AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ 5 ಕೋಟಿ ಪೋಸ್ಟ್​ಕಾರ್ಡ್​ ಕಳಿಸಲಿರುವ ಬಿಜೆಪಿ; ಹುಟ್ಟುಹಬ್ಬದ ನಿಮಿತ್ತ ಸೇವಾ-ಸಮರ್ಪಣ ಅಭಿಯಾನ

PM Narendra Modi: ಪ್ರಧಾನಿ ನರೇಂದ್ರ ಮೋದಿಯವರು 2001ರ ಅಕ್ಟೋಬರ್​ನಲ್ಲಿ ಮೊದಲ ಬಾರಿಗೆ ಗುಜರಾತ್​ ಮುಖ್ಯಮಂತ್ರಿಯಾದರು. ಅಲ್ಲಿಂದಲೂ ಅವರು ಪ್ರಮುಖ ಹುದ್ದೆಯನ್ನೇ ನಿಭಾಯಿಸುತ್ತ ಬಂದಿದ್ದಾರೆ.

ಪ್ರಧಾನಿ ಮೋದಿಗೆ 5 ಕೋಟಿ ಪೋಸ್ಟ್​ಕಾರ್ಡ್​ ಕಳಿಸಲಿರುವ ಬಿಜೆಪಿ; ಹುಟ್ಟುಹಬ್ಬದ ನಿಮಿತ್ತ ಸೇವಾ-ಸಮರ್ಪಣ ಅಭಿಯಾನ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Sep 05, 2021 | 11:59 AM

Share

ಪ್ರಧಾನಿ ನರೇಂದ್ರ ಮೋದಿ ( PM Narendra Modi) ಯವರ ಜನ್ಮದಿನ ಸಮೀಪಿಸುತ್ತಿದ್ದು, ಈ ಬಾರಿ ಬಿಜೆಪಿ ಬಹುದೊಡ್ಡ ಪ್ಲ್ಯಾನ್​ ಹಾಕಿಕೊಂಡಿದೆ. ಸೆಪ್ಟೆಂಬರ್​ 17ರಂದು ಪ್ರಧಾನಿ ಮೋದಿ 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೇ, ರಾಜಕೀಯದಲ್ಲಿ ಉನ್ನತ ಹುದ್ದೆಗೇರಿ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ಸೇವಾ ಮತ್ತು ಸಮರ್ಪಣ ಅಭಿಯಾನ (Seva and Samarpan Abhiyan) ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಅಭಿಯಾನ ಸೆಪ್ಟೆಂಬರ್​ 17ರಿಂದ ಪ್ರಾರಂಭವಾಗಿ, 20ದಿನಗಳ ಕಾಲ ನಡೆಯಲಿದೆ. ಈ 20ದಿನಗಳ ಅಭಿಯಾನದ ಪ್ರಯುಕ್ತ ಬಿಜೆಪಿ ದೇಶಾದ್ಯಂದ ಸಾಮೂಹಿಕ ಸ್ವಚ್ಛತಾ ಕೆಲಸ ನಡೆಸಲಿದೆ. ಹಾಗೇ ರಕ್ತದಾನ ಶಿಬಿರಗಳಂಥ ಸಮಾಜ ಸೇವಾ ಕಾರ್ಯ ಹಮ್ಮಿಕೊಳ್ಳಲಿದೆ. ಆಚರಣೆ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈಗಾಗಲೇ ಎಲ್ಲ ಘಟಕಗಳಿಗೂ ನಿರ್ದೇಶನ ನೀಡಿದ್ದಾರೆ. ಉತ್ತರಪ್ರದೇಶ ಬಿಜೆಪಿ 71 ಸ್ಥಳಗಳಲ್ಲಿ ಗಂಗಾನದಿಯನ್ನು ಸ್ವಚ್ಛಗೊಳಿಸಲಿದೆ. 

ಇನ್ನೊಂದು ಬಹುಮುಖ್ಯವಾಗಿ, ದೇಶಾದ್ಯಂತ ಎಲ್ಲ ಬಿಜೆಪಿ ಬೂತ್​ಗಳಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ 5 ಕೋಟಿಗಳಷ್ಟು ಅಂಚೆಪತ್ರ (Postcard) ಕಳಿಸುವ ಮೂಲಕ ಅಭಿನಂದನೆ ಸಲ್ಲಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿಯವರು ತಮ್ಮನ್ನು ತಾವು ಸಾರ್ವಜನಿಕ ಸೇವೆಗೆ ತೊಡಗಿಸಿಕೊಳ್ಳುವುದಲ್ಲದೆ, ಬಿಜೆಪಿ ಪಕ್ಷದ ಪ್ರತಿ ಸದಸ್ಯರೂ ತಮ್ಮನ್ನು ತಾವು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ತುಂಬ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲು 5 ಕೋಟಿ ಪೋಸ್ಟ್ ಕಾರ್ಡ್​ ಕಳಿಸಿಕೊಡಲಾಗುವುದು ಎಂದು ಬಿಜೆಪಿ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರು 2001ರ ಅಕ್ಟೋಬರ್​ನಲ್ಲಿ ಮೊದಲ ಬಾರಿಗೆ ಗುಜರಾತ್​ ಮುಖ್ಯಮಂತ್ರಿಯಾದರು. ಅಲ್ಲಿಂದಲೂ ಅವರು ಪ್ರಮುಖ ಹುದ್ದೆಯನ್ನೇ ನಿಭಾಯಿಸುತ್ತ ಬಂದಿದ್ದಾರೆ. ಅವರು ರಾಜಕೀಯದ ಪ್ರಮುಖ ಹುದ್ದೆಯಲ್ಲಿ ಇದ್ದು, 20 ವರ್ಷ ಕಳೆದಿದೆ. ತಮ್ಮನ್ನು ತಾವು ಸಂಪೂರ್ಣವಾಗಿ ಸಾರ್ವಜನಿಕ ಜೀವನಕ್ಕೆ ಅರ್ಪಿಸಿಕೊಂಡಿದ್ದಾರೆ.  ಅವರಿಗೆ ಧನ್ಯವಾದ ಸಲ್ಲಿಸುವ ಸಲುವಾಗಿ  ಬಡವರಿಗೆ ಉಚಿತ ಆಹಾರ ಮತ್ತು ಲಸಿಕೆಯನ್ನು ನೀಡಲಾಗುವುದು. ಅದಕ್ಕಾಗಿ ಅಭಿಯಾನ ನಡೆಸಲಾಗುವುದು ಎಂದು ಪಕ್ಷ ಹೇಳಿದೆ.

ಆರೋಗ್ಯ ಶಿಬಿರಗಳು, ಪ್ರಧಾನಿ ಮೋದಿಯವರ ಜೀವನ, ಸಾಧನೆ ಬಗ್ಗೆ ಪ್ರಸ್ತುತ ಪಡಿಸುವ ಸಮಾರಂಭಗಳು ನಡೆಯಲಿವೆ. ಹಾಗೇ, ಜನಪ್ರತಿನಿಧಿಗಳು ಉಚಿತವಾಗಿ ರೇಷನ್​ ನೀಡಲಿದ್ದಾರೆ. ಕೊವಿಡ್​ 19 ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ಗುರುತಿಸಿ, ಅವರಿಗೆ ಪಿಎಂ ಕೇರ್ಸ್​ ಯೋಜನೆಯಡಿ ಸೌಲಭ್ಯ ಒದಗಿಸುವ ಕೆಲಸವನ್ನೂ ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂದು ಪಕ್ಷ ಹೇಳಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಪಡೆದ ಉಡುಗೋರೆಗಳನ್ನು  pmmemontos.gov.in. ಸರ್ಕಾರಿ ವೆಬ್​ಸೈಟ್​ನಲ್ಲಿ ಹರಾಜು ಇಡಲಾಗುತ್ತದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Viral Video: ಸೈಕಲ್ ಹತ್ತಿ ಸ್ಟಂಟ್ ಮಾಡಲು ಹೋಗಿ ಯಡವಟ್ಟಾಯ್ತು; ವಿಡಿಯೋ ಫುಲ್ ವೈರಲ್ ಆಯ್ತು

Coronavirus Cases in India: ಭಾರತದಲ್ಲಿ 42,766 ಹೊಸ ಕೊವಿಡ್ -19 ಪ್ರಕರಣ ಪತ್ತೆ, 308 ಮಂದಿ ಸಾವು

Follow Us
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ