AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas: ಯಾಸ್​ ಚಂಡಮಾರುತದಿಂದಾದ ಹಾನಿ ಪರಿಶೀಲನೆಗೆ ನಾಳೆ ಒಡಿಶಾಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಯಾಸ್ ಚಂಡಮಾರುತ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ, ಪಶ್ಚಿಮ ಮೇದಿನಿಪುರ, ಬಂಕುರಾ, ದಕ್ಷಿಣ 24 ಪರಗಣ ಮತ್ತು ಜಾಗ್ರಮ್​ ಜಿಲ್ಲೆಗಳಲ್ಲಿ ಹಾನಿಯನ್ನುಂಟು ಮಾಡಿದೆ.

Cyclone Yaas: ಯಾಸ್​ ಚಂಡಮಾರುತದಿಂದಾದ ಹಾನಿ ಪರಿಶೀಲನೆಗೆ ನಾಳೆ ಒಡಿಶಾಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on:May 27, 2021 | 4:39 PM

Share

ಯಾಸ್​ ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿಯವರು ನಾಳೆ (ಮೇ 28) ಒಡಿಶಾಕ್ಕೆ ಭೇಟಿ ನೀಡಲಿದ್ದಾರೆ. ನರೇಂದ್ರ ಮೋದಿ ಭುವನೇಶ್ವರ್​ಗೆ ತೆರಳಲಿದ್ದು, ಅಲ್ಲಿಂದ ಬಾಳಾಸೋರ್, ಭದ್ರಕ್​, ಪುರ್ಬಾ ಮೇದಿನಿಪುರ್​​​​ನಲ್ಲಿ ಉಂಟಾದ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಅಲ್ಲಿನ ಸಿಎಂ, ಉನ್ನತ ಅಧಿಕಾರಿಗಳೊಟ್ಟಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಹಾಗೇ ಪಶ್ಚಿಮ ಬಂಗಾಳದ ಪರಿಸ್ಥಿತಿ ಬಗ್ಗೆಯೂ ಪ್ರಧಾನಿ ಮೋದಿ ಚರ್ಚಿಸಲಿದ್ದಾರೆ.

ಯಾಸ್ ಚಂಡಮಾರುತ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ, ಪಶ್ಚಿಮ ಮೇದಿನಿಪುರ, ಬಂಕುರಾ, ದಕ್ಷಿಣ 24 ಪರಗಣ ಮತ್ತು ಜಾಗ್ರಮ್​ ಜಿಲ್ಲೆಗಳಲ್ಲಿ ಹಾಗೂ ಓಡಿಶಾದ ಭದ್ರಕ್​, ಜಗತ್​​ಸಿಂಗ್​ಪುರ್​, ಕೇಂದ್ರಪರ, ಜೈಪುರ, ಕಿಯೋಂಜರ್​ ಮತ್ತು ಮಯೂರ್​ಭಂಜ್​ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ಉಂಟು ಮಾಡಿದೆ. ಜಾರ್ಖಂಡ್​​ನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇಲ್ಲಿಯವರೆಗೆ 15,000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಈ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ತೌಕ್ತೆ ಚಂಡಮಾರುತದಿಂದ ಉಂಟಾದ ಹಾನಿ ಪರಿಶೀಲನೆಗಾಗಿ ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಗುಜರಾತ್​ಗೆ ಭೇಟಿಕೊಟ್ಟು, ವೈಮಾನಿಕ ಸಮೀಕ್ಷೆ ನಡೆಸಿದ್ದರು. ಪರಿಹಾರವನ್ನೂ ಘೋಷಿಸಿದ್ದರು.

ಇದನ್ನೂ ಓದಿ: ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್

Cyclone Yaas ಒಡಿಶಾ ಮತ್ತು ಬಂಗಾಳದಲ್ಲಿ ನಾಶನಷ್ಟಕ್ಕೆ ಕಾರಣವಾದ ಯಾಸ್ ಚಂಡಮಾರುತ, ಜಾರ್ಖಂಡ್​ನಲ್ಲಿ ಮುನ್ನೆಚ್ಚರಿಕೆ

Published On - 4:39 pm, Thu, 27 May 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ