AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷ ಬೈಡೆನ್​ಗೆ ಪ್ರಧಾನಿ ಮೋದಿ ಫೋನ್; ಉಕ್ರೇನ್ ಸಂಘರ್ಷ, ಬಾಂಗ್ಲಾದೇಶದ ಅಶಾಂತಿ ಕುರಿತು ಚರ್ಚೆ

ಇಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ದೂರವಾಣಿ ಕರೆ ಮಾಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್‌ನಲ್ಲಿ ಶಾಂತಿಗಾಗಿ ಬೆಂಬಲವನ್ನು ಪುನರುಚ್ಚರಿಸಿದ್ದಾರೆ. ಹಾಗೇ, ಬಾಂಗ್ಲಾದೇಶದ ಹಿಂದೂಗಳ ಸುರಕ್ಷತೆಯ ಬಗ್ಗೆಯೂ ಚರ್ಚಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಬೈಡೆನ್​ಗೆ ಪ್ರಧಾನಿ ಮೋದಿ ಫೋನ್; ಉಕ್ರೇನ್ ಸಂಘರ್ಷ, ಬಾಂಗ್ಲಾದೇಶದ ಅಶಾಂತಿ ಕುರಿತು ಚರ್ಚೆ
ಪ್ರಧಾನಿ ಮೋದಿ - ಜೋ ಬೈಡೆನ್
ಸುಷ್ಮಾ ಚಕ್ರೆ
|

Updated on: Aug 26, 2024 | 10:39 PM

Share

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ಫೋನ್​ನಲ್ಲಿ ಮಾತನಾಡಿದ್ದು, ಭಾರತ-ಯುಎಸ್ ಪಾಲುದಾರಿಕೆಗೆ ಬದ್ಧತೆಯನ್ನು ಶ್ಲಾಘಿಸಿದರು. ಇಬ್ಬರೂ ನಾಯಕರು ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ದೂರವಾಣಿ ಕರೆಯಲ್ಲಿ ಚರ್ಚಿಸಿದರು. ಇತರ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆಯೂ ಚರ್ಚಿಸಿದರು.

ಪ್ರಧಾನಿ ಮೋದಿ ಅವರು 2 ದಿನಗಳ ಹಿಂದಷ್ಟೇ ಉಕ್ರೇನ್​ ಪ್ರವಾಸದಿಂದ ಭಾರತಕ್ಕೆ ಹಿಂದಿರುಗಿದ್ದಾರೆ. ಅಲ್ಲಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ಭೇಟಿಯಾದರು. ಇದರ ಬೆನ್ನಲ್ಲೇ ಮೋದಿ ಅಮೆರಿಕ ಅಧ್ಯಕ್ಷ ಬೈಡೆನ್ ಜೊತೆ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪಿಎಂ ಮೋದಿ, ಇಂದು ಫೋನ್‌ನಲ್ಲಿ ಜೋ ಬೈಡೆನ್ ಅವರೊಂದಿಗೆ ಮಾತನಾಡಿದೆ. ಉಕ್ರೇನ್‌ನಲ್ಲಿನ ಪರಿಸ್ಥಿತಿ ಸೇರಿದಂತೆ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ನಾವು ವಿವರವಾದ ವಿನಿಮಯವನ್ನು ಹೊಂದಿದ್ದೇವೆ. ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸಲು ಭಾರತದ ಸಂಪೂರ್ಣ ಬೆಂಬಲವನ್ನು ನಾನು ಪುನರುಚ್ಚರಿಸಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Ladakh: ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ರಚನೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಈ ವೇಳೆ, ಬಾಂಗ್ಲಾದೇಶದ ಪರಿಸ್ಥಿತಿ ಮತ್ತು ದೇಶದ ಬಂಗಾಳಿ ಹಿಂದೂ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಎರಡೂ ದೇಶಗಳ ನಾಯಕರು ಚರ್ಚಿಸಿದ್ದಾರೆ. “ನಾವು ಬಾಂಗ್ಲಾದೇಶದ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ ಮತ್ತು ಸಹಜತೆಯನ್ನು ಶೀಘ್ರವಾಗಿ ಮರುಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳಿದ್ದೇವೆ ಮತ್ತು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಆದ್ಯತೆ ನೀಡುತ್ತೇವೆ” ಎಂದು ಮೋದಿ ಹೇಳಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳು ಮತ್ತು ಹಿಂದೂಗಳ ಮನೆಗಳು ಮತ್ತು ವ್ಯವಹಾರಗಳ ಮೇಲೆ ದಾಳಿಗಳು ಹೆಚ್ಚಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್