AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾ ಘಾಟ್​​ಗೆ ಪ್ರಧಾನಿ ಮೋದಿ ಸಹೋದರಿ ವಸಂತಿ ಬೆನ್ ಭೇಟಿ, ಸರಳತೆಗೆ ನೆಟ್ಟಿಗರ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ಸಹೋದರಿ ವಸಂತಿ ಬೆನ್ ಇತ್ತೀಚೆಗೆ ಋಷಿಕೇಶದಲ್ಲಿರುವ ಗಂಗಾ ಘಾಟ್​ಗೆ ಭೇಟಿ ನೀಡಿದ್ದರು. ಅವರ ಸರಳತೆಯನ್ನು ನೆಟ್ಟಿಗಳು ಬಾಯ್ತುಂಬಾ ಹೊಗಳಿದ್ದಾರೆ. ಅಪೂರ್ವ ಸಿಂಗ್ ಎಂಬುವವರು ಎಕ್ಸ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಈಕೆ ಸಾಮಾನ್ಯ ಮಹಿಳೆಯಲ್ಲ, ಭಾರತದ ಅತ್ಯಂತ ಜನಪ್ರಿಯ ನಾಯಕಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ವಸಂತಿಬೆನ್ ಮೋದಿ.

ಗಂಗಾ ಘಾಟ್​​ಗೆ ಪ್ರಧಾನಿ ಮೋದಿ ಸಹೋದರಿ ವಸಂತಿ ಬೆನ್ ಭೇಟಿ, ಸರಳತೆಗೆ ನೆಟ್ಟಿಗರ ಮೆಚ್ಚುಗೆ
ವಸಂತಿಬೆನ್
ನಯನಾ ರಾಜೀವ್
| Edited By: |

Updated on:Nov 11, 2025 | 12:51 PM

Share

ಋಷಿಕೇಶ, ನವೆಂಬರ್ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ಸಹೋದರಿ ವಸಂತಿ ಬೆನ್ ಇತ್ತೀಚೆಗೆ ಋಷಿಕೇಶದಲ್ಲಿರುವ ಗಂಗಾ ಘಾಟ್​ಗೆ ಭೇಟಿ ನೀಡಿದ್ದರು. ಅವರ ಸರಳತೆಯನ್ನು ನೆಟ್ಟಿಗಳು ಬಾಯ್ತುಂಬಾ ಹೊಗಳಿದ್ದಾರೆ. ಅಪೂರ್ವ ಸಿಂಗ್ ಎಂಬುವವರು ಎಕ್ಸ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ.

ಈಕೆ ಸಾಮಾನ್ಯ ಮಹಿಳೆಯಲ್ಲ, ಭಾರತದ ಅತ್ಯಂತ ಜನಪ್ರಿಯ ನಾಯಕಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ವಸಂತಿಬೆನ್ ಮೋದಿ.ಅವರು ಸಾಮಾನ್ಯ ವ್ಯಕ್ತಿಯಂತೆ, ಗಂಗಾ ಘಾಟ್‌ನಲ್ಲಿ ಸ್ನಾನ ಮಾಡಲು ಬಂದಿದ್ದರು.

ವರದಿಗಳ ಪ್ರಕಾರ, ವಸಂತಿಬೆನ್ ಮತ್ತು ಅವರ ಪತಿ ಹಸ್ಮುಖ್‌ಲಾಲ್ ಮೋದಿ ಆರು ದಿನಗಳ ಧಾರ್ಮಿಕ ಪ್ರವಾಸಕ್ಕಾಗಿ ಋಷಿಕೇಶ ಬಂದಿದ್ದರು.ಅವರನ್ನು ಹೋಟೆಲ್ ಉದ್ಯಮಿ ಅಕ್ಷತ್ ಗೋಯಲ್ ಮತ್ತು ನಮಾಮಿ ನರ್ಮದಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಪಂಡಿತ್ ಹರೀಶ್ ಉನಿಯಾಲ್ ಅವರು ಪ್ರೀತಿಯಿಂದ ಬರಮಾಡಿಕೊಂಡರು, ಋಷಿಕೇಶದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು.

ವಿಡಿಯೋ ಇಲ್ಲಿದೆ

ಕೆಲವು ನೆಟ್ಟಿಗರು ಆರಂಭದಲ್ಲಿ ಇದನ್ನು ಕಾಶಿ ಘಾಟ್‌ನಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಈ ವಿಡಿಯೋವನ್ನು ಉತ್ತರಾಖಂಡದ ಋಷಿಕೇಶದಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಗಳು ಸ್ಪಷ್ಟಪಡಿಸಿವೆ.

ಅನೇಕ ನೆಟ್ಟಿಗರು ಪ್ರಧಾನಿ ಕುಟುಂಬದ ಸರಳತೆಯನ್ನು ಶ್ಲಾಘಿಸಿದರು ಮತ್ತು ಇತರೆ ರಾಜಕೀಯ ಕುಟುಂಬಗಳ ಜೀವನಶೈಲಿಯೊಂದಿಗೆ ಇದನ್ನು ಹೋಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:30 pm, Tue, 11 November 25

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!