ಸಿಡಿಲು ಬಡಿದು ಮೃತಪಟ್ಟ ಜನರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

TV9 Digital Desk

| Edited By: Rashmi Kallakatta

Updated on:Jul 12, 2021 | 1:01 PM

PM Narendra Modi: ಮೂರು ರಾಜ್ಯಗಳಲ್ಲಿ ಸಿಡಿಲಿನ ದಾಳಿಯಲ್ಲಿ ಮೃತಪಟ್ಟವರ ಸಾವಿಗೆ ಪಿಎಂಒ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಆಯಾ ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಿದೆ ಎಂದು ಹೇಳಿದೆ.

ಸಿಡಿಲು ಬಡಿದು ಮೃತಪಟ್ಟ ಜನರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

Follow us on

ದೆಹಲಿ: ಭಾನುವಾರ ಭಾರೀ ಮಳೆಯಿಂದಾಗಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದಲ್ಲಿ ಸಿಡು ಬಡಿದು ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಧನ ಘೋಷಿಸಿದರು. ರಾಜಸ್ಥಾನದ 12 ನೇ ಶತಮಾನದ ಅಂಬರ್ ಕೋಟೆಯಲ್ಲಿ ಕಾವಲು ಗೋಪುರದ ಬಳಿ ಸಿಡಿಲು ಬಡಿದು 20 ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಗೊಂಡವರ ಕುಟುಂಬಗಳಿಗೆ ₹ 50,000 ನೀಡಲಾಗುವುದು ಎಂದು ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ ಕಚೇರಿ (PMO) ತಿಳಿಸಿದೆ. ಮೂರು ರಾಜ್ಯಗಳಲ್ಲಿ ಸಿಡಿಲಿನ ದಾಳಿಯಲ್ಲಿ ಮೃತಪಟ್ಟವರ ಸಾವಿಗೆ ಪಿಎಂಒ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಆಯಾ ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಿದೆ ಎಂದು ಹೇಳಿದೆ. ಅಂಬರ್ ಕೋಟೆಯ ಕಾವಲು ಗೋಪುರದ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ರಾಜಸ್ಥಾನದ ಜನರ ಗುಂಪಿನ ಮೇಲೆ ಸಿಡಿಲು ಅಪ್ಪಳಿಸಿತು. ರಾಜಸ್ಥಾನದಲ್ಲಿ ಕೋಟಾ, ಧೋಲ್ಪುರ್, ಝಾಲವರ್, ಜೈಪುರ ಮತ್ತು ಬರಾನ್ ಜಿಲ್ಲೆಗಳಲ್ಲಿ ಸಿಡಿಲು ಅಪ್ಪಳಿಸಿದೆ.

ಅಂಬರ್ ಕೋಟೆ ಪ್ರದೇಶದಿಂದ 29 ಜನರನ್ನು ರಕ್ಷಿಸಲಾಗಿದೆ ಎಂದು ಜೈಪುರ ಪೊಲೀಸ್ ಆಯುಕ್ತ ಆನಂದ್ ಶ್ರೀವಾಸ್ತವ ತಿಳಿಸಿದ್ದಾರೆ. “ಸ್ಥಳೀಯರ ಸಹಾಯದಿಂದ, ಅಂಬರ್ ಕೋಟೆ ಪ್ರದೇಶದ ಸುಮಾರು 29 ಜನರನ್ನು ಸಿಡಿಲಿನ ಹೊಡೆತದಿಂದ ರಕ್ಷಿಸಿದೆವು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದು ಅವರು ಹೇಳಿದರು. ರಾಜಸ್ಥಾನದಲ್ಲಿ ಸಿಡಿಲಿನ ಹೊಡೆತದಿಂದ ಸಾವನ್ನಪ್ಪಿದವರಲ್ಲಿ ಏಳು ಮಕ್ಕಳು ಸೇರಿದ್ದಾರೆ.

ಉತ್ತರ ಪ್ರದೇಶದಲ್ಲಿ ಭಾನುವಾರ ಸಿಡಿಲಿನಿಂದ 18 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಅಧಿಕಾರಿ ಮನೋಜ್ ದೀಕ್ಷಿತ್ ಹೇಳಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಹೊಲಗಳಲ್ಲಿ ಕೆಲಸ ಮಾಡುವ ಕೃಷಿ ಕಾರ್ಮಿಕರಾಗಿದ್ದಾರೆ.

ಎರಡೂ ರಾಜ್ಯ ಸರ್ಕಾರಗಳು ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಆರ್ಥಿಕ ಪರಿಹಾರವನ್ನು ಘೋಷಿಸಿದವು.

ಮಧ್ಯಪ್ರದೇಶದಲ್ಲಿ ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಶಿಯೋಪುರ್ ಮತ್ತು ಗ್ವಾಲಿಯರ್ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವುದರೊಂದಿಗೆ ಹೆಚ್ಚಿನ ಸಿಡಿಲು ಇರಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. 2019 ರಲ್ಲಿ ಭಾರತದಲ್ಲಿ 2,900 ಕ್ಕೂ ಹೆಚ್ಚು ಜನರು ಸಿಡಿಲಿನಿಂದ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕೋಟೆ ನೋಡಲು ತೆರಳಿದ್ದಾಗ ಬಂದೆರಗಿದ ಸಿಡಿಲು; ಸುಮಾರು 20 ಮಂದಿ ಸಾವು, 17 ಜನರಿಗೆ ಗಾಯ

(PM Narendra Modi announces ex-gratia for families of those who were killed in lightning strikes in Rajasthan Madhya Pradesh Uttar Pradesh)

ತಾಜಾ ಸುದ್ದಿ

Related Stories

Click on your DTH Provider to Add TV9 Kannada