AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಲಖನೌಗೆ ಪ್ರಧಾನಿ ಮೋದಿ ಭೇಟಿ; ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ

Azadi@75: ಈ ಎಕ್ಸ್​ಪೋದಲ್ಲಿ ಒಟ್ಟು ಮೂರು ವಸ್ತುಪ್ರದರ್ಶನ ಏರ್ಪಡಿಸಲಾಗಿದ್ದು, ಅದನ್ನು ಪ್ರಧಾನಿ ಮೋದಿ ವೀಕ್ಷಿಸುವರು. ಹಾಗೇ ಬಾಬಾ ಸಾಹೇಬ್​ ಭೀಮರಾವ್​ ಅಂಬೇಡ್ಕರ್​ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ. 

ಇಂದು ಲಖನೌಗೆ ಪ್ರಧಾನಿ ಮೋದಿ ಭೇಟಿ; ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Oct 05, 2021 | 10:00 AM

Share

ಲಖನೌ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲಖನೌಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಇಂದಿರಾ ಗಾಂಧಿ ಪ್ರತಿಷ್ಠಾನದಲ್ಲಿ ಆಯೋಜಿಸಲಾಗಿರುವ ‘ಆಜಾದಿ@75: ನವ ನಗರ ಭಾರತ: ನಗರ ಒಳಪ್ರದೇಶ ಪರಿವರ್ತನೆ’ ಎಂಬ ಸಮ್ಮೇಳನ ಮತ್ತು ಎಕ್ಸ್​​ಪೋವನ್ನು ಉದ್ಘಾಟಿಸಲಿದ್ದಾರೆ. ಇಂದು ಅವರು ಒಟ್ಟು 4,737 ಕೋಟಿ ರೂಪಾಯಿ ವೆಚ್ಚದ 75 ನಗರಾಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.  

ಸ್ಮಾರ್ಟ್​ ಸಿಟಿ ಮಿಷನ್​ ಮತ್ತು ಅಮೃತ್​ (AMRUT) ನಡಿ  75 ನಗರಾಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಜತೆ, FAME-II ಸ್ಕೀಮ್​ನಡಿ (ವಿದ್ಯುತ್​ಚ್ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಯೋಜನೆ) ಲಖನೌ, ಕಾನ್ಪುರ, ವಾರಾಣಸಿ, ಪ್ರಯಾಗ್​ರಾಜ್​, ಗೋರಖ್​ಪುರ, ಝಾನ್ಸಿ ಮತ್ತು ಘಾಜಿಯಾಬಾದ್​​ಗಳಿಗೆ 75 ಎಲಕ್ಟ್ರಿಕ್​ ಬಸ್​ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಅಷ್ಟೇ ಅಲ್ಲದೆ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ 75 ಯೋಜನೆಗಳನ್ನು ವಿವರಿಸಲಾದ ಕಾಫಿ ಟೇಬಲ್​ ಪುಸ್ತಕವನ್ನೂ ಪ್ರಧಾನಿ ಬಿಡುಗಡೆ ಮಾಡಲಿದ್ದಾರೆ. ಹಾಗೇ, ಪ್ರಧಾನಮಂತ್ರಿ ಆವಾಸ್​ ಯೋಜನೆ ನಗರದಲ್ಲಿ ನಿರ್ಮಾಣವಾದ ಮನೆಗಳ ಕೀಲಿಗಳನ್ನು ಇಂದು 75,000 ಫಲಾನುಭವಿಗಳಿಗೆ ಡಿಜಿಟಲ್​ ವಿಧಾನದಲ್ಲಿ ವಿತರಿಸಲಿದ್ದಾರೆ.

ಈ ಎಕ್ಸ್​ಪೋದಲ್ಲಿ ಒಟ್ಟು ಮೂರು ವಸ್ತುಪ್ರದರ್ಶನ ಏರ್ಪಡಿಸಲಾಗಿದ್ದು, ಅದನ್ನು ಪ್ರಧಾನಿ ಮೋದಿ ವೀಕ್ಷಿಸುವರು. ಹಾಗೇ ಬಾಬಾ ಸಾಹೇಬ್​ ಭೀಮರಾವ್​ ಅಂಬೇಡ್ಕರ್​ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ.  ಈ ವೇಳೆ ಪ್ರಧಾನಿ ಮೋದಿಯವರ ಜತೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಹರ್ದೀಪ್​ ಸಿಂಗ್​ ಪುರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ರಾಜ್ಯಪಾಲರಾದ ಆನಂದಿ ಬೆನ್​ ಇರುವರು.

ಚುನಾವಣೆ ಟಾರ್ಗೆಟ್​ ಉತ್ತರಪ್ರದೇಶದಲ್ಲಿ ಬರುವ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ ಐದು ವರ್ಷ ಆಡಳಿತ ನಡೆಸಿದ ಬಿಜೆಪಿಗೆ ಈ ಬಾರಿಯೂ ಅಧಿಕಾರಕ್ಕೆ ಬರುವುದು ಅತ್ಯಗತ್ಯವಾಗಿದೆ. ಆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈಗ ಅಲ್ಲಿಗೆ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ.

ಇದನ್ನೂ ಓದಿ: Pandora Papers: ಪಂಡೋರಾ ಪೇಪರ್ಸ್​ನಲ್ಲಿ ರಾಜರು, ಪ್ರಧಾನಿಗಳು, ರಾಷ್ಟ್ರಾಧ್ಯಕ್ಷರು, ಸಿನಿತಾರೆಗಳು, ಪಾಪ್​ ತಾರೆ, ಕ್ರೀಡಾ ದಂತಕಥೆ…

ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ಸಿಲುಕಿದ್ದ ವಯಸ್ಕರನ್ನು ರಕ್ಷಿಸಿದ ಮೂವರು ಆಪ್ತ ಸ್ನೇಹಿತರು! ಹೃದಯಸ್ಪರ್ಶಿ ವಿಡಿಯೊ ನೋಡಿ

Published On - 9:53 am, Tue, 5 October 21

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು