AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganga Expressway: ಇಂದು ಪ್ರಧಾನಿ ಮೋದಿ ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ; ಗಂಗಾ ಎಕ್ಸ್​ಪ್ರೆಸ್​ ವೇಗೆ ಶಂಕುಸ್ಥಾಪನೆ

ಯೋಜನೆಯ ವಿನ್ಯಾಸದ ಪ್ರಕಾರ ಎಕ್ಸ್​ಪ್ರೇಸ್​ ವೇಗೆ ಘರ್​ಮುಕ್ತೇಶ್ವರ್​​ನಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದು ಹಾಪುರ ಮತ್ತು ಬುಲಂದ್​ಶಹರ್​ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

Ganga Expressway: ಇಂದು ಪ್ರಧಾನಿ ಮೋದಿ ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ; ಗಂಗಾ ಎಕ್ಸ್​ಪ್ರೆಸ್​ ವೇಗೆ ಶಂಕುಸ್ಥಾಪನೆ
ಪ್ರಧಾನಿ ಮೋದಿ
TV9 Web
| Edited By: |

Updated on: Dec 18, 2021 | 7:33 AM

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಮತ್ತೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಶಹಜಾನ್​ಪುರದಲ್ಲಿ 36,230 ಕೋಟಿ ರೂಪಾಯಿ ವೆಚ್ಚದ ಗಂಗಾ ಎಕ್ಸ್​ಪ್ರೆಸ್​ ವೇ (Ganga Expressway) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಉತ್ತರಪ್ರದೇಶದ ಪಶ್ಚಿಮ ಮತ್ತು ಪೂರ್ವ ಭಾಗವನ್ನು ಸಂಪರ್ಕಿಸಲಿದ್ದು, ದೆಹಲಿ, ಹರ್ಯಾಣ  ಮತ್ತು ಬಿಹಾರಕ್ಕೆ ಉತ್ತರಪ್ರದೇಶವನ್ನು ಇನ್ನಷ್ಟು ಸಮೀಪ ಮಾಡಲಿದೆ.  ಈ ಗಂಗಾ ಎಕ್ಸ್​ಪ್ರೆಸ್​ ವೇ 594 ಕಿಮೀ ಉದ್ದ ಇರಲಿದ್ದು, 2020ರ ನವೆಂಬರ್​ 26ರಂದು ಯೋಗಿ ಆದಿತ್ಯನಾಥ್​ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿತ್ತು. 

ಇದೀಗ ನಿರ್ಮಾಣವಾಗಲಿರುವ ಎಕ್ಸ್​ಪ್ರೆಸ್​ ವೇ ಮೀರತ್​​ನಿಂದ ಪ್ರಾರಂಭವಾಗಲಿದ್ದು, ಹಾಪುರ, ಬುಲಂದ್​ಶಹರ್​, ಅಮ್ರೋಹಾ, ಸಂಭಲ್​, ಬಾದೌನ್​, ಶಹಜಹಾನ್‌ಪುರ, ಹರ್ದೋಯಿ, ಉನ್ನಾವೋ, ರಾಯ್ ಬರೇಲಿ ಮತ್ತು ಪ್ರತಾಪ್‌ಗಢಗಳ ಮೂಲಕ ಹಾದುಹೋಗಲಿದೆ. ರಾಜ್ಯದಲ್ಲಿರುವ ಉಳಿದ ಎಕ್ಸ್​ಪ್ರೆಸ್​​ವೇಗಳಂತೆ ಈ ಎಕ್ಸ್​ಪ್ರೆಸ್​ ವೇ ಕೂಡ ಏರ್​ಸ್ಟ್ರಿಪ್​ ಹೊಂದಿರಲಿದ್ದು, ವಿಮಾನಗಳ ತುರ್ತು ಭೂಸ್ಪರ್ಶಕ್ಕೆ ಅವಕಾಶ ಇರಲಿದೆ. ಈ ಏರ್​ಸ್ಟ್ರಿಲ್​ ಶಹಜಾನ್​ಪುರದಲ್ಲಿ 3.5ಕಿಮೀಗಳಷ್ಟು ಉದ್ದ ಇರಲಿದೆ.

ಯೋಜನೆಯ ವಿನ್ಯಾಸದ ಪ್ರಕಾರ ಎಕ್ಸ್​ಪ್ರೇಸ್​ ವೇಗೆ ಘರ್​ಮುಕ್ತೇಶ್ವರ್​​ನಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದು ಹಾಪುರ ಮತ್ತು ಬುಲಂದ್​ಶಹರ್​ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಅದರ ಹೊರತಾಗಿ ಗಂಗಾ ಎಕ್ಸ್​ಪ್ರೆಸ್​ ವೇ ಮಧ್ಯೆ, 9 ಸಾರ್ವಜನಿಕ ಅನುಕೂಲ ಕೇಂದ್ರಗಳು, 7 ರೈಲ್ವೆ ಮೇಲ್ಸೇತುವೆಗಳು, 14 ದೊಡ್ಡ ಸೇತುವೆಗಳು, 126 ಚಿಕ್ಕ ಸೇತುವೆಗಳು, 381 ಅಂಡರ್​ಪಾಸ್​ಗಳು ನಿರ್ಮಾಣವಾಗಲಿವೆ.

ರೈತರಿಂದ ಭೂಮಿ ಖರೀದಿ  ಗಂಗಾ ಎಕ್ಸ್​ಪ್ರೆಸ್​ ವೇ ನಿರ್ಮಣಕ್ಕಾಗಿ ಶೇ.94ರಷ್ಟು ಭೂಮಿಯನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಹೇಳಿದೆ. ಒಟ್ಟಾರೆ 7386 ಹೆಕ್ಟೇರ್​ ಭೂಮಿ ಬೇಕಾಗಿತ್ತು. ಅದನ್ನು ಒಟ್ಟು 82,750 ರೈತರಿಂದ ಖರೀದಿ ಮಾಡಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರು ಪೂರ್ವಾಂಚಲ ಎಕ್ಸ್​ಪ್ರೆಸ್​ ವೇ ಉದ್ಘಾಟನೆ ಮಾಡಿದ್ದರು. ಅದು ಉತ್ತರಪ್ರದೇಶದ ಪೂರ್ವ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಲು ಸಾಲು ಭೇಟಿ; ಮುಂದಿನ 15 ದಿನದಲ್ಲಿ 4 ಬಾರಿ ಪ್ರವಾಸ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್