AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್​ರ 71ನೇ ಪುಣ್ಯತಿಥಿ; ಟ್ವೀಟ್ ಮೂಲಕ ಗೌರವ ಸಲ್ಲಿಸಿ, ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

Sardar Vallabhbhai Patel Death Anniversary: ಭಾರತ ಬ್ರಿಟೀಷ್​ ಆಡಳಿತದಿಂದ ಸ್ವಾತಂತ್ರ್ಯ ಪಡೆಯುವುದಕ್ಕೂ ಮೊದಲು ಮತ್ತು ನಂತರ 500ಕ್ಕೂ ಹೆಚ್ಚು ರಾಜಪ್ರಭುತ್ವ ರಾಜ್ಯಗಳ ಏಕೀಕರಣ ಹೋರಾಟದಲ್ಲಿ ಸರ್ದಾರ್​ ವಲ್ಲಭಬಾಯಿ ಅವರು ಮುಂಚೂಣಿಯಲ್ಲಿದ್ದರು.

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್​ರ 71ನೇ ಪುಣ್ಯತಿಥಿ; ಟ್ವೀಟ್ ಮೂಲಕ ಗೌರವ ಸಲ್ಲಿಸಿ, ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ
ಸರ್ದಾರ್​ ವಲ್ಲಭಬಾಯಿ ಪಟೇಲ್​
Follow us
TV9 Web
| Updated By: Lakshmi Hegde

Updated on: Dec 15, 2021 | 1:23 PM

ಭಾರತದ ಮೊದಲ ಗೃಹ ಮಂತ್ರಿ, ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲ್​​ ಅವರ 71ನೇ ಪುಣ್ಯತಿಥಿ ಇಂದು. ಈ ಹೊತ್ತಲ್ಲಿ ಅವರಿಗೆ ಗೌರವ ಸಲ್ಲಿಸಿ ಪ್ರಧಾನಿ ಮೋದಿ ಮತ್ತಿತರ ಗಣ್ಯರು ಟ್ವೀಟ್ ಮಾಡಿದ್ದಾರೆ. ಸರ್ದಾರ್ ವಲ್ಲಭಬಾಯಿ ಪಟೇಲ್​​ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ಭಾರತಕ್ಕೆ ಅವರು ನೀಡಿರುವ ಸೇವೆ, ಅವರ ಆಡಳಿತ ಕೌಶಲ, ಇಡೀ ದೇಶವನ್ನು ಒಟ್ಟುಗೂಡಿಸುವ ಅವರ ಪ್ರಯತ್ನಗಳಿಗೆ ನಾವು ಸದಾ ಕೃತಜ್ಞರಾಗಿರಬೇಕು ಎಂದು ಪ್ರಧಾನಿ ಹೇಳಿದ್ದಾರೆ.

ಭಾರತ ಬ್ರಿಟೀಷ್​ ಆಡಳಿತದಿಂದ ಸ್ವಾತಂತ್ರ್ಯ ಪಡೆಯುವುದಕ್ಕೂ ಮೊದಲು ಮತ್ತು ನಂತರ 500ಕ್ಕೂ ಹೆಚ್ಚು ರಾಜಪ್ರಭುತ್ವ ರಾಜ್ಯಗಳ ಏಕೀಕರಣ ಹೋರಾಟದಲ್ಲಿ ಸರ್ದಾರ್​ ವಲ್ಲಭಬಾಯಿ ಅವರು ಮುಂಚೂಣಿಯಲ್ಲಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲೂ ಕೂಡ ಮುಂಚೂಣಿಯಲ್ಲಿದ್ದ ನಾಯಕರು. ಕಾಂಗ್ರೆಸ್​ ಪಕ್ಷದ ನಾಯಕರಾಗಿದ್ದ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. ಭಾರತದ ಮೊದಲ ಗೃಹ ಸಚಿವರಾಗಿದ್ದರು ಮತ್ತು ಉಪಪ್ರಧಾನಮಂತ್ರಿಯಾಗಿದ್ದರು. ಗುಜರಾತ್​​ನ ನಾದಿಯಾದ್​​ನಲ್ಲಿ 1875ರ ಅಕ್ಟೋಬರ್​ 31ರಂದು ಜನಿಸಿದ ಸರ್ದಾರ್​ ವಲ್ಲಭಬಾಯಿ ಪಟೇಲ್​, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಅಲ್ಲಿಯೇ ಮುಗಿಸಿದ್ದರು.  ಬ್ರಿಟಿಷರ ವಿರುದ್ಧ ಯಾವುದೇ ಸತ್ಯಾಗ್ರಹ, ಪ್ರತಿಭಟನೆಯಿರಲಿ, ಅದರಲ್ಲಿ ಪಟೇಲ್​ ಸದಾ ಮುಂದಿರುತ್ತಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿಯವರ ದಾರಿಯನ್ನೇ ಅನುಸರಿಸಿದ್ದ, ಅವರು ತಮ್ಮ ರಾಜಕೀಯ ಜೀವನದಲ್ಲೂ ಅದನ್ನು ಅಳವಡಿಸಿಕೊಂಡಿದ್ದರು. ಅವರ ಹುಟ್ಟಿದ ದಿನ ಅಂದರೆ ಅಕ್ಟೋಬರ್​ 31ನ್ನು ರಾಷ್ಟ್ರಾದ್ಯಂತ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದನ್ನೂ ಕೂಡ ಪ್ರಧಾನಿ ಮೋದಿ ಸರ್ಕಾರವೇ ಪ್ರಾರಂಭ ಮಾಡಿದೆ. ಇಂದು ಅವರ ಪುಣ್ಯತಿಥಿಯಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಸಾರಿಗೆ ಸಚಿವ ನಿತಿನ್ ಗಡ್ಕರಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಇತರರು ಟ್ವೀಟ್ ಮೂಲಕ ಗೌರವ ಸಲ್ಲಿಸಿ, ಮಹಾನ್ ನಾಯಕನನ್ನು ಸ್ಮರಿಸಿದ್ದಾರೆ.

ಇದನ್ನೂ ಓದಿ: Semiconductor manufacturing PLI: ಸೆಮಿಕಂಡಕ್ಟರ್ ಉತ್ಪಾದನೆಗೆ ಕೇಂದ್ರದಿಂದ 76 ಸಾವಿರ ಕೋಟಿ ರೂ.

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ