Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಚೀನಾ ಗಡಿ, ಎಲ್‌ಎಸಿ ಮತ್ತು ಇತರ ಸಮಸ್ಯೆಗಳ ಬಗ್ಗೆ ಚೀನಾ ಅಧ್ಯಕ್ಷರೊಂದಿಗೆ ಮೋದಿ ಮಾತುಕತೆ

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಎರಡು ಕಡೆಯವರು ಘರ್ಷಣೆ ಮಾಡಿದಾಗ ಜೂನ್ 2020 ರಿಂದ ಉದ್ವಿಗ್ನತೆ ಹೆಚ್ಚಿರುವ ಸಂಪೂರ್ಣ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಸೇನೆಯನ್ನು ಹಿಂಪಡೆಯಲು ಇಬ್ಬರು ನಾಯಕರು ಒಪ್ಪಿಕೊಂಡರು. ಬ್ರಿಕ್ಸ್ ಶೃಂಗಸಭೆಯ ಹಿನ್ನಲೆಯಲ್ಲಿ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಸಂವಾದ ನಡೆದಿತ್ತು ಎಂದು ಸರ್ಕಾರದ ಮೂಲಗಳು ಹೇಳಿವೆ

ಭಾರತ-ಚೀನಾ ಗಡಿ, ಎಲ್‌ಎಸಿ ಮತ್ತು ಇತರ ಸಮಸ್ಯೆಗಳ ಬಗ್ಗೆ ಚೀನಾ ಅಧ್ಯಕ್ಷರೊಂದಿಗೆ ಮೋದಿ ಮಾತುಕತೆ
ನರೇಂದ್ರ ಮೋದಿ- ಷಿ ಜಿಂಗ್​​ಪಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on: Aug 25, 2023 | 3:15 PM

ದೆಹಲಿ ಆಗಸ್ಟ್ 25: ದಕ್ಷಿಣ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್ ಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ (Xi Jinping) ಅವರೊಂದಿಗಿನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿಯು ಭಾರತದ ಕೋರಿಕೆಯ ಮೇರೆಗೆ ನಡೆದಿದೆ ಎಂದು ಚೀನಾ ಹೇಳಿಕೊಂಡಿದ್ದು, ಭಾರತ ಸರ್ಕಾರದ ಉನ್ನತ ಮೂಲಗಳು ಅದನ್ನು ನಿರಾಕರಿಸಿವೆ. ಅದೇ ವೇಳೆ “ದ್ವಿಪಕ್ಷೀಯ ಸಭೆಗಾಗಿ ಚೀನಾದ ಕಡೆಯಿಂದ ವಿನಂತಿಯು ಬಾಕಿ ಉಳಿದಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಲೀಡರ್ಸ್ ಲಾಂಜ್‌ನಲ್ಲಿ “ಅನೌಪಚಾರಿಕ ಸಂಭಾಷಣೆ” ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಆಗಸ್ಟ್ 23 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಕೋರಿಕೆಯ ಮೇರೆಗೆ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಮಾತನಾಡಿದ್ದಾರೆ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿದೆ.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಎರಡು ಕಡೆಯವರು ಘರ್ಷಣೆ ಮಾಡಿದಾಗ ಜೂನ್ 2020 ರಿಂದ ಉದ್ವಿಗ್ನತೆ ಹೆಚ್ಚಿರುವ ಸಂಪೂರ್ಣ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಸೇನೆಯನ್ನು ಹಿಂಪಡೆಯಲು ಇಬ್ಬರು ನಾಯಕರು ಒಪ್ಪಿಕೊಂಡರು. ಇದು ಬ್ರಿಕ್ಸ್ ಶೃಂಗಸಭೆಯ ಹಿನ್ನಲೆಯಲ್ಲಿ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಸಂವಾದ ನಡೆದಿತ್ತು. ಪ್ರಧಾನ ಮಂತ್ರಿ ಇತರ ಬ್ರಿಕ್ಸ್ ನಾಯಕರೊಂದಿಗೆ ಸಂವಾದ ನಡೆಸಿದರು. ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗಿನ ಸಂವಾದದಲ್ಲಿ, ಭಾರತ-ಚೀನಾ ಗಡಿ ಎಲ್‌ಎಸಿ ಮತ್ತು ಇತರ ಪ್ರದೇಶಗಳ ಉದ್ದಕ್ಕೂ ಬಗೆಹರಿಯದ ಸಮಸ್ಯೆಗಳ ಬಗ್ಗೆ ಭಾರತದ ಕಳವಳಗಳನ್ನು ಪ್ರಧಾನ ಮಂತ್ರಿ ಎತ್ತಿ ತೋರಿಸಿದರು ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಒಂಬತ್ತು ವರ್ಷಗಳ ಹಿಂದೆ ಮತದಾರ ನರೇಂದ್ರ ಮೋದಿಯವರಿಗೆ ನೀಡಿದ ಒಂದು ವೋಟು ಭಾರತದ ಚಿತ್ರಣವನ್ನು ಬದಲಾಯಿಸಿತು: ತೇಜಸ್ವೀ ಸೂರ್ಯ

ಚೀನೀ ಸುದ್ದಿಗೋಷ್ಠಿ ಪ್ರಕಾರ, ಉಭಯ ನಾಯಕರು ಪ್ರಸ್ತುತ ಚೀನಾ-ಭಾರತ ಸಂಬಂಧಗಳು ಮತ್ತು ಹಂಚಿಕೆಯ ಆಸಕ್ತಿಯ ಇತರ ಪ್ರಶ್ನೆಗಳ ಬಗ್ಗೆ ಸೀದಾ ಮತ್ತು ಆಳವಾದ ವಿನಿಮಯವನ್ನು ಹೊಂದಿದ್ದರು.

ಚೀನಾ-ಭಾರತ ಸಂಬಂಧಗಳನ್ನು ಸುಧಾರಿಸುವುದು ಎರಡು ದೇಶಗಳು ಮತ್ತು ಜನರ ಸಾಮಾನ್ಯ ಹಿತಾಸಕ್ತಿಗಳನ್ನು ಪೂರೈಸುತ್ತದೆ ಮತ್ತು ಶಾಂತಿ, ಸ್ಥಿರತೆ ಮತ್ತು ವಿಶ್ವ ಮತ್ತು ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಅಧ್ಯಕ್ಷ ಷಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಎರಡೂ ಕಡೆಯವರು ತಮ್ಮ ದ್ವಿಪಕ್ಷೀಯ ಸಂಬಂಧಗಳ ಒಟ್ಟಾರೆ ಹಿತಾಸಕ್ತಿಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಮತ್ತು ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಜಂಟಿಯಾಗಿ ಕಾಪಾಡಲು ಗಡಿ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸಬೇಕು” ಎಂದು ಕ್ಸಿಯನ್ನು ಉಲ್ಲೇಖಿಸಿ ಚೀನಾದ ವಿದೇಶಾಂಗ ಸಚಿವಾಲಯ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್