AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಮೇ 29ರಿಂದ ಎರಡು ದಿನ ಈ ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಮೇ 29-30ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶದ ಪ್ರವಾಸದಲ್ಲಿರಲಿದ್ದಾರೆ. ಈ ವೇಳೆ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.ಮೇ 29ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಸಿಕ್ಕಿಂನಲ್ಲಿ ನಡೆಯುವ “Sikkim@50: Where Progress Meets Purpose and Nature Nurtures Growth” ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

Narendra Modi:  ಮೇ 29ರಿಂದ ಎರಡು ದಿನ  ಈ ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ
ನರೇಂದ್ರ ಮೋದಿ Image Credit source: PTI
ನಯನಾ ರಾಜೀವ್
|

Updated on:May 28, 2025 | 1:00 PM

Share

ನವದೆಹಲಿ, ಮೇ28: ಪ್ರಧಾನಿ ನರೇಂದ್ರ ಮೋದಿ(Narendra Modi) ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮೇ 29-30 ಎರಡು ದಿನಗಳ ಕಾಲ ಈ ರಾಜ್ಯಗಳ ಪ್ರವಾಸದಲ್ಲಿರಲಿದ್ದಾರೆ. ಮೇ 29ರಂದು ಮೋದಿ ಸಿಕ್ಕಿಂಗೆ ಭೇಟಿ ನೀಡಲಿದ್ದು ಬೆಳಗ್ಗೆ 11 ಗಂಟೆಗೆ Sikkim@50 ವೇರ್ ಪ್ರೋಗ್ರೆಸ್ ಮೀಟ್ಸ್​ ಪರ್ಪಸ್ ಆ್ಯಂಡ್ ನೇಚರ್ ನರ್ಚರ್ಸ್​ ಗ್ರೋಥ್​ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಅವರು ಸಿಕ್ಕಿಂನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಂತರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 2.15ರ ಸುಮಾರಿಗೆ ಅಲಿಪುರ್ದಾರ್, ಕೂಚ್ ಬಿಹಾರ್ ಜಿಲ್ಲೆಗಳಲ್ಲಿ ನಗರ ಅನಿಲ ವಿತರಣಾ ಯೋಜನೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದಲ್ಲದೆ ಸಂಜೆ 5.45ರ ಸುಮಾರಿಗೆ ಬಿಹಾರಕ್ಕೆ ಭೇಟಿ ನೀಡಿ ಪಾಟ್ನಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ಉದ್ಘಾಟಿಸಲಿದ್ದಾರೆ.

ಮೇ 30ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಬಿಹಾರದ ಕರಕಟ್​ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಬಳಿಕ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, 2.45ರ ಕಾನ್ಪುರ ನಗರದಲ್ಲಿ ಸುಮಾರು 20,900 ಕೋಟಿ ರೂ.ಗಳಷ್ಟು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿ ಉದ್ಘಾಟಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ
Image
ನಮ್ಮ ಹೆಣ್ಣುಮಕ್ಕಳ ಕುಂಕುಮ ಅಳಿಸಿದವರನ್ನು ಹೊಸಕಿ ಹಾಕಿದ್ದೇವೆ: ಮೋದಿ
Image
ತನ್ನ ಅಸ್ತಿತ್ವಕ್ಕೆ ಭಾರತವೇ ದೊಡ್ಡ ಬೆದರಿಕೆ ಎಂದುಕೊಂಡಿದೆ ಪಾಕಿಸ್ತಾನ
Image
ಯೂನಸ್ ಬಾಂಗ್ಲಾದೇಶವನ್ನು ಅಮೆರಿಕಕ್ಕೆ ಮಾರುತ್ತಿದ್ದಾರೆ: ಶೇಖ್ ಹಸೀನಾ
Image
ಪಾಕ್​ ಸರ್ಕಾರದೊಂದಿಗೆ ಮಾತನಾಡುವುದು ನಿಷ್ಪ್ರಯೋಜಕ: ಇಮ್ರಾನ್ ಖಾನ್

ಮತ್ತಷ್ಟು ಓದಿ: ಗಾಂಧಿನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಜನರಿಂದ ಹೂವಿನ ಮಳೆ

ಸಿಕ್ಕಿಂನಲ್ಲಿ ಪ್ರಧಾನಿ ಮೋದಿ ಸಿಕ್ಕಿಂನಲ್ಲಿ ಪ್ರಧಾನಿಯವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಾಮ್ಚಿ ಜಿಲ್ಲೆಯಲ್ಲಿ 750 ಕೋಟಿ ರೂ.ಗೂ ಹೆಚ್ಚು ಮೌಲ್ಯದ 500 ಹಾಸಿಗೆಗಳ ಹೊಸ ಜಿಲ್ಲಾ ಆಸ್ಪತ್ರೆ, ಗ್ಯಾಲ್ಶಿಂಗ್ ಜಿಲ್ಲೆಯ ಪೆಲ್ಲಿಂಗ್‌ನ ಸಂಗಚೋಲಿಂಗ್‌ನಲ್ಲಿ ಪ್ರಯಾಣಿಕರ ರೋಪ್‌ವೇ, ಗ್ಯಾಂಗ್ಟಾಕ್ ಜಿಲ್ಲೆಯ ಸಂಗ್ಖೋಲಾದ ಅಟಲ್ ಅಮೃತ್ ಉದ್ಯಾನದಲ್ಲಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆ ಸೇರಿದಂತೆ ಇತರ ಯೋಜನೆಗಳಿವೆ.

ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ಭಾರತದಲ್ಲಿ ನಗರ ಅನಿಲ ವಿತರಣಾ (ಸಿಜಿಡಿ) ಜಾಲವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಪ್ರಧಾನಿ ಪಶ್ಚಿಮ ಬಂಗಾಳದ ಅಲಿಪುರ್ದಾರ್ ಮತ್ತು ಕೂಚ್ ಬೆಹಾರ್ ಜಿಲ್ಲೆಗಳಲ್ಲಿ ಸಿಜಿಡಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 1010 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಈ ಯೋಜನೆಯು, ಸರ್ಕಾರ ನಿಗದಿಪಡಿಸಿದ ಕನಿಷ್ಠ ಕೆಲಸದ ಕಾರ್ಯಕ್ರಮ (ಎಂಡಬ್ಲ್ಯೂಪಿ) ಗುರಿಗಳಿಗೆ ಅನುಗುಣವಾಗಿ ಸುಮಾರು 19 ಸಿಎನ್‌ಜಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ವಾಹನ ಸಂಚಾರಕ್ಕೆ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಒದಗಿಸುವುದರ ಜೊತೆಗೆ 2.5 ಲಕ್ಷಕ್ಕೂ ಹೆಚ್ಚು ಮನೆಗಳು, 100 ಕ್ಕೂ ಹೆಚ್ಚು ವಾಣಿಜ್ಯ ಸಂಸ್ಥೆಗಳು ಮತ್ತು ಕೈಗಾರಿಕೆಗಳಿಗೆ ಪೈಪ್ಡ್ ನೈಸರ್ಗಿಕ ಅನಿಲ (ಪಿಎನ್‌ಜಿ) ಒದಗಿಸುವ ಗುರಿಯನ್ನು ಹೊಂದಿದೆ.

ಬಿಹಾರದಲ್ಲಿ ಪ್ರಧಾನಿ ಮೋದಿ ಏಪ್ರಿಲ್ 29 ರಂದು, ಮೋದಿ ಪಾಟ್ನಾ ವಿಮಾನ ನಿಲ್ದಾಣದ ಹೊಸದಾಗಿ ನಿರ್ಮಿಸಲಾದ ಪ್ರಯಾಣಿಕರ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಸುಮಾರು 1,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಟರ್ಮಿನಲ್ ವರ್ಷಕ್ಕೆ 1 ಕೋಟಿ ಪ್ರಯಾಣಿಕರನ್ನು ನಿರ್ವಹಿಸಬಲ್ಲದು. ಬಿಹ್ತಾ ವಿಮಾನ ನಿಲ್ದಾಣವು ಪಾಟ್ನಾ ಬಳಿ ಶೈಕ್ಷಣಿಕ ಕೇಂದ್ರವಾಗಿ ವೇಗವಾಗಿ ಹೊರಹೊಮ್ಮುತ್ತಿರುವ ಪಟ್ಟಣಕ್ಕೆ ಸೇವೆ ಸಲ್ಲಿಸಲಿದ್ದು, ಐಐಟಿ ಪಾಟ್ನಾ ಮತ್ತು ಪ್ರಸ್ತಾವಿತ ಎನ್ಐಟಿ ಪಾಟ್ನಾ ಕ್ಯಾಂಪಸ್ ಅನ್ನು ಹೊಂದಿದೆ.

ಮೇ 30 ರಂದು ಪ್ರಧಾನಿ  ಕರಕಟ್‌ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಈ ಪ್ರದೇಶದಲ್ಲಿ ವಿದ್ಯುತ್ ಮೂಲಸೌಕರ್ಯವನ್ನು ಉತ್ತೇಜಿಸುವ ಸಲುವಾಗಿ,  ಔರಂಗಾಬಾದ್ ಜಿಲ್ಲೆಯಲ್ಲಿ 29,930 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ನಬಿನಗರ ಸೂಪರ್ ಥರ್ಮಲ್ ಪವರ್ ಪ್ರಾಜೆಕ್ಟ್, ಹಂತ-II (3×800 MW) ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಯು ಬಿಹಾರ ಮತ್ತು ಪೂರ್ವ ಭಾರತಕ್ಕೆ ಇಂಧನ ಭದ್ರತೆಯನ್ನು ಖಚಿತಪಡಿಸುವ ಗುರಿಯನ್ನು ಹೊಂದಿದೆ. ಇದು ಕೈಗಾರಿಕಾ ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಈ ಪ್ರದೇಶದಲ್ಲಿ ಕೈಗೆಟುಕುವ ವಿದ್ಯುತ್ ಅನ್ನು ಒದಗಿಸುತ್ತದೆ.

ದೇಶಾದ್ಯಂತ ರೈಲು ಮೂಲಸೌಕರ್ಯವನ್ನು ಸುಧಾರಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿಯವರು ಸೋನ್ ನಗರ್ – ಮೊಹಮ್ಮದ್ ಗಂಜ್ ನಡುವಿನ 1330 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 3 ನೇ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ. 2,120 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಕಾನ್ಪುರ ಮೆಟ್ರೋ ರೈಲು ಯೋಜನೆಯ ಚುನ್ನಿಗಂಜ್ ಮೆಟ್ರೋ ನಿಲ್ದಾಣದಿಂದ ಕಾನ್ಪುರ ಸೆಂಟ್ರಲ್ ಮೆಟ್ರೋ ನಿಲ್ದಾಣದ ವಿಭಾಗವನ್ನು ಉದ್ಘಾಟಿಸಲಿದ್ದಾರೆ.

ಉತ್ತರ ಪ್ರದೇಶದ ಇಂಧನ ಸಾಮರ್ಥ್ಯವನ್ನು ಹೆಚ್ಚಿಸುವ 8,300 ಕೋಟಿಗೂ ರೂ.ಗೂ ಹೆಚ್ಚು ಮೌಲ್ಯದ 660 ಮೆಗಾವ್ಯಾಟ್ ಪಂಕಿ ಉಷ್ಣ ವಿದ್ಯುತ್ ವಿಸ್ತರಣಾ ಯೋಜನೆಯನ್ನು ಕಾನ್ಪುರದಲ್ಲಿ ಪ್ರಧಾನಿ ಉದ್ಘಾಟಿಸಲಿದ್ದಾರೆ. ರೂ. 9,330 ಕೋಟಿಗೂ ಹೆಚ್ಚು ಮೌಲ್ಯದ ಘಟಂಪುರ ಉಷ್ಣ ವಿದ್ಯುತ್ ಯೋಜನೆಯ ಮೂರು 660 ಮೆಗಾವ್ಯಾಟ್ ಘಟಕಗಳನ್ನು ಉದ್ಘಾಟಿಸಲಿದ್ದು, ಇದು ವಿದ್ಯುತ್ ಪೂರೈಕೆಯನ್ನು ಗಮನಾರ್ಹವಾಗಿ ಬಲಪಡಿಸಲಿದೆ.

ಕಾನ್ಪುರದ ಕಲ್ಯಾಣಪುರ ಪಂಕಿ ಮಂದಿರದಲ್ಲಿ ಪಂಕಿ ರಸ್ತೆಯಲ್ಲಿರುವ ಪಂಕಿ ಪವರ್ ಹೌಸ್ ರೈಲ್ವೆ ಕ್ರಾಸಿಂಗ್ ಮತ್ತು ಪಂಕಿ ಧಾಮ್ ಕ್ರಾಸಿಂಗ್ ಮೇಲೆ ರೈಲು ಮೇಲ್ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ. ಇದು ಕಲ್ಲಿದ್ದಲು ಮತ್ತು ತೈಲ ಸಾಗಣೆಯನ್ನು ಸುಗಮಗೊಳಿಸುವ ಮೂಲಕ ಪಂಕಿ ಉಷ್ಣ ವಿದ್ಯುತ್ ವಿಸ್ತರಣಾ ಯೋಜನೆಯ ಸಾಗಣೆಯನ್ನು ಬೆಂಬಲಿಸುತ್ತದೆ ಮತ್ತು ಸ್ಥಳೀಯ ಜನರಿಗೆ ಸಂಚಾರ ದಟ್ಟಣೆಯನ್ನು ನಿವಾರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:59 pm, Wed, 28 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ