AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganga Expressway: ಇಂದು ಪ್ರಧಾನಿ ಮೋದಿ ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ; ಗಂಗಾ ಎಕ್ಸ್​ಪ್ರೆಸ್​ ವೇಗೆ ಶಂಕುಸ್ಥಾಪನೆ

ಯೋಜನೆಯ ವಿನ್ಯಾಸದ ಪ್ರಕಾರ ಎಕ್ಸ್​ಪ್ರೇಸ್​ ವೇಗೆ ಘರ್​ಮುಕ್ತೇಶ್ವರ್​​ನಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದು ಹಾಪುರ ಮತ್ತು ಬುಲಂದ್​ಶಹರ್​ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

Ganga Expressway: ಇಂದು ಪ್ರಧಾನಿ ಮೋದಿ ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ; ಗಂಗಾ ಎಕ್ಸ್​ಪ್ರೆಸ್​ ವೇಗೆ ಶಂಕುಸ್ಥಾಪನೆ
ಪ್ರಧಾನಿ ಮೋದಿ
TV9 Web
| Edited By: |

Updated on: Dec 18, 2021 | 7:33 AM

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಮತ್ತೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಶಹಜಾನ್​ಪುರದಲ್ಲಿ 36,230 ಕೋಟಿ ರೂಪಾಯಿ ವೆಚ್ಚದ ಗಂಗಾ ಎಕ್ಸ್​ಪ್ರೆಸ್​ ವೇ (Ganga Expressway) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಉತ್ತರಪ್ರದೇಶದ ಪಶ್ಚಿಮ ಮತ್ತು ಪೂರ್ವ ಭಾಗವನ್ನು ಸಂಪರ್ಕಿಸಲಿದ್ದು, ದೆಹಲಿ, ಹರ್ಯಾಣ  ಮತ್ತು ಬಿಹಾರಕ್ಕೆ ಉತ್ತರಪ್ರದೇಶವನ್ನು ಇನ್ನಷ್ಟು ಸಮೀಪ ಮಾಡಲಿದೆ.  ಈ ಗಂಗಾ ಎಕ್ಸ್​ಪ್ರೆಸ್​ ವೇ 594 ಕಿಮೀ ಉದ್ದ ಇರಲಿದ್ದು, 2020ರ ನವೆಂಬರ್​ 26ರಂದು ಯೋಗಿ ಆದಿತ್ಯನಾಥ್​ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿತ್ತು. 

ಇದೀಗ ನಿರ್ಮಾಣವಾಗಲಿರುವ ಎಕ್ಸ್​ಪ್ರೆಸ್​ ವೇ ಮೀರತ್​​ನಿಂದ ಪ್ರಾರಂಭವಾಗಲಿದ್ದು, ಹಾಪುರ, ಬುಲಂದ್​ಶಹರ್​, ಅಮ್ರೋಹಾ, ಸಂಭಲ್​, ಬಾದೌನ್​, ಶಹಜಹಾನ್‌ಪುರ, ಹರ್ದೋಯಿ, ಉನ್ನಾವೋ, ರಾಯ್ ಬರೇಲಿ ಮತ್ತು ಪ್ರತಾಪ್‌ಗಢಗಳ ಮೂಲಕ ಹಾದುಹೋಗಲಿದೆ. ರಾಜ್ಯದಲ್ಲಿರುವ ಉಳಿದ ಎಕ್ಸ್​ಪ್ರೆಸ್​​ವೇಗಳಂತೆ ಈ ಎಕ್ಸ್​ಪ್ರೆಸ್​ ವೇ ಕೂಡ ಏರ್​ಸ್ಟ್ರಿಪ್​ ಹೊಂದಿರಲಿದ್ದು, ವಿಮಾನಗಳ ತುರ್ತು ಭೂಸ್ಪರ್ಶಕ್ಕೆ ಅವಕಾಶ ಇರಲಿದೆ. ಈ ಏರ್​ಸ್ಟ್ರಿಲ್​ ಶಹಜಾನ್​ಪುರದಲ್ಲಿ 3.5ಕಿಮೀಗಳಷ್ಟು ಉದ್ದ ಇರಲಿದೆ.

ಯೋಜನೆಯ ವಿನ್ಯಾಸದ ಪ್ರಕಾರ ಎಕ್ಸ್​ಪ್ರೇಸ್​ ವೇಗೆ ಘರ್​ಮುಕ್ತೇಶ್ವರ್​​ನಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದು ಹಾಪುರ ಮತ್ತು ಬುಲಂದ್​ಶಹರ್​ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಅದರ ಹೊರತಾಗಿ ಗಂಗಾ ಎಕ್ಸ್​ಪ್ರೆಸ್​ ವೇ ಮಧ್ಯೆ, 9 ಸಾರ್ವಜನಿಕ ಅನುಕೂಲ ಕೇಂದ್ರಗಳು, 7 ರೈಲ್ವೆ ಮೇಲ್ಸೇತುವೆಗಳು, 14 ದೊಡ್ಡ ಸೇತುವೆಗಳು, 126 ಚಿಕ್ಕ ಸೇತುವೆಗಳು, 381 ಅಂಡರ್​ಪಾಸ್​ಗಳು ನಿರ್ಮಾಣವಾಗಲಿವೆ.

ರೈತರಿಂದ ಭೂಮಿ ಖರೀದಿ  ಗಂಗಾ ಎಕ್ಸ್​ಪ್ರೆಸ್​ ವೇ ನಿರ್ಮಣಕ್ಕಾಗಿ ಶೇ.94ರಷ್ಟು ಭೂಮಿಯನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಹೇಳಿದೆ. ಒಟ್ಟಾರೆ 7386 ಹೆಕ್ಟೇರ್​ ಭೂಮಿ ಬೇಕಾಗಿತ್ತು. ಅದನ್ನು ಒಟ್ಟು 82,750 ರೈತರಿಂದ ಖರೀದಿ ಮಾಡಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರು ಪೂರ್ವಾಂಚಲ ಎಕ್ಸ್​ಪ್ರೆಸ್​ ವೇ ಉದ್ಘಾಟನೆ ಮಾಡಿದ್ದರು. ಅದು ಉತ್ತರಪ್ರದೇಶದ ಪೂರ್ವ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಲು ಸಾಲು ಭೇಟಿ; ಮುಂದಿನ 15 ದಿನದಲ್ಲಿ 4 ಬಾರಿ ಪ್ರವಾಸ 

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?