AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ ಘೋಷಣೆ

Free Ration Kit: ಬಡವರು ಯಾರೂ ಹಸಿವಿನಿಂದ ಮಲಗಬಾರದು ಎಂದು ಇದನ್ನು ವಿಸ್ತರಿಸಿ ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್​ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

PM Narendra Modi: ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ ಘೋಷಣೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jun 07, 2021 | 5:48 PM

Share

ದೆಹಲಿ: ಮಹಾಪಿಡುಗಿನ ಈ ಸಮಯದಲ್ಲಿ ಬಡವರ ಎಲ್ಲ ಅಗತ್ಯಗಳನ್ನು ಗಮನಿಸಿ, ನಾವು ಅವರ ಜೊತೆಗೆ ಇರುತ್ತೇವೆ. ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಧಾನ್ಯ ವಿತರಣೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೊಷಿಸಿದರು. ಈ ವರ್ಷ ಮೇ, ಜೂನ್‌ ತಿಂಗಳುಗಳಲ್ಲಿ ಉಚಿತ ಆಹಾರ ಧಾನ್ಯ ವಿತರಣೆ ಮಾಡಲು ಸೂಚಿಸಲಾಗಿತ್ತು. ಬಡವರು ಯಾರೂ ಹಸಿವಿನಿಂದ ಮಲಗಬಾರದು ಎಂದು ಇದನ್ನು ವಿಸ್ತರಿಸಿ ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್​ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

ಜೂನ್ 21ರ ಯೋಗ ದಿನದ ನಂತರ ದೇಶದಲ್ಲಿ ಲಸಿಕೆ ವಿತರಣಾ ಅಭಿಯಾನ ಹೊಸ ವೇಗ ಪಡೆಯಲಿದೆ. ಭಾರತ ಸರ್ಕಾರವೇ ಎಲ್ಲ ರಾಜ್ಯಗಳಿಗೂ ಉಚಿತವಾಗಿ ಕೊಡಲಿದೆ. ಭಾರತದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ ಕೊಡಲಾಗುವುದು. ಲಸಿಕೆ ವಿತರಣೆಯಲ್ಲಿ ಬಡವರು, ಮಧ್ಯಮ ವರ್ಗದವರು ಎಂಬ ಭೇದ ಇರುವುದಿಲ್ಲ. ಯಾರಿಗಾದರೂ ಉಚಿತ ಲಸಿಕೆಯ ಬದಲು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುತ್ತೇವೆ ಎಂದಾದರೆ ಅದಕ್ಕೂ ಅವಕಾಶವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

PM Modi Speech: ಭಾರತದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ: ಪ್ರಧಾನಿ ನರೇಂದ್ರ ಮೋದಿ

ಆತ್ಮನಿರ್ಭರ್​ ಪ್ಯಾಕೇಜ್​ನಡಿ ಕೊವಿಡ್​ ಪ್ಯಾಕೇಜ್​ ಮೂಲಕ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಲಸಿಕೆಗಳ ಲಭ್ಯತೆ ಇನ್ನೂ ಹೆಚ್ಚಲಿದೆ. ದೇಶದ 7 ಕಂಪನಿಗಳು ಲಸಿಕೆ ತಯಾರಿಸುತ್ತಿವೆ. 3 ಟ್ರಯಲ್​ಗಳು ನಡೆಯುತ್ತಿವೆ. ಇತರ ದೇಶಗಳ ಕಂಪನಿಗಳಿಂದಲೂ ಲಸಿಕೆ ಖರೀದಿ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ಕೆಲ ತಜ್ಞರ ಮೂಲಕ ಮಕ್ಕಳ ಸುರಕ್ಷೆ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ಮಕ್ಕಳಿಗೆ ಲಸಿಕೆ ನೀಡುವ ಟ್ರಯಲ್ ನಡೆಯುತ್ತಿದೆ. ಮೂಗಿನ ಮೂಲಕ ಕೊಡುವ (ನೇಸಲ್) ಲಸಿಕೆಯ ಟ್ರಯಲ್ ಸಹ ನಡೆಯುತ್ತಿದೆ. ಈ ಲಸಿಕೆಯಲ್ಲಿ ಸಫಲತೆ ಸಿಕ್ಕರೆ ಭಾರತದಲ್ಲಿ ಲಸಿಕೆ ಅಭಿಯಾನ ಇನ್ನಷ್ಟು ವೇಗ ಪಡೆಯುತ್ತದೆ. ಇಷ್ಟು ಕಡಿಮೆ ಸಮಯದಲ್ಲಿ ಲಸಿಕೆ ಮಾಡುವುದರಿಂದ ವಿಶ್ವದ ಜನಸಮುದಾಯಕ್ಕೆ ಅನುಕೂಲವಾಗಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂತ್ ಮಟ್ಟದಲ್ಲಿ ಕೊವಿಡ್ ಲಸಿಕೆ ನೀಡಲು ಮನೆ-ಮನೆ ಸಮೀಕ್ಷೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ಮೈಸೂರು ವಿವಿಯಿಂದ ಕೊವಿಡ್ ರ‍್ಯಾಪಿಡ್‌ ಡಿಟೆಕ್ಷನ್ ಕಿಟ್ ವಿನ್ಯಾಸ; ಲಸಿಕೆ ಅಭಿವೃದ್ಧಿಪಡಿಸಲು ಅನುದಾನದ ಕೊರತೆ

(PM Narendra Modi announces free Ration Kit to poor till November deepavali)

Published On - 5:41 pm, Mon, 7 June 21

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ