AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ರಾಖಿ ಕಟ್ಟಲಿದ್ದಾರೆ ಪಾಕ್ ಸಹೋದರಿ; ಈ ಬಾರಿ ಅದನ್ನು ನಾನೇ ಮಾಡಿದ್ದು ಎಂದ ಕಮರ್ ಮೊಹ್ಸಿನ್ ಶೇಖ್

ನಾನು ಅವರಿಗಾಗಿ ನಿರ್ದಿಷ್ಟವಾಗಿ ಕೆಂಪು ಬಣ್ಣದ ರಾಖಿಯನ್ನು ಮಾಡಿದ್ದೇನೆ. ಕೆಂಪು ಬಣ್ಣವನ್ನು ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮೊದಲು, ನಾನು ಅವರರು ಗುಜರಾತ್‌ನ ಮುಖ್ಯಮಂತ್ರಿಯಾಗಬೇಕೆಂದು ಪ್ರಾರ್ಥಿಸಿದ್ದೆ, ಅವರು ಆದರು. ನಾನು ರಾಖಿ ಕಟ್ಟಿದಾಗಲೆಲ್ಲ ಅವರು ಪ್ರಧಾನಿಯಾಗಬೇಕು ಎಂಬ ನನ್ನ ಆಸೆಯನ್ನು ವ್ಯಕ್ತಪಡಿಸುತ್ತಿದ್ದೆ. ಅವರ ಪ್ರತಿಕ್ರಿಯೆ ಯಾವಾಗಲೂ ಸಕಾರಾತ್ಮಕವಾಗಿತ್ತು, ನಿಮ್ಮ ಎಲ್ಲಾ ಆಸೆಗಳನ್ನು ದೇವರು ಪೂರೈಸುತ್ತಾನೆ. ಈಗ, ಅವರು ಪ್ರಧಾನಿಯಾಗಿ ದೇಶಕ್ಕಾಗಿ ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಗೆ ರಾಖಿ ಕಟ್ಟಲಿದ್ದಾರೆ ಪಾಕ್ ಸಹೋದರಿ; ಈ ಬಾರಿ ಅದನ್ನು ನಾನೇ ಮಾಡಿದ್ದು ಎಂದ ಕಮರ್ ಮೊಹ್ಸಿನ್ ಶೇಖ್
ಕಮರ್ ಮೊಹ್ಸಿನ್ ಶೇಖ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 29, 2023 | 2:09 PM

Share

ದೆಹಲಿ ಆಗಸ್ಟ್ 29: ಈ ರಕ್ಷಾ ಬಂಧನದ (Raksha Bandhan) ಸಂದರ್ಭದಲ್ಲಿ ಪ್ರಧಾನಿಗೆ ರಾಖಿ ಕಟ್ಟಲು ನರೇಂದ್ರ ಮೋದಿ (Narendra Modi) ಅವರ ರಾಖಿ ಸಹೋದರಿ ಎಂದು ಕರೆಯಲ್ಪಡುವ ಪಾಕಿಸ್ತಾನಿ ಮೂಲದ ಕಮರ್ ಮೊಹ್ಸಿನ್ ಶೇಖ್ (Qamar Mohsin Sheikh) ಅವರು ನವದೆಹಲಿಗೆ ಭೇಟಿ ನೀಡಲಿದ್ದಾರೆ. ಶೇಖ್ ಕಳೆದ 30 ವರ್ಷಗಳಿಂದ ಪ್ರತಿ ವರ್ಷ ಮೋದಿಗೆ ರಾಖಿ ಕಳುಹಿಸುತ್ತಿದ್ದಾರೆ. ಈ ಬಾರಿ ನಾನೇ ‘ರಾಖಿ’ ಮಾಡಿದ್ದೇನೆ. ಅವರು ಓದಲು ಇಷ್ಟಪಡುವ ಕಾರಣ ನಾನು ಅವರಿಗೆ ಕೃಷಿ ಪುಸ್ತಕವನ್ನು ಉಡುಗೊರೆಯಾಗಿ ನೀಡುತ್ತೇನೆ. ಕಳೆದ ಎರಡು-ಮೂರು ವರ್ಷಗಳಿಂದ ಕೋವಿಡ್ -19 ನಿಂದ ಹೋಗಲು ಸಾಧ್ಯವಾಗಲಿಲ್ಲ. ಆದರೆ ಈ ಬಾರಿ, ನಾನು ಅವರನ್ನು ಖುದ್ದಾಗಿ ಭೇಟಿಯಾಗುತ್ತಿದ್ದೇನೆ ಎಂದು ಶೇಖ್ ಹೇಳಿದ್ದಾರೆ.

ನಾನು ಅವರಿಗಾಗಿ ನಿರ್ದಿಷ್ಟವಾಗಿ ಕೆಂಪು ಬಣ್ಣದ ರಾಖಿಯನ್ನು ಮಾಡಿದ್ದೇನೆ. ಕೆಂಪು ಬಣ್ಣವನ್ನು ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮೊದಲು, ನಾನು ಅವರರು ಗುಜರಾತ್‌ನ ಮುಖ್ಯಮಂತ್ರಿಯಾಗಬೇಕೆಂದು ಪ್ರಾರ್ಥಿಸಿದ್ದೆ, ಅವರು ಆದರು. ನಾನು ರಾಖಿ ಕಟ್ಟಿದಾಗಲೆಲ್ಲ ಅವರು ಪ್ರಧಾನಿಯಾಗಬೇಕು ಎಂಬ ನನ್ನ ಆಸೆಯನ್ನು ವ್ಯಕ್ತಪಡಿಸುತ್ತಿದ್ದೆ. ಅವರ ಪ್ರತಿಕ್ರಿಯೆ ಯಾವಾಗಲೂ ಸಕಾರಾತ್ಮಕವಾಗಿತ್ತು, ನಿಮ್ಮ ಎಲ್ಲಾ ಆಸೆಗಳನ್ನು ದೇವರು ಪೂರೈಸುತ್ತಾನೆ. ಈಗ, ಅವರು ಪ್ರಧಾನಿಯಾಗಿ ದೇಶಕ್ಕಾಗಿ ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಪ್ರಧಾನಿಯವರಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ಕಳುಹಿಸುವಾಗ, ಈ ವರ್ಷ ಅವರನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ ಎಂದು ಶೇಖ್ ಹೇಳಿದ್ದರು. 2024 ರ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿದ ಅವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ, ಅವರು ಇದಕ್ಕೆ ಅರ್ಹರು ಏಕೆಂದರೆ ಅವರು ಆ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಮತ್ತು ಪ್ರತಿ ಬಾರಿಯೂ ಅವರು ಭಾರತದ ಪ್ರಧಾನಿಯಾಗಬೇಕೆಂದು ನಾನು ಬಯಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಮೋದಿಗೆ ಕರೆ ಮಾಡಿ ಮಾತನಾಡಿದ ರಷ್ಯಾ ಅಧ್ಯಕ್ಷ ಪುಟಿನ್; ದ್ವಿಪಕ್ಷೀಯ ಸಂಬಂಧ, ಜಿ20 ಶೃಂಗಸಭೆ ಬಗ್ಗೆ ಚರ್ಚೆ

ರಕ್ಷಾ ಬಂಧನದ ಸಂದರ್ಭದಲ್ಲಿ, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಅವರ ಸಮೃದ್ಧಿ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಈ ಹಬ್ಬವನ್ನು ಹಿಂದೂ ಚಂದ್ರನ ಕ್ಯಾಲೆಂಡರ್ ತಿಂಗಳ ಶ್ರಾವಣದ ಕೊನೆಯ ದಿನದಂದು ಆಚರಿಸಲಾಗುತ್ತದೆ, ಇದು ಸಾಮಾನ್ಯವಾಗಿ ಆಗಸ್ಟ್‌ನಲ್ಲಿ ಬರುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!