AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ 5 ಕೋಟಿ ಪೋಸ್ಟ್​ಕಾರ್ಡ್​ ಕಳಿಸಲಿರುವ ಬಿಜೆಪಿ; ಹುಟ್ಟುಹಬ್ಬದ ನಿಮಿತ್ತ ಸೇವಾ-ಸಮರ್ಪಣ ಅಭಿಯಾನ

PM Narendra Modi: ಪ್ರಧಾನಿ ನರೇಂದ್ರ ಮೋದಿಯವರು 2001ರ ಅಕ್ಟೋಬರ್​ನಲ್ಲಿ ಮೊದಲ ಬಾರಿಗೆ ಗುಜರಾತ್​ ಮುಖ್ಯಮಂತ್ರಿಯಾದರು. ಅಲ್ಲಿಂದಲೂ ಅವರು ಪ್ರಮುಖ ಹುದ್ದೆಯನ್ನೇ ನಿಭಾಯಿಸುತ್ತ ಬಂದಿದ್ದಾರೆ.

ಪ್ರಧಾನಿ ಮೋದಿಗೆ 5 ಕೋಟಿ ಪೋಸ್ಟ್​ಕಾರ್ಡ್​ ಕಳಿಸಲಿರುವ ಬಿಜೆಪಿ; ಹುಟ್ಟುಹಬ್ಬದ ನಿಮಿತ್ತ ಸೇವಾ-ಸಮರ್ಪಣ ಅಭಿಯಾನ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Sep 05, 2021 | 11:59 AM

Share

ಪ್ರಧಾನಿ ನರೇಂದ್ರ ಮೋದಿ ( PM Narendra Modi) ಯವರ ಜನ್ಮದಿನ ಸಮೀಪಿಸುತ್ತಿದ್ದು, ಈ ಬಾರಿ ಬಿಜೆಪಿ ಬಹುದೊಡ್ಡ ಪ್ಲ್ಯಾನ್​ ಹಾಕಿಕೊಂಡಿದೆ. ಸೆಪ್ಟೆಂಬರ್​ 17ರಂದು ಪ್ರಧಾನಿ ಮೋದಿ 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೇ, ರಾಜಕೀಯದಲ್ಲಿ ಉನ್ನತ ಹುದ್ದೆಗೇರಿ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ಸೇವಾ ಮತ್ತು ಸಮರ್ಪಣ ಅಭಿಯಾನ (Seva and Samarpan Abhiyan) ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಅಭಿಯಾನ ಸೆಪ್ಟೆಂಬರ್​ 17ರಿಂದ ಪ್ರಾರಂಭವಾಗಿ, 20ದಿನಗಳ ಕಾಲ ನಡೆಯಲಿದೆ. ಈ 20ದಿನಗಳ ಅಭಿಯಾನದ ಪ್ರಯುಕ್ತ ಬಿಜೆಪಿ ದೇಶಾದ್ಯಂದ ಸಾಮೂಹಿಕ ಸ್ವಚ್ಛತಾ ಕೆಲಸ ನಡೆಸಲಿದೆ. ಹಾಗೇ ರಕ್ತದಾನ ಶಿಬಿರಗಳಂಥ ಸಮಾಜ ಸೇವಾ ಕಾರ್ಯ ಹಮ್ಮಿಕೊಳ್ಳಲಿದೆ. ಆಚರಣೆ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈಗಾಗಲೇ ಎಲ್ಲ ಘಟಕಗಳಿಗೂ ನಿರ್ದೇಶನ ನೀಡಿದ್ದಾರೆ. ಉತ್ತರಪ್ರದೇಶ ಬಿಜೆಪಿ 71 ಸ್ಥಳಗಳಲ್ಲಿ ಗಂಗಾನದಿಯನ್ನು ಸ್ವಚ್ಛಗೊಳಿಸಲಿದೆ. 

ಇನ್ನೊಂದು ಬಹುಮುಖ್ಯವಾಗಿ, ದೇಶಾದ್ಯಂತ ಎಲ್ಲ ಬಿಜೆಪಿ ಬೂತ್​ಗಳಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ 5 ಕೋಟಿಗಳಷ್ಟು ಅಂಚೆಪತ್ರ (Postcard) ಕಳಿಸುವ ಮೂಲಕ ಅಭಿನಂದನೆ ಸಲ್ಲಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿಯವರು ತಮ್ಮನ್ನು ತಾವು ಸಾರ್ವಜನಿಕ ಸೇವೆಗೆ ತೊಡಗಿಸಿಕೊಳ್ಳುವುದಲ್ಲದೆ, ಬಿಜೆಪಿ ಪಕ್ಷದ ಪ್ರತಿ ಸದಸ್ಯರೂ ತಮ್ಮನ್ನು ತಾವು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ತುಂಬ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲು 5 ಕೋಟಿ ಪೋಸ್ಟ್ ಕಾರ್ಡ್​ ಕಳಿಸಿಕೊಡಲಾಗುವುದು ಎಂದು ಬಿಜೆಪಿ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರು 2001ರ ಅಕ್ಟೋಬರ್​ನಲ್ಲಿ ಮೊದಲ ಬಾರಿಗೆ ಗುಜರಾತ್​ ಮುಖ್ಯಮಂತ್ರಿಯಾದರು. ಅಲ್ಲಿಂದಲೂ ಅವರು ಪ್ರಮುಖ ಹುದ್ದೆಯನ್ನೇ ನಿಭಾಯಿಸುತ್ತ ಬಂದಿದ್ದಾರೆ. ಅವರು ರಾಜಕೀಯದ ಪ್ರಮುಖ ಹುದ್ದೆಯಲ್ಲಿ ಇದ್ದು, 20 ವರ್ಷ ಕಳೆದಿದೆ. ತಮ್ಮನ್ನು ತಾವು ಸಂಪೂರ್ಣವಾಗಿ ಸಾರ್ವಜನಿಕ ಜೀವನಕ್ಕೆ ಅರ್ಪಿಸಿಕೊಂಡಿದ್ದಾರೆ.  ಅವರಿಗೆ ಧನ್ಯವಾದ ಸಲ್ಲಿಸುವ ಸಲುವಾಗಿ  ಬಡವರಿಗೆ ಉಚಿತ ಆಹಾರ ಮತ್ತು ಲಸಿಕೆಯನ್ನು ನೀಡಲಾಗುವುದು. ಅದಕ್ಕಾಗಿ ಅಭಿಯಾನ ನಡೆಸಲಾಗುವುದು ಎಂದು ಪಕ್ಷ ಹೇಳಿದೆ.

ಆರೋಗ್ಯ ಶಿಬಿರಗಳು, ಪ್ರಧಾನಿ ಮೋದಿಯವರ ಜೀವನ, ಸಾಧನೆ ಬಗ್ಗೆ ಪ್ರಸ್ತುತ ಪಡಿಸುವ ಸಮಾರಂಭಗಳು ನಡೆಯಲಿವೆ. ಹಾಗೇ, ಜನಪ್ರತಿನಿಧಿಗಳು ಉಚಿತವಾಗಿ ರೇಷನ್​ ನೀಡಲಿದ್ದಾರೆ. ಕೊವಿಡ್​ 19 ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ಗುರುತಿಸಿ, ಅವರಿಗೆ ಪಿಎಂ ಕೇರ್ಸ್​ ಯೋಜನೆಯಡಿ ಸೌಲಭ್ಯ ಒದಗಿಸುವ ಕೆಲಸವನ್ನೂ ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂದು ಪಕ್ಷ ಹೇಳಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಪಡೆದ ಉಡುಗೋರೆಗಳನ್ನು  pmmemontos.gov.in. ಸರ್ಕಾರಿ ವೆಬ್​ಸೈಟ್​ನಲ್ಲಿ ಹರಾಜು ಇಡಲಾಗುತ್ತದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Viral Video: ಸೈಕಲ್ ಹತ್ತಿ ಸ್ಟಂಟ್ ಮಾಡಲು ಹೋಗಿ ಯಡವಟ್ಟಾಯ್ತು; ವಿಡಿಯೋ ಫುಲ್ ವೈರಲ್ ಆಯ್ತು

Coronavirus Cases in India: ಭಾರತದಲ್ಲಿ 42,766 ಹೊಸ ಕೊವಿಡ್ -19 ಪ್ರಕರಣ ಪತ್ತೆ, 308 ಮಂದಿ ಸಾವು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ