AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಉದ್ಧವ್ ಠಾಕ್ರೆ ಜತೆ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ

ಸಂಜೆ ನಾಲ್ಕು ಗಂಟೆಗೆ ಪ್ರಧಾನಿಯವರು ಮುಂಬೈನ ರಾಜಭವನದಲ್ಲಿ ಜಲ್ ಭೂಷಣ್ ಬಿಲ್ಡಿಂಗ್ ಮತ್ತು ಗ್ಯಾಲರಿ ಆಫ್ ರೆವಲ್ಯೂಷನರೀಸ್ ಉದ್ಘಾಟಿಸಲಿದ್ದಾರೆ. ಅವರು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ...

ಮುಂಬೈ: ಉದ್ಧವ್ ಠಾಕ್ರೆ ಜತೆ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ
ಉದ್ಧವ್ ಠಾಕ್ರೆ- ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 14, 2022 | 5:50 PM

Share

ಮುಂಬೈ:  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ(Uddhav Thackeray) ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಮುಂಬೈನಲ್ಲಿ(Mumbai) ನಡೆದ ಕಾರ್ಯಕ್ರಮಗಳಲ್ಲಿ  ವೇದಿಕೆ ಹಂಚಿಕೊಂಡಿದ್ದಾರೆ.ಮಂಗಳವಾರ ಮುಂಬೈನ ಐಎನ್‌ಎಸ್ ಶಿಕ್ರಾ ಹೆಲಿಪೋರ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಸಚಿವ ಆದಿತ್ಯ ಠಾಕ್ರೆ ಅವರು ಬರಮಾಡಿಕೊಂಡರು.ಅಲ್ಲಿಂದ ಮೊದಲ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಮತ್ತು ಪ್ರಧಾನಿ ರಾಜಭವನಕ್ಕೆ ಬಂದಿದ್ದಾರೆ. ಅಲ್ಲಿಂದ ಪ್ರಧಾನಿ ಮತ್ತು ಮುಖ್ಯಮಂತ್ರಿ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ಗೆ (BKC) ಹೋಗಲಿದ್ದು ಅಲ್ಲಿ ಅವರು ಎರಡನೇ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಲಿದ್ದಾರೆ. ವಿಐಪಿಗಳ ಸಂಚಾರವು ನಗರದಲ್ಲಿ ಟ್ರಾಫಿಕ್ ಚಲನೆಗೆ ಹೊಡೆತ ನೀಡುವ ಸಾಧ್ಯತೆಯಿರುವುದರಿಂದ ಮುಂಬೈ ಪೊಲೀಸರು ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಉಪನಗರಗಳಲ್ಲಿನ ವ್ಯಾಪಾರ ಜಿಲ್ಲೆಯಾದ ಬಿಕೆಸಿಯಲ್ಲಿ ನಡೆದ ಕಾರ್ಯಕ್ರಮದ ನಂತರ ಮೋದಿ ನವದೆಹಲಿಗೆ ತೆರಳುತ್ತಾರೆ. ಸಂಜೆ ನಾಲ್ಕು ಗಂಟೆಗೆ ಪ್ರಧಾನಿಯವರು ಮುಂಬೈನ ರಾಜಭವನದಲ್ಲಿ ಜಲ್ ಭೂಷಣ್ ಬಿಲ್ಡಿಂಗ್ ಮತ್ತು ಗ್ಯಾಲರಿ ಆಫ್ ರೆವಲ್ಯೂಷನರೀಸ್ ಉದ್ಘಾಟಿಸಲಿದ್ದಾರೆ. ಅವರು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ‘ಮುಂಬೈ ಸಮಾಚಾರ’ದ ‘ದ್ವಿಶತಾಬ್ದಿ ಮಹೋತ್ಸವ’ (200 ನೇ ವಾರ್ಷಿಕೋತ್ಸವದ ಆಚರಣೆಗ) ಉದ್ದೇಶಿಸಿ ಮಾತನಾಡಲಿದ್ದಾರೆ.

ಶಿವಸೇನಾ ಬೇರ್ಪಟ್ಟ ನಂತರ ಮತ್ತು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿ ನಂತರ ಇಬ್ಬರು ನಾಯಕರ ನಡುವಿನ ಸಂಬಂಧಗಳು ಹದಗೆಟ್ಟವು. ಅಂದಿನಿಂದ, ಮಹಾರಾಷ್ಟ್ರ ಮುಖ್ಯಮಂತ್ರಿ ವಿವಿಧ ಸಂದರ್ಭಗಳಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವರ್ಷದ ಏಪ್ರಿಲ್ 25 ರಂದು, ಉದ್ಧವ್ ಠಾಕ್ರೆ ಅವರು ಮುಂಬೈನಲ್ಲಿ ಪ್ರಧಾನಿ ಮೋದಿಯವರಿಗೆ ಮೊದಲ ಲತಾ ಮಂಗೇಶ್ಕರ್ ಪ್ರಶಸ್ತಿಯನ್ನು ಪ್ರದಾನ ಮಾಡಿದ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಇದನ್ನೂ ಓದಿ
Image
ಇಡಿ ವಿಚಾರಣೆಯಿಂದ ಹೊರಬರುತ್ತಿದ್ದಂತೆ ಮೋದಿ ವಿರುದ್ಧ ರಾಹುಲ್‌ ಟ್ವೀಟ್‌; ಇದು ಮಹಾ ಜುಮ್ಲಾಗಳ ಸರ್ಕಾರ ಎಂದು ತೀವ್ರ ವಾಗ್ದಾಳಿ
Image
ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ; ಕಾಂಗ್ರೆಸ್​​​ ಪ್ರತಿಭಟನೆ
Image
Air Pollution: ವಾಯು ಮಾಲಿನ್ಯದಿಂದ 5 ವರ್ಷ ಕಡಿಮೆಯಾಗುತ್ತಿದೆ ಭಾರತೀಯರ ಜೀವಿತಾವಧಿ

ಪ್ರಧಾನಿ ಪಾಲ್ಗೊಳ್ಳುವ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಹಾಜರಾಗುವುದನ್ನು ಇಬ್ಬರು ವ್ಯಕ್ತಿಗಳ ನಡುವಿನ ಹಗ್ಗಜಗ್ಗಾಟದಂತೆ ನೋಡಲಾಗುತ್ತಿದೆ. ಇದೀಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಮಾಡಿದ ಕಾಮೆಂಟ್‌ಗಳ ಕುರಿತು ಬಿಜೆಪಿ ವಿರುದ್ಧ ಮುಖ್ಯಮಂತ್ರಿ ತೀವ್ರ ವಾಗ್ದಾಳಿ ನಡೆಸಿದ ಒಂದು ವಾರದ ನಂತರ ಇದು ಬಂದಿದೆ ರಾಜ್ಯಸಭಾ ಚುನಾವಣೆಯಲ್ಲಿ ತನ್ನ ಎರಡನೇ ಅಭ್ಯರ್ಥಿಯ ಸೋಲಿನ ಬಗ್ಗೆ ಶಿವಸೇನಾ ಎನ್‌ಸಿಪಿಯೊಂದಿಗೆ ಅಸಮಾಧಾನಗೊಂಡಿದೆ ಎಂಬ ವರದಿಗಳ ಮಧ್ಯೆಯೇ ಈ ಕಾರ್ಯಕ್ರಮ ಬಂದಿದೆ. ಆದಾಗ್ಯೂ, ಮುಖ್ಯಮಂತ್ರಿಗಳು ಪ್ರಧಾನಿಯನ್ನು ಸ್ವೀಕರಿಸುವುದು ಶಿಷ್ಟಾಚಾರದ ವಿಷಯವಾಗಿದೆ. ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಎರಡೂ ಪಕ್ಷಗಳು ಹೇಳುತ್ತವೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:40 pm, Tue, 14 June 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?