AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganga Expressway: ಇಂದು ಪ್ರಧಾನಿ ಮೋದಿ ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ; ಗಂಗಾ ಎಕ್ಸ್​ಪ್ರೆಸ್​ ವೇಗೆ ಶಂಕುಸ್ಥಾಪನೆ

ಯೋಜನೆಯ ವಿನ್ಯಾಸದ ಪ್ರಕಾರ ಎಕ್ಸ್​ಪ್ರೇಸ್​ ವೇಗೆ ಘರ್​ಮುಕ್ತೇಶ್ವರ್​​ನಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದು ಹಾಪುರ ಮತ್ತು ಬುಲಂದ್​ಶಹರ್​ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

Ganga Expressway: ಇಂದು ಪ್ರಧಾನಿ ಮೋದಿ ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ; ಗಂಗಾ ಎಕ್ಸ್​ಪ್ರೆಸ್​ ವೇಗೆ ಶಂಕುಸ್ಥಾಪನೆ
ಪ್ರಧಾನಿ ಮೋದಿ
TV9 Web
| Edited By: |

Updated on: Dec 18, 2021 | 7:33 AM

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಮತ್ತೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಶಹಜಾನ್​ಪುರದಲ್ಲಿ 36,230 ಕೋಟಿ ರೂಪಾಯಿ ವೆಚ್ಚದ ಗಂಗಾ ಎಕ್ಸ್​ಪ್ರೆಸ್​ ವೇ (Ganga Expressway) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಉತ್ತರಪ್ರದೇಶದ ಪಶ್ಚಿಮ ಮತ್ತು ಪೂರ್ವ ಭಾಗವನ್ನು ಸಂಪರ್ಕಿಸಲಿದ್ದು, ದೆಹಲಿ, ಹರ್ಯಾಣ  ಮತ್ತು ಬಿಹಾರಕ್ಕೆ ಉತ್ತರಪ್ರದೇಶವನ್ನು ಇನ್ನಷ್ಟು ಸಮೀಪ ಮಾಡಲಿದೆ.  ಈ ಗಂಗಾ ಎಕ್ಸ್​ಪ್ರೆಸ್​ ವೇ 594 ಕಿಮೀ ಉದ್ದ ಇರಲಿದ್ದು, 2020ರ ನವೆಂಬರ್​ 26ರಂದು ಯೋಗಿ ಆದಿತ್ಯನಾಥ್​ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿತ್ತು. 

ಇದೀಗ ನಿರ್ಮಾಣವಾಗಲಿರುವ ಎಕ್ಸ್​ಪ್ರೆಸ್​ ವೇ ಮೀರತ್​​ನಿಂದ ಪ್ರಾರಂಭವಾಗಲಿದ್ದು, ಹಾಪುರ, ಬುಲಂದ್​ಶಹರ್​, ಅಮ್ರೋಹಾ, ಸಂಭಲ್​, ಬಾದೌನ್​, ಶಹಜಹಾನ್‌ಪುರ, ಹರ್ದೋಯಿ, ಉನ್ನಾವೋ, ರಾಯ್ ಬರೇಲಿ ಮತ್ತು ಪ್ರತಾಪ್‌ಗಢಗಳ ಮೂಲಕ ಹಾದುಹೋಗಲಿದೆ. ರಾಜ್ಯದಲ್ಲಿರುವ ಉಳಿದ ಎಕ್ಸ್​ಪ್ರೆಸ್​​ವೇಗಳಂತೆ ಈ ಎಕ್ಸ್​ಪ್ರೆಸ್​ ವೇ ಕೂಡ ಏರ್​ಸ್ಟ್ರಿಪ್​ ಹೊಂದಿರಲಿದ್ದು, ವಿಮಾನಗಳ ತುರ್ತು ಭೂಸ್ಪರ್ಶಕ್ಕೆ ಅವಕಾಶ ಇರಲಿದೆ. ಈ ಏರ್​ಸ್ಟ್ರಿಲ್​ ಶಹಜಾನ್​ಪುರದಲ್ಲಿ 3.5ಕಿಮೀಗಳಷ್ಟು ಉದ್ದ ಇರಲಿದೆ.

ಯೋಜನೆಯ ವಿನ್ಯಾಸದ ಪ್ರಕಾರ ಎಕ್ಸ್​ಪ್ರೇಸ್​ ವೇಗೆ ಘರ್​ಮುಕ್ತೇಶ್ವರ್​​ನಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದು ಹಾಪುರ ಮತ್ತು ಬುಲಂದ್​ಶಹರ್​ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಅದರ ಹೊರತಾಗಿ ಗಂಗಾ ಎಕ್ಸ್​ಪ್ರೆಸ್​ ವೇ ಮಧ್ಯೆ, 9 ಸಾರ್ವಜನಿಕ ಅನುಕೂಲ ಕೇಂದ್ರಗಳು, 7 ರೈಲ್ವೆ ಮೇಲ್ಸೇತುವೆಗಳು, 14 ದೊಡ್ಡ ಸೇತುವೆಗಳು, 126 ಚಿಕ್ಕ ಸೇತುವೆಗಳು, 381 ಅಂಡರ್​ಪಾಸ್​ಗಳು ನಿರ್ಮಾಣವಾಗಲಿವೆ.

ರೈತರಿಂದ ಭೂಮಿ ಖರೀದಿ  ಗಂಗಾ ಎಕ್ಸ್​ಪ್ರೆಸ್​ ವೇ ನಿರ್ಮಣಕ್ಕಾಗಿ ಶೇ.94ರಷ್ಟು ಭೂಮಿಯನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಹೇಳಿದೆ. ಒಟ್ಟಾರೆ 7386 ಹೆಕ್ಟೇರ್​ ಭೂಮಿ ಬೇಕಾಗಿತ್ತು. ಅದನ್ನು ಒಟ್ಟು 82,750 ರೈತರಿಂದ ಖರೀದಿ ಮಾಡಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರು ಪೂರ್ವಾಂಚಲ ಎಕ್ಸ್​ಪ್ರೆಸ್​ ವೇ ಉದ್ಘಾಟನೆ ಮಾಡಿದ್ದರು. ಅದು ಉತ್ತರಪ್ರದೇಶದ ಪೂರ್ವ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಲು ಸಾಲು ಭೇಟಿ; ಮುಂದಿನ 15 ದಿನದಲ್ಲಿ 4 ಬಾರಿ ಪ್ರವಾಸ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ