AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಲಖನೌಗೆ ಪ್ರಧಾನಿ ಮೋದಿ ಭೇಟಿ; ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ

Azadi@75: ಈ ಎಕ್ಸ್​ಪೋದಲ್ಲಿ ಒಟ್ಟು ಮೂರು ವಸ್ತುಪ್ರದರ್ಶನ ಏರ್ಪಡಿಸಲಾಗಿದ್ದು, ಅದನ್ನು ಪ್ರಧಾನಿ ಮೋದಿ ವೀಕ್ಷಿಸುವರು. ಹಾಗೇ ಬಾಬಾ ಸಾಹೇಬ್​ ಭೀಮರಾವ್​ ಅಂಬೇಡ್ಕರ್​ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ. 

ಇಂದು ಲಖನೌಗೆ ಪ್ರಧಾನಿ ಮೋದಿ ಭೇಟಿ; ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Oct 05, 2021 | 10:00 AM

Share

ಲಖನೌ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲಖನೌಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಇಂದಿರಾ ಗಾಂಧಿ ಪ್ರತಿಷ್ಠಾನದಲ್ಲಿ ಆಯೋಜಿಸಲಾಗಿರುವ ‘ಆಜಾದಿ@75: ನವ ನಗರ ಭಾರತ: ನಗರ ಒಳಪ್ರದೇಶ ಪರಿವರ್ತನೆ’ ಎಂಬ ಸಮ್ಮೇಳನ ಮತ್ತು ಎಕ್ಸ್​​ಪೋವನ್ನು ಉದ್ಘಾಟಿಸಲಿದ್ದಾರೆ. ಇಂದು ಅವರು ಒಟ್ಟು 4,737 ಕೋಟಿ ರೂಪಾಯಿ ವೆಚ್ಚದ 75 ನಗರಾಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.  

ಸ್ಮಾರ್ಟ್​ ಸಿಟಿ ಮಿಷನ್​ ಮತ್ತು ಅಮೃತ್​ (AMRUT) ನಡಿ  75 ನಗರಾಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಜತೆ, FAME-II ಸ್ಕೀಮ್​ನಡಿ (ವಿದ್ಯುತ್​ಚ್ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಯೋಜನೆ) ಲಖನೌ, ಕಾನ್ಪುರ, ವಾರಾಣಸಿ, ಪ್ರಯಾಗ್​ರಾಜ್​, ಗೋರಖ್​ಪುರ, ಝಾನ್ಸಿ ಮತ್ತು ಘಾಜಿಯಾಬಾದ್​​ಗಳಿಗೆ 75 ಎಲಕ್ಟ್ರಿಕ್​ ಬಸ್​ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಅಷ್ಟೇ ಅಲ್ಲದೆ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ 75 ಯೋಜನೆಗಳನ್ನು ವಿವರಿಸಲಾದ ಕಾಫಿ ಟೇಬಲ್​ ಪುಸ್ತಕವನ್ನೂ ಪ್ರಧಾನಿ ಬಿಡುಗಡೆ ಮಾಡಲಿದ್ದಾರೆ. ಹಾಗೇ, ಪ್ರಧಾನಮಂತ್ರಿ ಆವಾಸ್​ ಯೋಜನೆ ನಗರದಲ್ಲಿ ನಿರ್ಮಾಣವಾದ ಮನೆಗಳ ಕೀಲಿಗಳನ್ನು ಇಂದು 75,000 ಫಲಾನುಭವಿಗಳಿಗೆ ಡಿಜಿಟಲ್​ ವಿಧಾನದಲ್ಲಿ ವಿತರಿಸಲಿದ್ದಾರೆ.

ಈ ಎಕ್ಸ್​ಪೋದಲ್ಲಿ ಒಟ್ಟು ಮೂರು ವಸ್ತುಪ್ರದರ್ಶನ ಏರ್ಪಡಿಸಲಾಗಿದ್ದು, ಅದನ್ನು ಪ್ರಧಾನಿ ಮೋದಿ ವೀಕ್ಷಿಸುವರು. ಹಾಗೇ ಬಾಬಾ ಸಾಹೇಬ್​ ಭೀಮರಾವ್​ ಅಂಬೇಡ್ಕರ್​ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ.  ಈ ವೇಳೆ ಪ್ರಧಾನಿ ಮೋದಿಯವರ ಜತೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಹರ್ದೀಪ್​ ಸಿಂಗ್​ ಪುರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ರಾಜ್ಯಪಾಲರಾದ ಆನಂದಿ ಬೆನ್​ ಇರುವರು.

ಚುನಾವಣೆ ಟಾರ್ಗೆಟ್​ ಉತ್ತರಪ್ರದೇಶದಲ್ಲಿ ಬರುವ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ ಐದು ವರ್ಷ ಆಡಳಿತ ನಡೆಸಿದ ಬಿಜೆಪಿಗೆ ಈ ಬಾರಿಯೂ ಅಧಿಕಾರಕ್ಕೆ ಬರುವುದು ಅತ್ಯಗತ್ಯವಾಗಿದೆ. ಆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈಗ ಅಲ್ಲಿಗೆ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ.

ಇದನ್ನೂ ಓದಿ: Pandora Papers: ಪಂಡೋರಾ ಪೇಪರ್ಸ್​ನಲ್ಲಿ ರಾಜರು, ಪ್ರಧಾನಿಗಳು, ರಾಷ್ಟ್ರಾಧ್ಯಕ್ಷರು, ಸಿನಿತಾರೆಗಳು, ಪಾಪ್​ ತಾರೆ, ಕ್ರೀಡಾ ದಂತಕಥೆ…

ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ಸಿಲುಕಿದ್ದ ವಯಸ್ಕರನ್ನು ರಕ್ಷಿಸಿದ ಮೂವರು ಆಪ್ತ ಸ್ನೇಹಿತರು! ಹೃದಯಸ್ಪರ್ಶಿ ವಿಡಿಯೊ ನೋಡಿ

Published On - 9:53 am, Tue, 5 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!