AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಗೋರಖ್​ಪುರಕ್ಕೆ ಪ್ರಧಾನಿ ಮೋದಿ ಭೇಟಿ; ಯೋಗಿ ಕನಸಿನ ರಸಗೊಬ್ಬರ ಘಟಕ ಸೇರಿ 3 ಬೃಹತ್​​ ಯೋಜನೆಗಳ ಲೋಕಾರ್ಪಣೆ

ಯೋಗಿ ಆದಿತ್ಯನಾಥ್​ ಅವರು ಸೋಮವಾರ ಸಂಜೆ ಗೋರಖ್​ಪುರಕ್ಕೆ ಭೇಟಿ ನೀಡಿ, ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಹಾಗೇ, ರಸಗೊಬ್ಬರ ಘಟಕ ಮತ್ತು ಏಮ್ಸ್​ ಉದ್ಘಾಟನೆ ಸಮಾರಂಭ ಅದ್ದೂರಿಯಾಗಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇಂದು ಗೋರಖ್​ಪುರಕ್ಕೆ ಪ್ರಧಾನಿ ಮೋದಿ ಭೇಟಿ; ಯೋಗಿ ಕನಸಿನ ರಸಗೊಬ್ಬರ ಘಟಕ ಸೇರಿ 3 ಬೃಹತ್​​ ಯೋಜನೆಗಳ ಲೋಕಾರ್ಪಣೆ
ಯೋಗಿ ಆದಿತ್ಯನಾಥ್​ ಮತ್ತು ಪ್ರಧಾನಿ ಮೋದಿ
TV9 Web
| Edited By: |

Updated on: Dec 07, 2021 | 8:44 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಉತ್ತರಪ್ರದೇಶದ ಗೋರಖ್​ಪುರಕ್ಕೆ ಭೇಟಿ ನೀಡಲಿದ್ದು, ಅಲ್ಲಿ 9600 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಅದರಲ್ಲೂ ಬಹುಮುಖ್ಯವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಕನಸಿನ ಯೋಜನೆಯೆಂದೇ ಕರೆಸಿಕೊಂಡ ಗೋರಖ್​ಪುರ ರಸಗೊಬ್ಬರ ಘಟಕವನ್ನು ಇಂದು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡುವರು. ಇನ್ನು ಗೋರಖ್​ಪುರ ಯೋಗಿ ಆದಿತ್ಯನಾಥ್​​ರ ತವರು ಕ್ಷೇತ್ರವಾಗಿದ್ದು, ಅಲ್ಲೊಂದು ರಸಗೊಬ್ಬರ ಘಟಕ ನಿರ್ಮಾಣ ಅವರ ಕನಸಾಗಿತ್ತು. ಅದಕ್ಕಾಗಿ 19ವರ್ಷಗಳಿಂದಲೂ ಹೋರಾಟ ಮಾಡುತ್ತಿದ್ದರು. 

ಇಂದು ಗೋರಖ್​ಪುರದಲ್ಲಿ ಒಟ್ಟು ಮೂರು ಬೃಹತ್​ ಯೋಜನೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅದರಲ್ಲಿ ಮುಖ್ಯವಾಗಿ ಹಿಂದೂಸ್ತಾನ ಊರ್ವಾರಕ್​ ರಾಸಾಯನ ಲಿಮಿಟೆಡ್​ (ರಸಗೊಬ್ಬರ ಘಟಕ), ಎರಡನೇಯದ್ದು 300 ಬೆಡ್​​ ಮತ್ತು 14 ಆಪರೇಶನ್​ ಥಿಯೇಟರ್​​, 9 ಲ್ಯಾಬೋರೇಟರಿಗಳನ್ನೊಳಗೊಂಡ, ಅತ್ಯಾಧುನಿಕ ವ್ಯವಸ್ಥೆಯಿರುವ ಏಮ್ಸ್​​ ಆಸ್ಪತ್ರೆ ಮತ್ತು ಮೂರನೇಯ ಯೋಜನೆಯಾಗಿ ಬಾಬಾ ರಾಘವದಾಸ್​ ಮೆಡಿಕಲ್​ ಕಾಲೇಜಿನ ಪ್ರಾದೇಶಿಕ ವೈದ್ಯಕೀಯ ಸಂಶೋಧನಾ ಕೇಂದ್ರ (RMRC)ದಲ್ಲಿ ಒಂದು ಹೈಟೆಕ್​ ಲ್ಯಾಬ್​​ನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಮೂರು ಯೋಜನೆಗಳ ಉದ್ಘಾಟನೆ ಮಾಡುವ ಮೂಲಕ ಪ್ರಧಾನಿ ಮೋದಿ ಕನಸಿನ ಯೋಜನೆಗಳಿಗೆ ಸಾಕಾರ ನೀಡಲಿದ್ದಾರೆ ಎಂದು ಯೋಗಿ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್​ ಅವರು ಸೋಮವಾರ ಸಂಜೆ ಗೋರಖ್​ಪುರಕ್ಕೆ ಭೇಟಿ ನೀಡಿ, ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಹಾಗೇ, ರಸಗೊಬ್ಬರ ಘಟಕ ಮತ್ತು ಏಮ್ಸ್​ ಉದ್ಘಾಟನೆ ಸಮಾರಂಭ ಅದ್ದೂರಿಯಾಗಿ ನಡೆಯಲಿದೆ. ಉತ್ತರ ಪ್ರದೇಶ ಅಭಿವೃದ್ಧಿಯಲ್ಲಿ ಪ್ರಧಾನಿ ಮೋದಿ ಆಡಳಿತ ಐತಿಹಾಸಿಕವೆನಿಸಲಿದೆ ಎಂದು ಹೇಳಿದ್ದಾರೆ.  ಇದರಲ್ಲಿ ರಸಗೊಬ್ಬರ ಘಟಕ ಸುಮಾರು 8603 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ವರ್ಷಕ್ಕೆ 12.7 ಲಕ್ಷ ಮೆಟ್ರಿಕ್​ ಟನ್​ಗಳಷ್ಟು ಬೇವು ಲೇಪಿತ ಯೂರಿಯಾ ಉತ್ಪಾದನೆ ಸಾಮರ್ಥ್ಯ ಹೊಂದಿದೆ. ಈ ಗೊಬ್ಬರ ತಯಾರಿಕಾ ಕಾರ್ಖಾನೆ ಕೇವಲ ರೈತರಿಗಷ್ಟೇ ಅನುಕೂಲ ಮಾಡಿಕೊಡುವುದಿಲ್ಲ. ಬದಲಿಗೆ ಸುಮಾರು 20 ಸಾವಿರಗಳಷ್ಟು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತದೆ. ಇದರಿಂದ ಯುವಜನರಿಗೆ ಅನುಕೂಲವಾಗಲಿದೆ.

ಗೋರಖ್​ಪುರದಲ್ಲಿದ್ದ ಭಾರತದ ರಸಗೊಬ್ಬರ ಸಹಕಾರ ಕಾರ್ಖಾನೆ 1990ರಲ್ಲಿ ಬಂದ್​ ಆಯಿತು. ಅದಾದ ಬಳಿಕ ಯೋಗಿ ಆದಿತ್ಯನಾಥ್​ ಇಲ್ಲಿ ಮತ್ತೊಂದು ಹೊಸ ಕಾರ್ಖಾನೆ ಸ್ಥಾಪಿಸಲು ಸುಮಾರು 19 ವರ್ಷ ಹೋರಾಟ ಮಾಡಿದರು. 1998ರಿಂದ 2017ರ ಮಾರ್ಚ್​ವರೆಗೆ ಸಂಸದರಾಗಿದ್ದ ಅವರು ಪದೇಪದೆ ಈ ವಿಚಾರವನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಎದುರು ಪ್ರಸ್ತಾಪ ಮಾಡುತ್ತಿದ್ದರು.  ಅದಾದ ನಂತರ ಕೇಂದ್ರದಲ್ಲಿ 2014ರಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಅವರ ಕನಸಿಗೆ ರೂಪ ಸಿಕ್ಕಿತ್ತು. 2016ರ ಜುಲೈನಲ್ಲಿ ಈ ರಸಗೊಬ್ಬರ ಕಾರ್ಖಾನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಿದ್ದರು . ಇಂದು ಅವರೇ ಬಂದು ಉದ್ಘಾಟನೆ ಮಾಡುತ್ತಿದ್ದಾರೆ.

ಇನ್ನು ಗೋರಖ್​ಪುರದಲ್ಲಿ ಏಮ್ಸ್​ ಆಸ್ಪತ್ರೆ ಸುಮಾರು 1,011 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಕೇವಲ ಇಲ್ಲಿನ ಜನರಿಗಷ್ಟೇ ಅಲ್ಲದೆ, ಪೂರ್ವ ಉತ್ತರ ಪ್ರದೇಶದ ಜನರು, ಬಿಹಾರ, ಜಾರ್ಖಂಡ, ನೇಪಾಳದ ಜನರೂ ಅನುಕೂಲ ಪಡೆಯಬಹುದು. ವಿಶ್ವದರ್ಜೆಯ ವ್ಯವಸ್ಥೆಗಳು ಇರುವುದರಿಂದ ಉತ್ತಮ ಆರೋಗ್ಯ ಸೇವೆಯ ನಿರೀಕ್ಷೆಯಿದೆ. ಇನ್ನು ಬಿಆರ್​ಡಿ ಮೆಡಿಕಲ್ ಕಾಲೇಜಿನ ರಿಸರ್ಚ್​ ಸೆಂಟರ್​​​ನಲ್ಲಿ ನಿರ್ಮಾಣವಾಗಿರುವ ಹೈಟೆಕ್​ ಲ್ಯಾಬ್​ ಮೌಲ್ಯ 36 ಕೋಟಿ ರೂಪಾಯಿ. ವೈರಸ್​ಗಳಿಂದ ಹರಡುವ ರೋಗಗಳ ಪರೀಕ್ಷೆ ಮತ್ತು ಸಂಶೋಧನೆ ಇಲ್ಲಿ ನಡೆಯಲು ಎಲ್ಲ ರೀತಿಯ ಸೌಲಭ್ಯಗಳೂ ಇವೆ.  ಇನ್ನು ಇಂದಿನಿಂದ ಗೋರಖ್​ಪುರ ಜಿಲ್ಲೆಯಲ್ಲಿ ಎಲೆಕ್ಟ್ರಿಕ್​ ಬಸ್​ಗಳೂ ಕೂಡ ಸಂಚಾರ ಮಾಡಲಿವೆ. ಲಖನೌನಲ್ಲಿ ಅಕ್ಟೋಬರ್​ 15ರಂದು ಯೋಗಿ ಆದಿತ್ಯನಾಥ್​ ಒಟ್ಟು 15 ಎಲೆಕ್ಟ್ರಿಕ್​ ಬಸ್​ಗಳಿಗೆ ಹಸಿರುನಿಶಾನೆ ತೋರಿಸಿದ್ದರು.

ಇದನ್ನೂ ಓದಿ: ಮಾವನ ಪಿಎಫ್​​ ಮೇಲೆ ಅಳಿಯನ ಕಣ್ಣು; ಧನದಾಹಕ್ಕೆ ಪತ್ನಿಯನ್ನೇ ಕೊಂದ ಕಿರಾತಕ ಪತಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ