AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಹಾನಿಗೊಳಗಾದ ಉತ್ತರಾಖಂಡಕ್ಕೆ ಪ್ರಧಾನಿ ಮೋದಿ 1,200 ಕೋಟಿ ರೂ.ನೆರವು ಘೋಷಣೆ

ಉತ್ತರಾಖಂಡದ ವಿಪತ್ತು ಪೀಡಿತ ಪ್ರದೇಶಗಳಿಗೆ ಇಂದು (ಗುರುವಾರ) ಪ್ರಧಾನಿ ನರೇಂದ್ರ ಮೋದಿ 1,200 ಕೋಟಿ ರೂ. ನೆರವು ಘೋಷಿಸಿದ್ದಾರೆ. ಈ ಮಾನ್ಸೂನ್‌ನಲ್ಲಿ ಭಾರಿ ಮಳೆ, ಮೇಘಸ್ಫೋಟ ಮತ್ತು ಭೂಕುಸಿತಗಳು ಉತ್ತರಕಾಶಿಯ ಧರಾಲಿ-ಹರ್ಸಿಲ್, ಚಮೋಲಿಯ ಥರಾಲಿ ಮತ್ತು ರುದ್ರಪ್ರಯಾಗದ ಚೆನಗಡ್ ಸೇರಿದಂತೆ ಉತ್ತರಾಖಂಡದ ಹಲವಾರು ಪ್ರದೇಶಗಳಲ್ಲಿ ಹಾನಿ ಉಂಟುಮಾಡಿದೆ.

ಮಳೆಯಿಂದ ಹಾನಿಗೊಳಗಾದ ಉತ್ತರಾಖಂಡಕ್ಕೆ ಪ್ರಧಾನಿ ಮೋದಿ 1,200 ಕೋಟಿ ರೂ.ನೆರವು ಘೋಷಣೆ
Pm Modi Meeting
ಸುಷ್ಮಾ ಚಕ್ರೆ
|

Updated on:Sep 11, 2025 | 8:23 PM

Share

ನವದೆಹಲಿ, ಸೆಪ್ಟೆಂಬರ್ 11: ಉತ್ತರಾಖಂಡದ ವಿಪತ್ತು ಪೀಡಿತ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಗುರುವಾರ) 1,200 ಕೋಟಿ ರೂ. ನೆರವು ಪ್ಯಾಕೇಜ್ ಘೋಷಿಸಿದ್ದಾರೆ. ಈ ಮಾನ್ಸೂನ್‌ನಲ್ಲಿ ಮಳೆ ಸಂಬಂಧಿತ ನೈಸರ್ಗಿಕ ವಿಕೋಪಗಳ ಸರಣಿಯ ನಂತರ ರಾಜ್ಯ ಸರ್ಕಾರ ಕೇಂದ್ರದಿಂದ 5,702 ಕೋಟಿ ರೂ. ಪರಿಹಾರವನ್ನು ಕೋರಿದೆ. ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಕೇಂದ್ರ ತಂಡವು ಈಗಾಗಲೇ ಉತ್ತರಕಾಶಿ, ರುದ್ರಪ್ರಯಾಗ, ಪೌರಿ ಗರ್ವಾಲ್, ಚಮೋಲಿ, ಬಾಗೇಶ್ವರ ಮತ್ತು ನೈನಿತಾಲ್ ಜಿಲ್ಲೆಗಳ ಪೀಡಿತ ಪ್ರದೇಶಗಳಿಗೆ ಪರಿಶೀಲನೆಗಾಗಿ ಭೇಟಿ ನೀಡಿದೆ. ಇಂದು ಮುಂಜಾನೆ ಡೆಹ್ರಾಡೂನ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ರಾಜ್ಯದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. 2013ರ ಕೇದಾರನಾಥ ದುರಂತದ ನಂತರ ಈ ವರ್ಷ ಉತ್ತರಾಖಂಡ ರಾಜ್ಯವು ಅತಿ ಹೆಚ್ಚು ವಿಪತ್ತುಗಳಿಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಪ್ರವಾಹದಿಂದ ತತ್ತರಿಸಿದ ಪಂಜಾಬ್​​ಗೆ ಪ್ರಧಾನಿ ಮೋದಿ ಭೇಟಿ; 1,600 ಕೋಟಿ ರೂ. ಆರ್ಥಿಕ ಸಹಾಯ ಘೋಷಣೆ

ಈ ಮಳೆಗಾಲದಲ್ಲಿ ಉತ್ತರಾಖಂಡದ ಹಲವಾರು ಪ್ರದೇಶಗಳು ಭಾರೀ ಮಳೆ, ಮೇಘಸ್ಫೋಟ ಮತ್ತು ಭೂಕುಸಿತಗಳಿಂದ ಹಾನಿಗೊಳಗಾಗಿವೆ. ಇದರಲ್ಲಿ ಉತ್ತರಕಾಶಿಯ ಧರಾಲಿ-ಹರ್ಸಿಲ್, ಚಮೋಲಿಯ ಥರಾಲಿ, ರುದ್ರಪ್ರಯಾಗದ ಚೆನಾಗಡ್, ಪೌರಿಯ ಸೈಂಜಿ, ಬಾಗೇಶ್ವರದ ಕಪ್‌ಕೋಟ್ ಮತ್ತು ನೈನಿತಾಲ್ ಜಿಲ್ಲೆಯ ಕೆಲವು ಭಾಗಗಳು ಸೇರಿವೆ. ಧರಾಲಿ-ಹರ್ಸಿಲ್‌ನಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಗಂಗಾ ನದಿ ಹುಟ್ಟುವ ಗಂಗೋತ್ರಿಯ ಮಾರ್ಗದಲ್ಲಿರುವ ಈ ಸುಂದರ ತಾಣಗಳನ್ನು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ಹೋಟೆಲ್‌ಗಳು, ಹೋಂಸ್ಟೇಗಳು, ರೆಸ್ಟೋರೆಂಟ್‌ಗಳು ಮತ್ತು ಅತಿಥಿ ಗೃಹಗಳಿಂದ ತುಂಬಿದ್ದ ಈ ಪ್ರದೇಶವು ಆಗಸ್ಟ್ 5ರಂದು ಕೆಲವೇ ಸೆಕೆಂಡುಗಳಲ್ಲಿ ಮಣ್ಣು ಮತ್ತು ಅವಶೇಷಗಳಿಂದ ತುಂಬಿತು.

ಏಪ್ರಿಲ್‌ನಿಂದ ಉತ್ತರಾಖಂಡ ರಾಜ್ಯದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪಗಳು ಇಲ್ಲಿಯವರೆಗೆ 85 ಜನರು ಸಾವನ್ನಪ್ಪಿದ್ದಾರೆ, 128 ಜನರು ಗಾಯಗೊಂಡಿದ್ದಾರೆ ಮತ್ತು 94 ಜನರು ಕಾಣೆಯಾಗಿದ್ದಾರೆ ಎಂದು ಅಧಿಕೃತ ಅಂಕಿಅಂಶಗಳು ಹೇಳುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:20 pm, Thu, 11 September 25

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು