AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಧರಿಸಿದ್ದ ಮುಂಡಾಸನ್ನು ಯಾರು ನೀಡಿದ್ದು ಗೊತ್ತಾ?

ದೆಹಲಿ: ಭಾರತದ 74ನೇ ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿಯವರು ಧರಿಸಿದ್ದ ಮುಂಡಾಸು ಎಲ್ಲರ ಗಮನವನ್ನು ತನ್ನತ್ತ ಸೆಳೆದಿತ್ತು. ಅಂದ ಹಾಗೆ, ಈ ಪೇಟವನ್ನು ಗುಜರಾತ್​ನ ತಾಪಿ ಜಿಲ್ಲೆಯ 38 ವರ್ಷದ ರೈತ ಸುಜಾನ್​ಸಿಂಗ್​ ಪಾರ್ಮಾರ್ ಪ್ರಧಾನಿಗೆ ಉಡುಗೊರೆಯಾಗಿ ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಪ್ರಧಾನಿ ನಾನು ಕಳಿಸಿದ ಪೇಟವನ್ನು ಧರಿಸಬೇಕು. ಆಗ ನನ್ನ ಕನಸು ಈಡೇರುತ್ತದೆ ಎಂದು ಪಾರ್ಮಾರ್ ಆಶಯಪಟ್ಟಿದ್ದರಂತೆ. ಈ ಸಂತಸವನ್ನು ಖುದ್ದು ಹಂಚಿಕೊಂಡಿರುವ ಪಾರ್ಮಾರ್ ಗುಜರಾತ್​​ ಸಂಸದ ಸಿ.ಆರ್​ […]

ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಧರಿಸಿದ್ದ ಮುಂಡಾಸನ್ನು ಯಾರು ನೀಡಿದ್ದು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 19, 2020 | 5:57 PM

Share

ದೆಹಲಿ: ಭಾರತದ 74ನೇ ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿಯವರು ಧರಿಸಿದ್ದ ಮುಂಡಾಸು ಎಲ್ಲರ ಗಮನವನ್ನು ತನ್ನತ್ತ ಸೆಳೆದಿತ್ತು. ಅಂದ ಹಾಗೆ, ಈ ಪೇಟವನ್ನು ಗುಜರಾತ್​ನ ತಾಪಿ ಜಿಲ್ಲೆಯ 38 ವರ್ಷದ ರೈತ ಸುಜಾನ್​ಸಿಂಗ್​ ಪಾರ್ಮಾರ್ ಪ್ರಧಾನಿಗೆ ಉಡುಗೊರೆಯಾಗಿ ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಪ್ರಧಾನಿ ನಾನು ಕಳಿಸಿದ ಪೇಟವನ್ನು ಧರಿಸಬೇಕು. ಆಗ ನನ್ನ ಕನಸು ಈಡೇರುತ್ತದೆ ಎಂದು ಪಾರ್ಮಾರ್ ಆಶಯಪಟ್ಟಿದ್ದರಂತೆ.

ಈ ಸಂತಸವನ್ನು ಖುದ್ದು ಹಂಚಿಕೊಂಡಿರುವ ಪಾರ್ಮಾರ್ ಗುಜರಾತ್​​ ಸಂಸದ ಸಿ.ಆರ್​ ಪಾಟೀಲ್ ಅವರಿಂದ ನನಗೆ ಕರೆ ಬಂದಿದ್ದು, ಆರು ಮುಂಡಾಸುಗಳನ್ನು ತಯಾರಿಸುವಂತೆ ತಿಳಿಸಿದ್ದರು. ಆ ಪೇಟಗಳನ್ನು ಪ್ರಧಾನಿ ಕಚೇರಿಗೆ ಕಳುಹಿಸಲಾಗುವುದು ಎಂದು ಹೇಳಿದರು. ಪಾಟೀಲ್ ಅಣತಿಯಂತೆ ಪಾರ್ಮಾರ್ ಆರು ಪೇಟಗಳನ್ನು ತಯಾರಿಸಿ ಆಗಸ್ಟ್ 10 ರಂದು ಪಾಟೀಲ್ ಕಚೇರಿಗೆ ಕಳುಹಿಸಿದ್ದರು.

ಪ್ರಧಾನಿ ಮೋದಿ ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಎರಡು ಬಾರಿ ಅವರನ್ನು ಭೇಟಿಯಾಗಲು ನನಗೆ ಅವಕಾಶ ಸಿಕ್ಕಿತು. ಆ ಸಮಯದಲ್ಲಿ ನಾನು ಅವರಿಗೆ ಪೇಟಗಳನ್ನು ಉಡುಗೊರೆಯಾಗಿ ನೀಡಿದ್ದೆ. ಆದರೆ ಅಂದು ಅವರು ಆ ಮುಂಡಾಸುಗಳನ್ನು ಧರಿಸಿರಲಿಲ್ಲ. ಆದರೆ, ಈ ಬಾರಿ ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಭಾಷಣ ಮಾಡುವಾಗ ಪ್ರಧಾನಿ ನಾನು ಕಳಿಸಿದ್ದ ಮುಂಡಾಸನ್ನು ಧರಿಸಿದ್ದು ನನಗೆ ತುಂಬಾ ಸಂತೋಷ ತಂದುಕೊಟ್ಟಿದೆ ಎಂದಿದ್ದಾರೆ. ಜೊತೆಗೆ, ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯಂಥ ಹಲವಾರು ನಾಯಕರು ಸಹ ನನ್ನಿಂದ ಉಡುಗೊರೆಯಾಗಿ ಪೇಟಗಳನ್ನು ಪಡೆದಿದ್ದಾರೆ ಎಂದು ಪಾರ್ಮಾರ್ ಹೇಳಿದರು.

ಪಾರ್ಮಾರ್ ವೃತ್ತಿಯಲ್ಲಿ ಕೃಷಿಕರಾಗಿದ್ರೂ ಮುಂಡಾಸುಗಳನ್ನ ತಯಾರಿಸುವುದು ಅವರ ಹವ್ಯಾಸ. ಕಳೆದ 16 ವರ್ಷಗಳಿಂದ ನಾನು ರಜಪೂತ ಸಮುದಾಯದ ಜನರಿಗಾಗಿ ಪೇಟಗಳನ್ನು ಕಟ್ಟುತ್ತಿದ್ದೇನೆ. ನಾನು ಕೇವಲ 18 ಸೆಕೆಂಡ್​ನಲ್ಲಿ ಒಂದು ಪೇಟವನ್ನು ಕಟ್ಟಬಲ್ಲೆ ಎಂದು ಪಾರ್ಮಾರ್ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ