AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುರ್ವೇದ, ಸಾಂಪ್ರದಾಯಿಕ ಔಷಧ ಕ್ಷೇತ್ರದ ಬಗ್ಗೆ ಪ್ರಧಾನಿ ಮೋದಿ- ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಚರ್ಚೆ

ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಇಂದು ಭಾರತಕ್ಕೆ 5 ದಿನಗಳ ಪ್ರವಾಸಕ್ಕೆ ಆಗಮಿಸಿದ್ದಾರೆ. ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳನ್ನು ಅನ್ವೇಷಿಸಲು ಚಿಲಿಯ ಅಧ್ಯಕ್ಷರು ಭಾರತಕ್ಕೆ ಬಂದಿದ್ದಾರೆ. ಭಾರತ ಭೇಟಿಯಲ್ಲಿರುವ ಬೋರಿಕ್ ಅವರೊಂದಿಗೆ ಸರ್ಕಾರಿ ಅಧಿಕಾರಿಗಳು ಮತ್ತು ವ್ಯಾಪಾರ ಮುಖಂಡರು ಸೇರಿದಂತೆ ಉನ್ನತ ಮಟ್ಟದ ನಿಯೋಗವೂ ಭಾರತಕ್ಕೆ ಬಂದಿದೆ. ಮೋದಿ ಮತ್ತು ಬೋರಿಕ್ ಅವರ ಭೇಟಿಯ ಸಮಯದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸಹಕಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಚರ್ಚಿಸಲಾಯಿತು.

ಆಯುರ್ವೇದ, ಸಾಂಪ್ರದಾಯಿಕ ಔಷಧ ಕ್ಷೇತ್ರದ ಬಗ್ಗೆ ಪ್ರಧಾನಿ ಮೋದಿ- ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಚರ್ಚೆ
Pm Modi, President Gabriel Boric
Follow us
ಸುಷ್ಮಾ ಚಕ್ರೆ
|

Updated on: Apr 01, 2025 | 4:50 PM

ನವದೆಹಲಿ, ಏಪ್ರಿಲ್ 1: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಹೈದರಾಬಾದ್ ಹೌಸ್‌ನಲ್ಲಿ ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ (Gabriel Boric) ಅವರನ್ನು ಬರಮಾಡಿಕೊಂಡರು. ಆರ್ಥಿಕ, ವಾಣಿಜ್ಯ ಮತ್ತು ಸಾಮಾಜಿಕ ವಲಯಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಬೋರಿಕ್ ತಮ್ಮ 5 ದಿನಗಳ ಭಾರತ ಭೇಟಿಯನ್ನು ಪ್ರಾರಂಭಿಸಿದರು. ಭಾರತ-ಚಿಲಿಯ ದ್ವಿಪಕ್ಷೀಯ ಸಂಬಂಧಗಳನ್ನು ವಿಸ್ತರಿಸುವ ಕುರಿತು ಪ್ರಧಾನಿ ಮೋದಿ ಮತ್ತು ಚಿಲಿಯ ಅಧ್ಯಕ್ಷರು ಚರ್ಚೆ ನಡೆಸಿದರು.

ವೇಳಾಪಟ್ಟಿಯ ಪ್ರಕಾರ, ಚಿಲಿಯ ಅಧ್ಯಕ್ಷ ಬೋರಿಕ್ ಏಪ್ರಿಲ್ 5ರಂದು ಚಿಲಿಗೆ ತೆರಳುವ ಮೊದಲು ಆಗ್ರಾ, ಮುಂಬೈ ಮತ್ತು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹ ಭೇಟಿ ಮಾಡಲಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಚಿಲಿಯ ಅಧ್ಯಕ್ಷರು ನವದೆಹಲಿಯ ಹೈದರಾಬಾದ್ ಹೌಸ್‌ನಿಂದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇದನ್ನೂ ಓದಿ
Image
Gold Rates 21 March: ಚಿನ್ನ, ಬೆಳ್ಳಿ ಎರಡೂ ಭರ್ಜರಿ ಇಳಿಕೆ
Image
ಪತಂಜಲಿ ಹೆಲ್ತ್​​ಕೇರ್​​ನಿಂದ ಹೀಲಿಂಗ್, ಪ್ರಕೃತಿ ಚಿಕಿತ್ಸೆ
Image
ಬಲಿಷ್ಠ ಭಾರತದ ನಿರ್ಮಾಣದಲ್ಲಿ ಪತಂಜಲಿ ಕೊಡುಗೆ
Image
ಫ್ಯಾಮಿಲಿ ಪೆನ್ಷನ್ ನೀತಿಯಲ್ಲಿ ಮಾರ್ಪಾಡು; ಮಹಿಳೆಯರಿಗೆ ವರದಾನ

ಸಮಗ್ರ ವ್ಯಾಪಾರ ಮಾತುಕತೆಗಳ ಕುರಿತು ಮಾತುಕತೆ:

ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಲ್ಯಾಟಿನ್ ಅಮೆರಿಕಾದಲ್ಲಿ ಚಿಲಿ ಭಾರತದ ಪ್ರಮುಖ ಪಾಲುದಾರ ಎಂದು ಬಣ್ಣಿಸಿದರು. ಭಾರತವು ದೇಶವನ್ನು ಅಂಟಾರ್ಕ್ಟಿಕಾಗೆ ಪ್ರವೇಶ ದ್ವಾರವಾಗಿ ನೋಡುತ್ತದೆ. ಎರಡೂ ದೇಶಗಳು ಪರಸ್ಪರ ಪ್ರಯೋಜನಕಾರಿ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದದ ಕುರಿತು ಮಾತುಕತೆಗಳನ್ನು ಪ್ರಾರಂಭಿಸುತ್ತವೆ. “ಇಂದು, ಪರಸ್ಪರ ಪ್ರಯೋಜನಕಾರಿ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದದ ಕುರಿತು ಚರ್ಚೆಗಳನ್ನು ಪ್ರಾರಂಭಿಸಲು ನಾವು ನಮ್ಮ ತಂಡಗಳಿಗೆ ನಿರ್ದೇಶನ ನೀಡಿದ್ದೇವೆ” ಎಂದು ಮೋದಿ ಮಾತುಕತೆಯ ನಂತರ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಮೊದಲ ಖಾಸಗಿ ಮಿಲಿಟರಿ ಡ್ರೋನ್ ಟೆಸ್ಟಿಂಗ್ ರನ್​​ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಇದಕ್ಕೂ ಮೊದಲು, ಫಾಂಟ್ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು. ಅವರು ಎಕ್ಸ್​ನಲ್ಲಿ ತಮ್ಮ ಭೇಟಿಯ ಫೋಟೋಗಳನ್ನು ಹಂಚಿಕೊಂಡರು. “ನಮ್ಮ ಮಂತ್ರಿಗಳು ಮತ್ತು ಸಂಸದರ ನಿಯೋಗದೊಂದಿಗೆ ನಾವು ನವದೆಹಲಿಯಲ್ಲಿ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದ್ದೇವೆ. ಅವರ ಪರಂಪರೆಯು ಭಾರತದೊಂದಿಗೆ ನಾವು ಸಾಮಾನ್ಯ ಆಸಕ್ತಿಗಳು ಮತ್ತು ನಮ್ಮ ಜನರಿಗೆ ಉತ್ತಮ ಅವಕಾಶಗಳ ಭವಿಷ್ಯವನ್ನು ಹಂಚಿಕೊಳ್ಳುವುದಲ್ಲದೆ, ಮೂಲಭೂತ ಮೌಲ್ಯಗಳನ್ನು ಸಹ ಹಂಚಿಕೊಂಡಿದ್ದೇವೆ ಎಂದು ನಮಗೆ ನೆನಪಿಸುತ್ತದೆ” ಎಂದಿದ್ದಾರೆ.

“ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸುತ್ತಾರೆ. ಅವರ ಶಾಂತಿ ಮತ್ತು ಅಹಿಂಸೆಯ ಶಾಶ್ವತ ಸಂದೇಶವನ್ನು ಗೌರವಿಸುತ್ತಾರೆ. ಮಹಾತ್ಮರ ಶಾಶ್ವತ ಪರಂಪರೆ ಮತ್ತು ಒಗ್ಗೂಡಿಸುವ ಹಂಚಿಕೆಯ ಮೌಲ್ಯಗಳ ಬಗ್ಗೆ ಒಂದು ಕ್ಷಣ ಚಿಂತನೆ” ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ನಮ್ಮ ತಂದೆಯಿದ್ದಂತೆ; ಪ್ರಧಾನಿಯ ನಿವೃತ್ತಿ ಬಗ್ಗೆ ಮಾತನಾಡಿದ ಸಂಜಯ್ ರಾವತ್ ವಿರುದ್ಧ ದೇವೇಂದ್ರ ಫಡ್ನವಿಸ್ ವಾಗ್ದಾಳಿ

ಚಿಲಿಯ ಅಧ್ಯಕ್ಷರೊಂದಿಗೆ ಸಚಿವರು, ಸಂಸತ್ ಸದಸ್ಯರು, ಹಿರಿಯ ಅಧಿಕಾರಿಗಳು, ವ್ಯಾಪಾರ ಮುಖಂಡರು, ಮಾಧ್ಯಮ ಪ್ರತಿನಿಧಿಗಳು ಮತ್ತು ಭಾರತ-ಚಿಲಿ ವಿನಿಮಯದಲ್ಲಿ ತೊಡಗಿರುವ ಸಾಂಸ್ಕೃತಿಕ ವ್ಯಕ್ತಿಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗವಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
Weekly Horoscope: ಮೇ 26 ರಿಂದ ಜೂನ್​ 1 ರವರೆಗಿನ ವಾರ ಭವಿಷ್ಯ
Weekly Horoscope: ಮೇ 26 ರಿಂದ ಜೂನ್​ 1 ರವರೆಗಿನ ವಾರ ಭವಿಷ್ಯ