AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ದಿನಗಳ ಜಿ20 ಶೃಂಗಸಭೆ ಅಂತ್ಯ, ನವೆಂಬರ್​ನಲ್ಲಿ ವರ್ಚ್ಯುವಲ್ ಸಭೆ ಬಗ್ಗೆ ಮಾಹಿತಿ ನೀಡಿದ ಪ್ರಧಾನಿ ಮೋದಿ

ದೆಹಲಿಯಲ್ಲಿ ನಿನ್ನೆಯಿಂದ ಆರಂಭವಾಗಿರುವ ಜಿ20 ಶೃಂಗಸಭೆ ಮುಕ್ತಾಯಗೊಂಡಿದ್ದು, ನವೆಂಬರ್​ನಲ್ಲಿ ವರ್ಚ್ಯುವಲ್ ಸಭೆ ನಡೆಯಲಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದರು. ಮುಂದಿನ ವರ್ಷ ಬ್ರೆಜಿಲ್​ನಲ್ಲಿ ಜಿ20 ಸಮ್ಮೇಳನವನ್ನು ಆಯೋಜಿಸಲಾಗುವುದು, ಆದರೆ ನವೆಂಬರ್​ ಅಂತ್ಯದವರೆಗೆ ಅಧ್ಯಕ್ಷ ಸ್ಥಾನ ಭಾರತದೊಂದಿಗೆ ಇರಲಿದೆ.

ಎರಡು ದಿನಗಳ ಜಿ20 ಶೃಂಗಸಭೆ ಅಂತ್ಯ, ನವೆಂಬರ್​ನಲ್ಲಿ ವರ್ಚ್ಯುವಲ್ ಸಭೆ ಬಗ್ಗೆ ಮಾಹಿತಿ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Sep 10, 2023 | 2:45 PM

ದೆಹಲಿಯಲ್ಲಿ ನಿನ್ನೆಯಿಂದ ಆರಂಭವಾಗಿರುವ ಜಿ20 ಶೃಂಗಸಭೆ ಮುಕ್ತಾಯಗೊಂಡಿದ್ದು, ನವೆಂಬರ್​ನಲ್ಲಿ ವರ್ಚ್ಯುವಲ್ ಸಭೆ ನಡೆಯಲಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದರು. ಮುಂದಿನ ವರ್ಷ ಬ್ರೆಜಿಲ್​ನಲ್ಲಿ ಜಿ20 ಸಮ್ಮೇಳನವನ್ನು ಆಯೋಜಿಸಲಾಗುವುದು, ಆದರೆ ನವೆಂಬರ್​ ಅಂತ್ಯದವರೆಗೆ ಅಧ್ಯಕ್ಷ ಸ್ಥಾನ ಭಾರತದೊಂದಿಗೆ ಇರಲಿದೆ.

ನವೆಂಬರ್ ವರೆಗೂ ಜಿ20 ಅಧ್ಯಕ್ಷ ಜವಾಬ್ದಾರಿ ಭಾರತದೊಂದಿಗಿರಲಿದೆ, ಇನ್ನೂ ಎರಡೂವರೆ ತಿಂಗಳು ಬಾಕಿ ಇದೆ, ಈ ಅವಧಿಯಲ್ಲಿ ಅನೇಕ ವಿಷಯಗಳನ್ನಿಟ್ಟುಕೊಂಡು ಚರ್ಚೆ ನಡೆಸಬೇಕಿದೆ. ಬಂದಿರುವ ಸಲಹೆಗಳನ್ನು ಮತ್ತೊಮ್ಮೆ ನೋಡುವುದು ಹಾಗೂ ಅವುಗಳ ಪ್ರಗತಿಯನ್ನು ಹೇಗೆ ವೇಗಗೊಳಿಸಬಹುದು ಎಂಬುದನ್ನು ಗಮನಿಸುವುದು ನಮ್ಮ ಜವಾಬ್ದಾರಿಯಾಗಿದೆ. ನವೆಂಬರ್ ಅಂತ್ಯದಲ್ಲಿ ಜಿ20 ವರ್ಚ್ಯುವಲ್ ಅಧಿವೇಶನವನ್ನು ನಡೆಸಲು ನಿರ್ಧರಿಸಲಾಗಿದೆ.

ಇಂದು ಮುಂಜಾನೆ ವಿಶ್ವ ನಾಯಕರು ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು. ನವದೆಹಲಿಯ ಭಾರತ್ ಮಂಟಪಂ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗುತ್ತಿರುವ 18 ನೇ ಜಿ 20 ಶೃಂಗಸಭೆಯ ಮೊದಲ ದಿನದಂದು ಪ್ರಧಾನಿ ಮೋದಿ ಅವರು ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ 30 ಕ್ಕೂ ಹೆಚ್ಚು ದೇಶಗಳು ಮತ್ತು ಸಂಸ್ಥೆಗಳ ನಾಯಕರಿಗೆ ಆತಿಥ್ಯ ನೀಡಿದರು.

ಮತ್ತಷ್ಟು ಓದಿ: ಬ್ರೆಜಿಲ್​ನಲ್ಲಿ ಮುಂದಿನ ಜಿ20 ಶೃಂಗಸಭೆ: ಬ್ರೆಜಿಲ್ ಅಧ್ಯಕ್ಷ ಲುಲಾಗೆ ಜವಾಬ್ದಾರಿ ಹಸ್ತಾಂತರಿಸಿದ ಪ್ರಧಾನಿ ಮೋದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಜಿ 20 ಸ್ಥಳದಲ್ಲಿ ಸುಮಾರು 400 ಅತಿಥಿಗಳಿಗೆ ಅದ್ಧೂರಿ ಭೋಜನವನ್ನು ಆಯೋಜಿಸುವುದರೊಂದಿಗೆ ದಿನವು ಮುಕ್ತಾಯಗೊಂಡಿತ್ತು, ಮೋದಿ ಅವರು ಸ್ವಾಗತ ವೇದಿಕೆಯಿಂದ ಜಾಗತಿಕ ನಾಯಕರನ್ನು ಸ್ವಾಗತಿಸಿದರು, ಜತೆಗೆ ಬಿಹಾರದ ನಳಂದ ವಿಶ್ವವಿದ್ಯಾಲಯದ ವಿಶೇಷತೆಗಳನ್ನು ಪ್ರದರ್ಶಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್