AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ಬಾವಿ ದುರಂತ: ಪುಟ್ಟ ಬಾಲಕಿಯ ರಕ್ಷಣಾ ಕಾರ್ಯಾಚರಣೆ ವೇಳೆ  ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ.ಘೋಷಿಸಿದ ಪ್ರಧಾನಿ ಮೋದಿ

Madhya Pradesh: 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದುವರೆಗೆ 19 ಮಂದಿಯನ್ನು ರಕ್ಷಿಸಿದ್ದಾರೆ ಮಧ್ಯಪ್ರದೇಶದ ಸಚಿವ ವಿಶ್ವಾಸ್​ ಸಾರಂಗ್​ ತಿಳಿಸಿದ್ದಾರೆ. ಮೃತರ ಕುಟುಂಗಳಿಗೆ ತಲಾ 5 ಲಕ್ಷ ರೂಪಾಯ ನೀಡುವುದಾಗ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈಗಾಗಲೇ ಘೋಷಿಸಿದ್ದಾರೆ.

ಮಧ್ಯಪ್ರದೇಶ ಬಾವಿ ದುರಂತ: ಪುಟ್ಟ ಬಾಲಕಿಯ ರಕ್ಷಣಾ ಕಾರ್ಯಾಚರಣೆ ವೇಳೆ  ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ.ಘೋಷಿಸಿದ ಪ್ರಧಾನಿ ಮೋದಿ
ವಿದಿಶಾ ಬಾವಿ ದುರಂತದ ಸನ್ನಿವೇಶ
TV9 Web
| Edited By: |

Updated on: Jul 17, 2021 | 8:53 AM

Share

ಮಧ್ಯಪ್ರದೇಶದ ಭೋಪಾಲ್​​ನ ವಿದಿಶಾ (Madhya Pradesh-Vidisha)ದಲ್ಲಿ ನಡೆದ ಬಾವಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Prime Minister Narendra Modi)  ಘೋಷಿಸಿದ್ದಾರೆ. ವಿದಿಶಾ ಜಿಲ್ಲೆಯ ಗಂಜ್​ ಬಸೌಡ ಪ್ರದೇಶದಲ್ಲಿ 8 ವರ್ಷದ ಬಾಲಕಿ ಜುಲೈ 15ರಂದು ಬಾವಿಗೆ ಬಿದ್ದಿದ್ದಳು. ಅವಳನ್ನು ರಕ್ಷಿಸಲು ಕೆಲವರು ಮುಂದಾದರು. ಈ ವೇಳೆ ಬಾವಿಯ ಸುತ್ತ 40ಕ್ಕೂ ಹೆಚ್ಚು ಜನರು ನೆರೆದಿದ್ದರು. ಆಗ ಬಾವಿ ಕುಸಿದ ಪರಿಣಾಮ 40 ಜನರೂ ಬಾವಿಪಾಲಾಗಿದ್ದಾರೆ. ಅದರಲ್ಲಿ ಈಗ 8 ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಈ ದುರಂತದ ಬಗ್ಗೆ ನೋವು ವ್ಯಕ್ತಪಡಿಸಿ ಟ್ವೀಟ್ ಮಾಡಿದ ಪ್ರಧಾನಮಂತ್ರಿ ಕಚೇರಿ, ಮೃತರ ಕುಟುಂಬಗಳಿಗೆ ಸಾಂತ್ವನಗಳು. ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ನೀಡಲಾಗುವುದು ಎಂದು ಹೇಳಿದೆ.

ಇನ್ನು 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದುವರೆಗೆ 19 ಮಂದಿಯನ್ನು ರಕ್ಷಿಸಿದ್ದಾರೆ ಮಧ್ಯಪ್ರದೇಶದ ಸಚಿವ ವಿಶ್ವಾಸ್​ ಸಾರಂಗ್​ ತಿಳಿಸಿದ್ದಾರೆ. ಮೃತರ ಕುಟುಂಗಳಿಗೆ ತಲಾ 5 ಲಕ್ಷ ರೂಪಾಯ ನೀಡುವುದಾಗ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈಗಾಗಲೇ ಘೋಷಿಸಿದ್ದಾರೆ. ಹಾಗೇ ಗಾಯಗೊಂಡವರಿಗೆ ತಲಾ 50,000 ರೂ.ನೀಡಲಾಗುವುದು ಮತ್ತು ಉಚಿತ ಚಿಕಿತ್ಸೆ ನೀಡುವುದಾಗಿಯೂ ಹೇಳಿದ್ದಾರೆ. ಸ್ಥಳೀಯರು ಹೇಳಿರುವಂತೆ ಗುರುವಾರ ಸಂಜೆ ವೇಳೆಗೆ ಬಾವಿಯ ಸಮೀಪ ಆಟವಾಡುತ್ತಿದ್ದ ಬಾಲಕಿ ಆಯತಪ್ಪಿಗೆ ಬಾವಿಗೆ ಬಿದ್ದಿದ್ದಾಳೆ. ಈ ಸುದ್ದಿ ಒಬ್ಬರ ಬಾಯಿಂದ ಒಬ್ಬರಿಗೆ ಹರಡುತ್ತಿದ್ದಂತೆಯೇ ಇಡೀ ಗ್ರಾಮಕ್ಕೆ ಗ್ರಾಮವೇ ಬಾವಿಯ ಸುತ್ತ ಜಮಾಯಿಸಿದೆ. ಬಾವಿಯ ತಡೆಗೋಡೆ ಸುತ್ತ ಒತ್ತಡ ಹೆಚ್ಚಾದ ಪರಿಣಾಮ ತಡೆಗೋಡೆ ಮುರಿದು, ಮಣ್ಣು ಕುಸಿದು ಅನಾಹುತ ಘಟಿಸಿದೆ. ಈ ಬಗ್ಗೆ ಮಾತನಾಡಿರುವ ಭೋಪಾಲ್​ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಾಯಿ ಮನೋಹರ್ ಕೂಡಾ ಇದೇ ಅಭಿಪ್ರಾಯವನ್ನೇ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Petrol Price Today: ಮತ್ತೆ ಪೆಟ್ರೋಲ್​ ಬೆಲೆಯಲ್ಲಿ ಏರಿಕೆ; ಸ್ಥಿರತೆಯನ್ನು ಕಾಯ್ದುಕೊಂಡ ಡೀಸೆಲ್

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್