AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ಮನೆಗಳಿಗೆ ಸೌರ ಮೇಲ್ಛಾವಣಿ ಅಳವಡಿಸುವ ಪ್ರಧಾನಮಂತ್ರಿ ‘ಸೂರ್ಯೋದಯ ಯೋಜನೆ’ ಘೋಷಿಸಿದ ಕೇಂದ್ರ

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ರೂಫ್‌ಟಾಪ್ ಸೋಲಾರ್ ಅಳವಡಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಯೋಜನೆ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 ಕೋಟಿ ಮನೆಗಳಿಗೆ ಸೌರ ಮೇಲ್ಛಾವಣಿ ಅಳವಡಿಸುವ ಪ್ರಧಾನಮಂತ್ರಿ ‘ಸೂರ್ಯೋದಯ ಯೋಜನೆ’ ಘೋಷಿಸಿದ ಕೇಂದ್ರ
ಪ್ರಧಾನಿ ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 22, 2024 | 8:37 PM

Share

ದೆಹಲಿ ಜನವರಿ 22: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram mandir) ಭಗವಾನ್ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೂರ್ಯೋದಯ ಯೋಜನೆಯನ್ನು(Pradhan Mantri Suryoday Yojana) ಘೋಷಿಸಿದ್ದಾರೆ. ದೇಶವಾಸಿಗಳು ತಮ್ಮ ಮನೆಗಳ ಮೇಲ್ಛಾವಣಿಯ ಮೇಲೆ ಸೌರ ವ್ಯವಸ್ಥೆಯನ್ನು ಹೊಂದಬೇಕು ಎಂಬ ಅವರ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ಯೋಜನೆಯಡಿಯಲ್ಲಿ ಒಂದು ಕೋಟಿ ಮನೆಗಳಲ್ಲಿ ರೂಫ್‌ಟಾಪ್ ಸೋಲಾರ್ ಅಳವಡಿಸಲಾಗುವುದು.

ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಂದರ್ಭದಲ್ಲಿ ಭಾರತದ ಜನರು ತಮ್ಮ ಮನೆಗಳ ಮೇಲ್ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ ಎಂದು ಸಾಮಾಜಿಕ ವೇದಿಕೆ X ನಲ್ಲಿ ಮೋದಿ ಬರೆದಿದ್ದಾರೆ.

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದಿದ್ದಾರೆ ಅವರು.

ಪ್ರಧಾನಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಇಲ್ಲಿ ಅಧಿಕಾರಿಗಳೊಂದಿಗೆ ಯೋಜನೆಯ ಕುರಿತು ಚರ್ಚಿಸುತ್ತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.

ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭ

ಇದಕ್ಕೂ ಮುನ್ನ ಅಯೋಧ್ಯೆಯ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಯುಪಿ ಗವರ್ನರ್ ಆನಂದಿಬೆನ್ ಪಟೇಲ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ದೇವಾಲಯದ ಗರ್ಭಗುಡಿಯಲ್ಲಿ ನಡೆದ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇದು ಭಾರತದ ಸಮಯ ಮತ್ತು ಭಾರತವು ಮುಂದುವರಿಯಲಿದೆ. ಶತಮಾನಗಳು ಕಾದ ನಂತರ ನಾವು ಇಲ್ಲಿಗೆ ತಲುಪಿದ್ದೇವೆ. ನಾವೆಲ್ಲರೂ ಈ ಯುಗ, ಈ ಅವಧಿಗಾಗಿ ಕಾಯುತ್ತಿದ್ದೇವೆ. ಈಗ ನಾವು ನಿಲ್ಲುವುದಿಲ್ಲ. ನಾವು ಅಭಿವೃದ್ಧಿಯ ಎತ್ತರವನ್ನು ತಲುಪುತ್ತೇವೆ ಕಾರ್ಯಕ್ರಮದ ನಂತರ ಮಾತನಾಡಿದ ಪ್ರಧಾನಿ ಹೇಳಿದರು.

ಇದನ್ನೂ ಓದಿ: ಕುಬೇರ್ ಟೀಲಾ ಶಿವ ದೇವಾಲಯದಲ್ಲಿ ಪ್ರಾರ್ಥನೆ; ‘ಜಟಾಯು’ ಪ್ರತಿಮೆ ಅನಾವರಣಗೊಳಿಸಿದ ಮೋದಿ

ನ್ಯಾಯದ ಘನತೆಯನ್ನು ಹಾಗೇ ಉಳಿಸಿದ್ದಕ್ಕಾಗಿ ಭಾರತದ ನ್ಯಾಯಾಂಗಕ್ಕೆ ಮೋದಿ ಧನ್ಯವಾದ ಅರ್ಪಿಸಿದರು. ನ್ಯಾಯದ ಸಾಕಾರ, ಶ್ರೀರಾಮನ ಮಂದಿರವನ್ನು ನ್ಯಾಯಯುತ ವಿಧಾನಗಳ ಮೂಲಕ ನಿರ್ಮಿಸಲಾಗಿದೆ” ಎಂದು ಅವರು ಒತ್ತಿ ಹೇಳಿದರು. ದಶಕಗಳಷ್ಟು ಹಳೆಯದಾದ ವಿವಾದವನ್ನು 2019 ರಲ್ಲಿ ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿತ್ತು. ಸಣ್ಣ ಗ್ರಾಮಗಳು ಸೇರಿದಂತೆ ಇಡೀ ರಾಷ್ಟ್ರವು ಮೆರವಣಿಗೆಗಳನ್ನು ವೀಕ್ಷಿಸುತ್ತಿದೆ. ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Mon, 22 January 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ