AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಹಾನಿಗೊಳಗಾದ ಉತ್ತರಾಖಂಡಕ್ಕೆ ಪ್ರಧಾನಿ ಮೋದಿ 1,200 ಕೋಟಿ ರೂ.ನೆರವು ಘೋಷಣೆ

ಉತ್ತರಾಖಂಡದ ವಿಪತ್ತು ಪೀಡಿತ ಪ್ರದೇಶಗಳಿಗೆ ಇಂದು (ಗುರುವಾರ) ಪ್ರಧಾನಿ ನರೇಂದ್ರ ಮೋದಿ 1,200 ಕೋಟಿ ರೂ. ನೆರವು ಘೋಷಿಸಿದ್ದಾರೆ. ಈ ಮಾನ್ಸೂನ್‌ನಲ್ಲಿ ಭಾರಿ ಮಳೆ, ಮೇಘಸ್ಫೋಟ ಮತ್ತು ಭೂಕುಸಿತಗಳು ಉತ್ತರಕಾಶಿಯ ಧರಾಲಿ-ಹರ್ಸಿಲ್, ಚಮೋಲಿಯ ಥರಾಲಿ ಮತ್ತು ರುದ್ರಪ್ರಯಾಗದ ಚೆನಗಡ್ ಸೇರಿದಂತೆ ಉತ್ತರಾಖಂಡದ ಹಲವಾರು ಪ್ರದೇಶಗಳಲ್ಲಿ ಹಾನಿ ಉಂಟುಮಾಡಿದೆ.

ಮಳೆಯಿಂದ ಹಾನಿಗೊಳಗಾದ ಉತ್ತರಾಖಂಡಕ್ಕೆ ಪ್ರಧಾನಿ ಮೋದಿ 1,200 ಕೋಟಿ ರೂ.ನೆರವು ಘೋಷಣೆ
Pm Modi Meeting
ಸುಷ್ಮಾ ಚಕ್ರೆ
|

Updated on:Sep 11, 2025 | 8:23 PM

Share

ನವದೆಹಲಿ, ಸೆಪ್ಟೆಂಬರ್ 11: ಉತ್ತರಾಖಂಡದ ವಿಪತ್ತು ಪೀಡಿತ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಗುರುವಾರ) 1,200 ಕೋಟಿ ರೂ. ನೆರವು ಪ್ಯಾಕೇಜ್ ಘೋಷಿಸಿದ್ದಾರೆ. ಈ ಮಾನ್ಸೂನ್‌ನಲ್ಲಿ ಮಳೆ ಸಂಬಂಧಿತ ನೈಸರ್ಗಿಕ ವಿಕೋಪಗಳ ಸರಣಿಯ ನಂತರ ರಾಜ್ಯ ಸರ್ಕಾರ ಕೇಂದ್ರದಿಂದ 5,702 ಕೋಟಿ ರೂ. ಪರಿಹಾರವನ್ನು ಕೋರಿದೆ. ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಕೇಂದ್ರ ತಂಡವು ಈಗಾಗಲೇ ಉತ್ತರಕಾಶಿ, ರುದ್ರಪ್ರಯಾಗ, ಪೌರಿ ಗರ್ವಾಲ್, ಚಮೋಲಿ, ಬಾಗೇಶ್ವರ ಮತ್ತು ನೈನಿತಾಲ್ ಜಿಲ್ಲೆಗಳ ಪೀಡಿತ ಪ್ರದೇಶಗಳಿಗೆ ಪರಿಶೀಲನೆಗಾಗಿ ಭೇಟಿ ನೀಡಿದೆ. ಇಂದು ಮುಂಜಾನೆ ಡೆಹ್ರಾಡೂನ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ರಾಜ್ಯದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. 2013ರ ಕೇದಾರನಾಥ ದುರಂತದ ನಂತರ ಈ ವರ್ಷ ಉತ್ತರಾಖಂಡ ರಾಜ್ಯವು ಅತಿ ಹೆಚ್ಚು ವಿಪತ್ತುಗಳಿಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಪ್ರವಾಹದಿಂದ ತತ್ತರಿಸಿದ ಪಂಜಾಬ್​​ಗೆ ಪ್ರಧಾನಿ ಮೋದಿ ಭೇಟಿ; 1,600 ಕೋಟಿ ರೂ. ಆರ್ಥಿಕ ಸಹಾಯ ಘೋಷಣೆ

ಈ ಮಳೆಗಾಲದಲ್ಲಿ ಉತ್ತರಾಖಂಡದ ಹಲವಾರು ಪ್ರದೇಶಗಳು ಭಾರೀ ಮಳೆ, ಮೇಘಸ್ಫೋಟ ಮತ್ತು ಭೂಕುಸಿತಗಳಿಂದ ಹಾನಿಗೊಳಗಾಗಿವೆ. ಇದರಲ್ಲಿ ಉತ್ತರಕಾಶಿಯ ಧರಾಲಿ-ಹರ್ಸಿಲ್, ಚಮೋಲಿಯ ಥರಾಲಿ, ರುದ್ರಪ್ರಯಾಗದ ಚೆನಾಗಡ್, ಪೌರಿಯ ಸೈಂಜಿ, ಬಾಗೇಶ್ವರದ ಕಪ್‌ಕೋಟ್ ಮತ್ತು ನೈನಿತಾಲ್ ಜಿಲ್ಲೆಯ ಕೆಲವು ಭಾಗಗಳು ಸೇರಿವೆ. ಧರಾಲಿ-ಹರ್ಸಿಲ್‌ನಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಗಂಗಾ ನದಿ ಹುಟ್ಟುವ ಗಂಗೋತ್ರಿಯ ಮಾರ್ಗದಲ್ಲಿರುವ ಈ ಸುಂದರ ತಾಣಗಳನ್ನು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ಹೋಟೆಲ್‌ಗಳು, ಹೋಂಸ್ಟೇಗಳು, ರೆಸ್ಟೋರೆಂಟ್‌ಗಳು ಮತ್ತು ಅತಿಥಿ ಗೃಹಗಳಿಂದ ತುಂಬಿದ್ದ ಈ ಪ್ರದೇಶವು ಆಗಸ್ಟ್ 5ರಂದು ಕೆಲವೇ ಸೆಕೆಂಡುಗಳಲ್ಲಿ ಮಣ್ಣು ಮತ್ತು ಅವಶೇಷಗಳಿಂದ ತುಂಬಿತು.

ಏಪ್ರಿಲ್‌ನಿಂದ ಉತ್ತರಾಖಂಡ ರಾಜ್ಯದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪಗಳು ಇಲ್ಲಿಯವರೆಗೆ 85 ಜನರು ಸಾವನ್ನಪ್ಪಿದ್ದಾರೆ, 128 ಜನರು ಗಾಯಗೊಂಡಿದ್ದಾರೆ ಮತ್ತು 94 ಜನರು ಕಾಣೆಯಾಗಿದ್ದಾರೆ ಎಂದು ಅಧಿಕೃತ ಅಂಕಿಅಂಶಗಳು ಹೇಳುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:20 pm, Thu, 11 September 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ