AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್​ರ 71ನೇ ಪುಣ್ಯತಿಥಿ; ಟ್ವೀಟ್ ಮೂಲಕ ಗೌರವ ಸಲ್ಲಿಸಿ, ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

Sardar Vallabhbhai Patel Death Anniversary: ಭಾರತ ಬ್ರಿಟೀಷ್​ ಆಡಳಿತದಿಂದ ಸ್ವಾತಂತ್ರ್ಯ ಪಡೆಯುವುದಕ್ಕೂ ಮೊದಲು ಮತ್ತು ನಂತರ 500ಕ್ಕೂ ಹೆಚ್ಚು ರಾಜಪ್ರಭುತ್ವ ರಾಜ್ಯಗಳ ಏಕೀಕರಣ ಹೋರಾಟದಲ್ಲಿ ಸರ್ದಾರ್​ ವಲ್ಲಭಬಾಯಿ ಅವರು ಮುಂಚೂಣಿಯಲ್ಲಿದ್ದರು.

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್​ರ 71ನೇ ಪುಣ್ಯತಿಥಿ; ಟ್ವೀಟ್ ಮೂಲಕ ಗೌರವ ಸಲ್ಲಿಸಿ, ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ
ಸರ್ದಾರ್​ ವಲ್ಲಭಬಾಯಿ ಪಟೇಲ್​
TV9 Web
| Edited By: |

Updated on: Dec 15, 2021 | 1:23 PM

Share

ಭಾರತದ ಮೊದಲ ಗೃಹ ಮಂತ್ರಿ, ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲ್​​ ಅವರ 71ನೇ ಪುಣ್ಯತಿಥಿ ಇಂದು. ಈ ಹೊತ್ತಲ್ಲಿ ಅವರಿಗೆ ಗೌರವ ಸಲ್ಲಿಸಿ ಪ್ರಧಾನಿ ಮೋದಿ ಮತ್ತಿತರ ಗಣ್ಯರು ಟ್ವೀಟ್ ಮಾಡಿದ್ದಾರೆ. ಸರ್ದಾರ್ ವಲ್ಲಭಬಾಯಿ ಪಟೇಲ್​​ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ಭಾರತಕ್ಕೆ ಅವರು ನೀಡಿರುವ ಸೇವೆ, ಅವರ ಆಡಳಿತ ಕೌಶಲ, ಇಡೀ ದೇಶವನ್ನು ಒಟ್ಟುಗೂಡಿಸುವ ಅವರ ಪ್ರಯತ್ನಗಳಿಗೆ ನಾವು ಸದಾ ಕೃತಜ್ಞರಾಗಿರಬೇಕು ಎಂದು ಪ್ರಧಾನಿ ಹೇಳಿದ್ದಾರೆ.

ಭಾರತ ಬ್ರಿಟೀಷ್​ ಆಡಳಿತದಿಂದ ಸ್ವಾತಂತ್ರ್ಯ ಪಡೆಯುವುದಕ್ಕೂ ಮೊದಲು ಮತ್ತು ನಂತರ 500ಕ್ಕೂ ಹೆಚ್ಚು ರಾಜಪ್ರಭುತ್ವ ರಾಜ್ಯಗಳ ಏಕೀಕರಣ ಹೋರಾಟದಲ್ಲಿ ಸರ್ದಾರ್​ ವಲ್ಲಭಬಾಯಿ ಅವರು ಮುಂಚೂಣಿಯಲ್ಲಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲೂ ಕೂಡ ಮುಂಚೂಣಿಯಲ್ಲಿದ್ದ ನಾಯಕರು. ಕಾಂಗ್ರೆಸ್​ ಪಕ್ಷದ ನಾಯಕರಾಗಿದ್ದ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. ಭಾರತದ ಮೊದಲ ಗೃಹ ಸಚಿವರಾಗಿದ್ದರು ಮತ್ತು ಉಪಪ್ರಧಾನಮಂತ್ರಿಯಾಗಿದ್ದರು. ಗುಜರಾತ್​​ನ ನಾದಿಯಾದ್​​ನಲ್ಲಿ 1875ರ ಅಕ್ಟೋಬರ್​ 31ರಂದು ಜನಿಸಿದ ಸರ್ದಾರ್​ ವಲ್ಲಭಬಾಯಿ ಪಟೇಲ್​, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಅಲ್ಲಿಯೇ ಮುಗಿಸಿದ್ದರು.  ಬ್ರಿಟಿಷರ ವಿರುದ್ಧ ಯಾವುದೇ ಸತ್ಯಾಗ್ರಹ, ಪ್ರತಿಭಟನೆಯಿರಲಿ, ಅದರಲ್ಲಿ ಪಟೇಲ್​ ಸದಾ ಮುಂದಿರುತ್ತಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿಯವರ ದಾರಿಯನ್ನೇ ಅನುಸರಿಸಿದ್ದ, ಅವರು ತಮ್ಮ ರಾಜಕೀಯ ಜೀವನದಲ್ಲೂ ಅದನ್ನು ಅಳವಡಿಸಿಕೊಂಡಿದ್ದರು. ಅವರ ಹುಟ್ಟಿದ ದಿನ ಅಂದರೆ ಅಕ್ಟೋಬರ್​ 31ನ್ನು ರಾಷ್ಟ್ರಾದ್ಯಂತ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದನ್ನೂ ಕೂಡ ಪ್ರಧಾನಿ ಮೋದಿ ಸರ್ಕಾರವೇ ಪ್ರಾರಂಭ ಮಾಡಿದೆ. ಇಂದು ಅವರ ಪುಣ್ಯತಿಥಿಯಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಸಾರಿಗೆ ಸಚಿವ ನಿತಿನ್ ಗಡ್ಕರಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಇತರರು ಟ್ವೀಟ್ ಮೂಲಕ ಗೌರವ ಸಲ್ಲಿಸಿ, ಮಹಾನ್ ನಾಯಕನನ್ನು ಸ್ಮರಿಸಿದ್ದಾರೆ.

ಇದನ್ನೂ ಓದಿ: Semiconductor manufacturing PLI: ಸೆಮಿಕಂಡಕ್ಟರ್ ಉತ್ಪಾದನೆಗೆ ಕೇಂದ್ರದಿಂದ 76 ಸಾವಿರ ಕೋಟಿ ರೂ.

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?