AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಅಮಿತ್ ಶಾ ಸಂಸತ್ತನ್ನು ಗುಜರಾತ್ ಜಿಮ್ಖಾನಾವನ್ನಾಗಿ ಮಾಡುತ್ತಿದ್ದಾರೆ; ಟಿಎಂಸಿ ಸಂಸದ ವಾಗ್ದಾಳಿ

ಸತತ ಏಳನೇ ಬಾರಿಗೆ ಅಧಿವೇಶನವನ್ನು ಮೊಟಕುಗೊಳಿಸಲಾಗಿದೆ. ಸಂಸತ್ತನ್ನು ಅಪಹಾಸ್ಯ ಮಾಡುವುದನ್ನು ನಿಲ್ಲಿಸಿ ಎಂದು ಟಿಎಂಸಿ ನಾಯಕ ಡೆರೆಕ್ ಒಬ್ರೇನ್ ಸರ್ಕಾರವನ್ನು ಒತ್ತಾಯಿಸಿದರು.

ಮೋದಿ, ಅಮಿತ್ ಶಾ ಸಂಸತ್ತನ್ನು ಗುಜರಾತ್ ಜಿಮ್ಖಾನಾವನ್ನಾಗಿ ಮಾಡುತ್ತಿದ್ದಾರೆ; ಟಿಎಂಸಿ ಸಂಸದ ವಾಗ್ದಾಳಿ
ಡೆರೆಕ್ ಒಬ್ರೇನ್ Image Credit source: Zee News
TV9 Web
| Edited By: |

Updated on: Aug 09, 2022 | 8:53 AM

Share

ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯ ಸಂಸತ್ ಅಧಿವೇಶನವನ್ನು ಸೋಮವಾರ ಮುಂದೂಡಲಾಯಿತು. ಮೇಲ್ಮನೆ ಮತ್ತು ಕೆಳಮನೆಯ ಮುಂಗಾರು ಅಧಿವೇಶನವನ್ನು (Monsoon Session) ಮೊಟಕುಗೊಳಿಸುವ ನಿರ್ಧಾರದ ಬಗ್ಗೆ ತೃಣಮೂಲ ಕಾಂಗ್ರೆಸ್ (TMC) ನಾಯಕ ಡೆರೆಕ್ ಒಬ್ರೇನ್ (Derek O’Brien) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಟಿಎಂಸಿ ನಾಯಕ ಡೆರೆಕ್ ಒಬ್ರೇನ್, ಸತತ ಏಳನೇ ಬಾರಿಗೆ ಅಧಿವೇಶನವನ್ನು ಮೊಟಕುಗೊಳಿಸಲಾಗಿದೆ. ಸಂಸತ್ತನ್ನು ಅಪಹಾಸ್ಯ ಮಾಡುವುದನ್ನು ನಿಲ್ಲಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಟ್ವೀಟ್ ಮಾಡಿರುವ ಟಿಎಂಸಿ ಸಂಸದ ಡೆರೆಕ್, ಇದು ಸತತ ಏಳನೇ ಬಾರಿ ಸಂಸತ್ ಅಧಿವೇಶನವನ್ನು ಮೊಟಕುಗೊಳಿಸಲಾಗಿದೆ. ಸಂಸತ್ತನ್ನು ಅಪಹಾಸ್ಯ ಮಾಡುವುದನ್ನು ನಿಲ್ಲಿಸಿ. ನಾವು ಸಂಸತ್​​ನ ಪವಿತ್ರತೆಗಾಗಿ ಹೋರಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಈ ಸಂಸತ್ತನ್ನು ಗುಜರಾತ್ ಜಿಮ್ಖಾನಾ ಆಗಿ ಪರಿವರ್ತಿಸುವುದನ್ನು ನಾವು ತಡೆಯುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಬೆಲೆ ಏರಿಕೆ ಚರ್ಚೆ ನಡುವೆ ಎದ್ದು ನಿಂತು ಹಸಿ ಬದನೆಕಾಯಿ ಕಚ್ಚಿ ತಿಂದ ಟಿಎಂಸಿ ಸಂಸದೆ

ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಡೆರೆಕ್ ಒಬ್ರೇನ್ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಸಂಸತ್​​ನ ಪಾವಿತ್ರ್ಯದ ಬಗ್ಗೆ ಬೋಧಿಸುವುದನ್ನು ನಿಲ್ಲಿಸಬೇಕು. ಪಶ್ಚಿಮ ಬಂಗಾಳದ ಜನರು ಬಿಜೆಪಿಯನ್ನು ಪ್ರಮುಖ ಪ್ರತಿಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಆದರೆ ಟಿಎಂಸಿ ತನ್ನ ದುರಹಂಕಾರದಲ್ಲಿ ಬಿಜೆಪಿಗೆ ಪಿಎಸಿ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಅಸೆಂಬ್ಲಿ ಎಷ್ಟು ದಿನ ಕಾರ್ಯ ನಿರ್ವಹಿಸಿತು ಎಂಬುದನ್ನು ಡೆರೆಕ್ ಒಬ್ರೇನ್ ತಿಳಿಸಲು ಸಿದ್ಧರಿದ್ದಾರಾ? ಅಥವಾ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಜಿಮ್ಖಾನಾದಂತೆ ಕಾರ್ಯ ನಿರ್ವಹಿಸುತ್ತಿದೆಯೇ? ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ