ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯ ಸಂಕೇತಿಸುವ ಹಬ್ಬವೇ ವಿಜಯದಶಮಿ: ಪ್ರಧಾನಿ ಮೋದಿ
ವಿಜಯದಶಮಿ ಎಂದರೆ ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಂಕೇತಿಸುವ ಹಬ್ಬ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು ವಿಜಯದಶಮಿಯ ಶುಭಾಶಯ ತಿಳಿಸಿದ್ದಾರೆ. ವಿಜಯ ದಶಮಿ ಎಂಬುದು ದುಷ್ಟತನ ಹಾಗೂ ಸುಳ್ಳಿನ ಮೇಲೆ ಒಳ್ಳೆಯದು ಹಾಗೂ ಸತ್ಯದ ವಿಜಯವನ್ನು ಸಂಕೇತಿಸುತ್ತದೆ.

ನವದೆಹಲಿ, ಅಕ್ಟೋಬರ್ 02: ವಿಜಯದಶಮಿ ಎಂದರೆ ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಂಕೇತಿಸುವ ಹಬ್ಬ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು ವಿಜಯದಶಮಿಯ ಶುಭಾಶಯ ತಿಳಿಸಿದ್ದಾರೆ. ವಿಜಯ ದಶಮಿ ಎಂಬುದು ದುಷ್ಟತನ ಹಾಗೂ ಸುಳ್ಳಿನ ಮೇಲೆ ಒಳ್ಳೆಯದು ಹಾಗೂ ಸತ್ಯದ ವಿಜಯವನ್ನು ಸಂಕೇತಿಸುತ್ತದೆ.
ಈ ಶುಭ ಸಂದರ್ಭವು ಧೈರ್ಯ, ಬುದ್ಧಿವಂತಿಕೆ ಹಾಗೂ ಭಕ್ತಿಯ ಹಾದಿಯಲ್ಲಿ ನಡೆಯಲು ಎಲ್ಲರಿಗೂ ಸ್ಫೂರ್ತಿ ನೀಡಲಿ, ಎಲ್ಲರಿಗೂ ವಿಜಯದಶಮಿಯ ಶುಭಾಶಯಗಳು ಎಂದು ಬರೆದಿದ್ದಾರೆ. ಇಂದು ಗಾಂಧಿ ಜಯಂತಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಮಹಾತ್ಮ ಗಾಂಧಿಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಧೈರ್ಯ ಹಾಗೂ ಸರಳತೆ ದೇಶದ ದೊಡ್ಡ ಬದಲಾವಣೆಗೆ ಹೇಗೆ ಸಾಧನವಾಗಬಹುದು ಎಂಬುದು ಗಾಂಧೀಜಿಯವರನ್ನು ನೋಡಿಯೇ ಕಲಿಯಬೇಕು.
ಸೇವೆ, ಕರುಣೆ, ಅಹಿಂಸೆಯೇ ಜನರನ್ನು ಸಬಲೀಕರಣಗೊಳಿಸಲು ಅಗತ್ಯ ಸಾಧನವೆಂದು ಅವರು ನಂಬಿದ್ದರು. ವಿಕಸಿತ ಭಾರತ ನಿರ್ಮಿಸಲು ಅವರ ಮಾರ್ಗವನ್ನೇ ಅನುಸರಿಸುತ್ತೇವೆ ಎಂದು ಬರೆದಿದ್ದಾರೆ. ಇಂದು ಲಾಲ್ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಕೂಡ, ಅವರ ಬಗ್ಗೆಯೂ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.
ಮತ್ತಷ್ಟು ಓದಿ: ಅಕ್ಟೋಬರ್ 1ರಂದು ಆರ್ಎಸ್ಎಸ್ ಶತಮಾನೋತ್ಸವ, ಪ್ರಧಾನಿ ನರೇಂದ್ರ ಮೋದಿ ಭಾಗಿ
ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಸಾಧಾರಣ ರಾಜಕಾರಣಿಯಾಗಿದ್ದು, ಅವರ ಸಮಗ್ರತೆ, ನಮ್ರತೆ ಮತ್ತು ದೃಢಸಂಕಲ್ಪವು ಸವಾಲಿನ ಸಮಯದಲ್ಲೂ ಭಾರತವನ್ನು ಬಲಪಡಿಸಿತು. ಅವರು ಅನುಕರಣೀಯ ನಾಯಕತ್ವ, ಶಕ್ತಿ ಮತ್ತು ನಿರ್ಣಾಯಕ ಕ್ರಿಯೆಯ ವ್ಯಕ್ತಿತ್ವವನ್ನು ಹೊಂದಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎಂಬ ಅವರ ಸ್ಪಷ್ಟ ಕರೆ ನಮ್ಮ ಜನರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು.
ಪ್ರಧಾನಿ ಮೋದಿ ಪೋಸ್ಟ್
विजयादशमी बुराई और असत्य पर अच्छाई और सत्य की विजय का प्रतीक है। मेरी कामना है कि इस पावन अवसर पर हर किसी को साहस, बुद्धि और भक्ति के मार्ग पर निरंतर अग्रसर रहने की प्रेरणा मिले।
देशभर के मेरे परिवारजनों को विजयादशमी की बहुत-बहुत शुभकामनाएं।
— Narendra Modi (@narendramodi) October 2, 2025
ಬಲಿಷ್ಠ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಅವರು ನಮ್ಮನ್ನು ಪ್ರೇರೇಪಿಸುತ್ತಲೇ ಇದ್ದಾರೆ ಎಂದು ಬರೆದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




