Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಲು ಬಡಿದು ಮೃತಪಟ್ಟ ಜನರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

PM Narendra Modi: ಮೂರು ರಾಜ್ಯಗಳಲ್ಲಿ ಸಿಡಿಲಿನ ದಾಳಿಯಲ್ಲಿ ಮೃತಪಟ್ಟವರ ಸಾವಿಗೆ ಪಿಎಂಒ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಆಯಾ ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಿದೆ ಎಂದು ಹೇಳಿದೆ.

ಸಿಡಿಲು ಬಡಿದು ಮೃತಪಟ್ಟ ಜನರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 12, 2021 | 1:01 PM

ದೆಹಲಿ: ಭಾನುವಾರ ಭಾರೀ ಮಳೆಯಿಂದಾಗಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದಲ್ಲಿ ಸಿಡು ಬಡಿದು ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಧನ ಘೋಷಿಸಿದರು. ರಾಜಸ್ಥಾನದ 12 ನೇ ಶತಮಾನದ ಅಂಬರ್ ಕೋಟೆಯಲ್ಲಿ ಕಾವಲು ಗೋಪುರದ ಬಳಿ ಸಿಡಿಲು ಬಡಿದು 20 ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಗೊಂಡವರ ಕುಟುಂಬಗಳಿಗೆ ₹ 50,000 ನೀಡಲಾಗುವುದು ಎಂದು ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ ಕಚೇರಿ (PMO) ತಿಳಿಸಿದೆ. ಮೂರು ರಾಜ್ಯಗಳಲ್ಲಿ ಸಿಡಿಲಿನ ದಾಳಿಯಲ್ಲಿ ಮೃತಪಟ್ಟವರ ಸಾವಿಗೆ ಪಿಎಂಒ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಆಯಾ ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಿದೆ ಎಂದು ಹೇಳಿದೆ. ಅಂಬರ್ ಕೋಟೆಯ ಕಾವಲು ಗೋಪುರದ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ರಾಜಸ್ಥಾನದ ಜನರ ಗುಂಪಿನ ಮೇಲೆ ಸಿಡಿಲು ಅಪ್ಪಳಿಸಿತು. ರಾಜಸ್ಥಾನದಲ್ಲಿ ಕೋಟಾ, ಧೋಲ್ಪುರ್, ಝಾಲವರ್, ಜೈಪುರ ಮತ್ತು ಬರಾನ್ ಜಿಲ್ಲೆಗಳಲ್ಲಿ ಸಿಡಿಲು ಅಪ್ಪಳಿಸಿದೆ.

ಅಂಬರ್ ಕೋಟೆ ಪ್ರದೇಶದಿಂದ 29 ಜನರನ್ನು ರಕ್ಷಿಸಲಾಗಿದೆ ಎಂದು ಜೈಪುರ ಪೊಲೀಸ್ ಆಯುಕ್ತ ಆನಂದ್ ಶ್ರೀವಾಸ್ತವ ತಿಳಿಸಿದ್ದಾರೆ. “ಸ್ಥಳೀಯರ ಸಹಾಯದಿಂದ, ಅಂಬರ್ ಕೋಟೆ ಪ್ರದೇಶದ ಸುಮಾರು 29 ಜನರನ್ನು ಸಿಡಿಲಿನ ಹೊಡೆತದಿಂದ ರಕ್ಷಿಸಿದೆವು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದು ಅವರು ಹೇಳಿದರು. ರಾಜಸ್ಥಾನದಲ್ಲಿ ಸಿಡಿಲಿನ ಹೊಡೆತದಿಂದ ಸಾವನ್ನಪ್ಪಿದವರಲ್ಲಿ ಏಳು ಮಕ್ಕಳು ಸೇರಿದ್ದಾರೆ.

ಉತ್ತರ ಪ್ರದೇಶದಲ್ಲಿ ಭಾನುವಾರ ಸಿಡಿಲಿನಿಂದ 18 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಅಧಿಕಾರಿ ಮನೋಜ್ ದೀಕ್ಷಿತ್ ಹೇಳಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಹೊಲಗಳಲ್ಲಿ ಕೆಲಸ ಮಾಡುವ ಕೃಷಿ ಕಾರ್ಮಿಕರಾಗಿದ್ದಾರೆ.

ಎರಡೂ ರಾಜ್ಯ ಸರ್ಕಾರಗಳು ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಆರ್ಥಿಕ ಪರಿಹಾರವನ್ನು ಘೋಷಿಸಿದವು.

ಮಧ್ಯಪ್ರದೇಶದಲ್ಲಿ ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಶಿಯೋಪುರ್ ಮತ್ತು ಗ್ವಾಲಿಯರ್ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವುದರೊಂದಿಗೆ ಹೆಚ್ಚಿನ ಸಿಡಿಲು ಇರಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. 2019 ರಲ್ಲಿ ಭಾರತದಲ್ಲಿ 2,900 ಕ್ಕೂ ಹೆಚ್ಚು ಜನರು ಸಿಡಿಲಿನಿಂದ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕೋಟೆ ನೋಡಲು ತೆರಳಿದ್ದಾಗ ಬಂದೆರಗಿದ ಸಿಡಿಲು; ಸುಮಾರು 20 ಮಂದಿ ಸಾವು, 17 ಜನರಿಗೆ ಗಾಯ

(PM Narendra Modi announces ex-gratia for families of those who were killed in lightning strikes in Rajasthan Madhya Pradesh Uttar Pradesh)

Published On - 12:51 pm, Mon, 12 July 21

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ