AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganga Expressway: ಇಂದು ಪ್ರಧಾನಿ ಮೋದಿ ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ; ಗಂಗಾ ಎಕ್ಸ್​ಪ್ರೆಸ್​ ವೇಗೆ ಶಂಕುಸ್ಥಾಪನೆ

ಯೋಜನೆಯ ವಿನ್ಯಾಸದ ಪ್ರಕಾರ ಎಕ್ಸ್​ಪ್ರೇಸ್​ ವೇಗೆ ಘರ್​ಮುಕ್ತೇಶ್ವರ್​​ನಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದು ಹಾಪುರ ಮತ್ತು ಬುಲಂದ್​ಶಹರ್​ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

Ganga Expressway: ಇಂದು ಪ್ರಧಾನಿ ಮೋದಿ ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ; ಗಂಗಾ ಎಕ್ಸ್​ಪ್ರೆಸ್​ ವೇಗೆ ಶಂಕುಸ್ಥಾಪನೆ
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on: Dec 18, 2021 | 7:33 AM

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಮತ್ತೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಶಹಜಾನ್​ಪುರದಲ್ಲಿ 36,230 ಕೋಟಿ ರೂಪಾಯಿ ವೆಚ್ಚದ ಗಂಗಾ ಎಕ್ಸ್​ಪ್ರೆಸ್​ ವೇ (Ganga Expressway) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಉತ್ತರಪ್ರದೇಶದ ಪಶ್ಚಿಮ ಮತ್ತು ಪೂರ್ವ ಭಾಗವನ್ನು ಸಂಪರ್ಕಿಸಲಿದ್ದು, ದೆಹಲಿ, ಹರ್ಯಾಣ  ಮತ್ತು ಬಿಹಾರಕ್ಕೆ ಉತ್ತರಪ್ರದೇಶವನ್ನು ಇನ್ನಷ್ಟು ಸಮೀಪ ಮಾಡಲಿದೆ.  ಈ ಗಂಗಾ ಎಕ್ಸ್​ಪ್ರೆಸ್​ ವೇ 594 ಕಿಮೀ ಉದ್ದ ಇರಲಿದ್ದು, 2020ರ ನವೆಂಬರ್​ 26ರಂದು ಯೋಗಿ ಆದಿತ್ಯನಾಥ್​ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿತ್ತು. 

ಇದೀಗ ನಿರ್ಮಾಣವಾಗಲಿರುವ ಎಕ್ಸ್​ಪ್ರೆಸ್​ ವೇ ಮೀರತ್​​ನಿಂದ ಪ್ರಾರಂಭವಾಗಲಿದ್ದು, ಹಾಪುರ, ಬುಲಂದ್​ಶಹರ್​, ಅಮ್ರೋಹಾ, ಸಂಭಲ್​, ಬಾದೌನ್​, ಶಹಜಹಾನ್‌ಪುರ, ಹರ್ದೋಯಿ, ಉನ್ನಾವೋ, ರಾಯ್ ಬರೇಲಿ ಮತ್ತು ಪ್ರತಾಪ್‌ಗಢಗಳ ಮೂಲಕ ಹಾದುಹೋಗಲಿದೆ. ರಾಜ್ಯದಲ್ಲಿರುವ ಉಳಿದ ಎಕ್ಸ್​ಪ್ರೆಸ್​​ವೇಗಳಂತೆ ಈ ಎಕ್ಸ್​ಪ್ರೆಸ್​ ವೇ ಕೂಡ ಏರ್​ಸ್ಟ್ರಿಪ್​ ಹೊಂದಿರಲಿದ್ದು, ವಿಮಾನಗಳ ತುರ್ತು ಭೂಸ್ಪರ್ಶಕ್ಕೆ ಅವಕಾಶ ಇರಲಿದೆ. ಈ ಏರ್​ಸ್ಟ್ರಿಲ್​ ಶಹಜಾನ್​ಪುರದಲ್ಲಿ 3.5ಕಿಮೀಗಳಷ್ಟು ಉದ್ದ ಇರಲಿದೆ.

ಯೋಜನೆಯ ವಿನ್ಯಾಸದ ಪ್ರಕಾರ ಎಕ್ಸ್​ಪ್ರೇಸ್​ ವೇಗೆ ಘರ್​ಮುಕ್ತೇಶ್ವರ್​​ನಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದು ಹಾಪುರ ಮತ್ತು ಬುಲಂದ್​ಶಹರ್​ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಅದರ ಹೊರತಾಗಿ ಗಂಗಾ ಎಕ್ಸ್​ಪ್ರೆಸ್​ ವೇ ಮಧ್ಯೆ, 9 ಸಾರ್ವಜನಿಕ ಅನುಕೂಲ ಕೇಂದ್ರಗಳು, 7 ರೈಲ್ವೆ ಮೇಲ್ಸೇತುವೆಗಳು, 14 ದೊಡ್ಡ ಸೇತುವೆಗಳು, 126 ಚಿಕ್ಕ ಸೇತುವೆಗಳು, 381 ಅಂಡರ್​ಪಾಸ್​ಗಳು ನಿರ್ಮಾಣವಾಗಲಿವೆ.

ರೈತರಿಂದ ಭೂಮಿ ಖರೀದಿ  ಗಂಗಾ ಎಕ್ಸ್​ಪ್ರೆಸ್​ ವೇ ನಿರ್ಮಣಕ್ಕಾಗಿ ಶೇ.94ರಷ್ಟು ಭೂಮಿಯನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಹೇಳಿದೆ. ಒಟ್ಟಾರೆ 7386 ಹೆಕ್ಟೇರ್​ ಭೂಮಿ ಬೇಕಾಗಿತ್ತು. ಅದನ್ನು ಒಟ್ಟು 82,750 ರೈತರಿಂದ ಖರೀದಿ ಮಾಡಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರು ಪೂರ್ವಾಂಚಲ ಎಕ್ಸ್​ಪ್ರೆಸ್​ ವೇ ಉದ್ಘಾಟನೆ ಮಾಡಿದ್ದರು. ಅದು ಉತ್ತರಪ್ರದೇಶದ ಪೂರ್ವ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಲು ಸಾಲು ಭೇಟಿ; ಮುಂದಿನ 15 ದಿನದಲ್ಲಿ 4 ಬಾರಿ ಪ್ರವಾಸ 

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ