ ಅಗತ್ಯತೆಗಳಿಗೆ ಒಳಪಟ್ಟು ಇರಲಿದ್ದು, ಡಿಸೆಂಬರ್​ 23ರಂದು ಮುಕ್ತಾಯಗೊಳ್ಳಲಿದೆ ಎಂದು ಲೋಕಸಭೆಯ ಸಚಿವಾಲಯ ತಿಳಿಸಿದೆ. ಇನ್ನು ರಾಜ್ಯಸಭೆಯಲ್ಲೂ ಕೂಡ ಅದೇ ಸಮಯದಲ್ಲಿ ಅಧಿವೇಶನ ಪ್ರಾರಂಭಗೊಳ್ಳಲಾಗಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳ ವಿಚಾರ, ರೈತರ ಪ್ರತಿಭಟನೆ ವಿಷಯಗಳನ್ನು ಪ್ರಸ್ತಾಪ ಮಾಡುವ ಬಗ್ಗೆ ಪ್ರತಿಪಕ್ಷಗಳು ಸಿದ್ಧತೆ ನಡೆಸಿದ್ದರು. ಆದರೆ ಮೊನ್ನೆ ಶುಕ್ರವಾರ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ, ನವೆಂಬರ್​ 24ರಂದು ಅಂದರೆ ಚಳಿಗಾಲದ ಅಧಿವೇಶನ ಪ್ರಾರಂಭ ಆಗುವುದಕ್ಕೂ ಮೊದಲೇ ಅದನ್ನು ಸಂಸತ್ತಿನಲ್ಲಿಯೂ ರದ್ದುಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.  ಸಾಮಾನ್ಯವಾಗಿ ಪ್ರತಿ ಅಧಿವೇಶನಕ್ಕೂ ಮೊದಲು ಹೀಗೆ ಸರ್ವಪಕ್ಷಗಳ ಸಭೆ ನಡೆಯುತ್ತದೆ. ಅಧಿವೇಶನದಲ್ಲಿ ಸೌಹಾರ್ದಯುತವಾಗಿ ವರ್ತಿಸಬೇಕು..ಸಹಕಾರ ಕೊಡಬೇಕು ಎಂದು ಮನವಿ ಮಾಡುವ ನಿಟ್ಟಿನಲ್ಲಿ ಈ ಸಭೆ ನಡೆಯುತ್ತದೆ.

ಇದನ್ನೂ ಓದಿ: ಸೂಕ್ತ ಸಮಯಕ್ಕೆ ನೆರವು ಸಿಗದೇ ಹೋಗಿದ್ದರೆ, ತಂದೆ-ಮಗ ತಮ್ಮ ಹುಚ್ಚು ಸಾಹಸಕ್ಕೆ ಭಾರಿ ಬೆಲೆ ತೆರಬೇಕಾಗುತಿತ್ತು!

Published On - 4:25 pm, Mon, 22 November 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ