AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ಬಾವಿ ದುರಂತ: ಪುಟ್ಟ ಬಾಲಕಿಯ ರಕ್ಷಣಾ ಕಾರ್ಯಾಚರಣೆ ವೇಳೆ  ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ.ಘೋಷಿಸಿದ ಪ್ರಧಾನಿ ಮೋದಿ

Madhya Pradesh: 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದುವರೆಗೆ 19 ಮಂದಿಯನ್ನು ರಕ್ಷಿಸಿದ್ದಾರೆ ಮಧ್ಯಪ್ರದೇಶದ ಸಚಿವ ವಿಶ್ವಾಸ್​ ಸಾರಂಗ್​ ತಿಳಿಸಿದ್ದಾರೆ. ಮೃತರ ಕುಟುಂಗಳಿಗೆ ತಲಾ 5 ಲಕ್ಷ ರೂಪಾಯ ನೀಡುವುದಾಗ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈಗಾಗಲೇ ಘೋಷಿಸಿದ್ದಾರೆ.

ಮಧ್ಯಪ್ರದೇಶ ಬಾವಿ ದುರಂತ: ಪುಟ್ಟ ಬಾಲಕಿಯ ರಕ್ಷಣಾ ಕಾರ್ಯಾಚರಣೆ ವೇಳೆ  ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ.ಘೋಷಿಸಿದ ಪ್ರಧಾನಿ ಮೋದಿ
ವಿದಿಶಾ ಬಾವಿ ದುರಂತದ ಸನ್ನಿವೇಶ
TV9 Web
| Edited By: |

Updated on: Jul 17, 2021 | 8:53 AM

Share

ಮಧ್ಯಪ್ರದೇಶದ ಭೋಪಾಲ್​​ನ ವಿದಿಶಾ (Madhya Pradesh-Vidisha)ದಲ್ಲಿ ನಡೆದ ಬಾವಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Prime Minister Narendra Modi)  ಘೋಷಿಸಿದ್ದಾರೆ. ವಿದಿಶಾ ಜಿಲ್ಲೆಯ ಗಂಜ್​ ಬಸೌಡ ಪ್ರದೇಶದಲ್ಲಿ 8 ವರ್ಷದ ಬಾಲಕಿ ಜುಲೈ 15ರಂದು ಬಾವಿಗೆ ಬಿದ್ದಿದ್ದಳು. ಅವಳನ್ನು ರಕ್ಷಿಸಲು ಕೆಲವರು ಮುಂದಾದರು. ಈ ವೇಳೆ ಬಾವಿಯ ಸುತ್ತ 40ಕ್ಕೂ ಹೆಚ್ಚು ಜನರು ನೆರೆದಿದ್ದರು. ಆಗ ಬಾವಿ ಕುಸಿದ ಪರಿಣಾಮ 40 ಜನರೂ ಬಾವಿಪಾಲಾಗಿದ್ದಾರೆ. ಅದರಲ್ಲಿ ಈಗ 8 ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಈ ದುರಂತದ ಬಗ್ಗೆ ನೋವು ವ್ಯಕ್ತಪಡಿಸಿ ಟ್ವೀಟ್ ಮಾಡಿದ ಪ್ರಧಾನಮಂತ್ರಿ ಕಚೇರಿ, ಮೃತರ ಕುಟುಂಬಗಳಿಗೆ ಸಾಂತ್ವನಗಳು. ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ನೀಡಲಾಗುವುದು ಎಂದು ಹೇಳಿದೆ.

ಇನ್ನು 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದುವರೆಗೆ 19 ಮಂದಿಯನ್ನು ರಕ್ಷಿಸಿದ್ದಾರೆ ಮಧ್ಯಪ್ರದೇಶದ ಸಚಿವ ವಿಶ್ವಾಸ್​ ಸಾರಂಗ್​ ತಿಳಿಸಿದ್ದಾರೆ. ಮೃತರ ಕುಟುಂಗಳಿಗೆ ತಲಾ 5 ಲಕ್ಷ ರೂಪಾಯ ನೀಡುವುದಾಗ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈಗಾಗಲೇ ಘೋಷಿಸಿದ್ದಾರೆ. ಹಾಗೇ ಗಾಯಗೊಂಡವರಿಗೆ ತಲಾ 50,000 ರೂ.ನೀಡಲಾಗುವುದು ಮತ್ತು ಉಚಿತ ಚಿಕಿತ್ಸೆ ನೀಡುವುದಾಗಿಯೂ ಹೇಳಿದ್ದಾರೆ. ಸ್ಥಳೀಯರು ಹೇಳಿರುವಂತೆ ಗುರುವಾರ ಸಂಜೆ ವೇಳೆಗೆ ಬಾವಿಯ ಸಮೀಪ ಆಟವಾಡುತ್ತಿದ್ದ ಬಾಲಕಿ ಆಯತಪ್ಪಿಗೆ ಬಾವಿಗೆ ಬಿದ್ದಿದ್ದಾಳೆ. ಈ ಸುದ್ದಿ ಒಬ್ಬರ ಬಾಯಿಂದ ಒಬ್ಬರಿಗೆ ಹರಡುತ್ತಿದ್ದಂತೆಯೇ ಇಡೀ ಗ್ರಾಮಕ್ಕೆ ಗ್ರಾಮವೇ ಬಾವಿಯ ಸುತ್ತ ಜಮಾಯಿಸಿದೆ. ಬಾವಿಯ ತಡೆಗೋಡೆ ಸುತ್ತ ಒತ್ತಡ ಹೆಚ್ಚಾದ ಪರಿಣಾಮ ತಡೆಗೋಡೆ ಮುರಿದು, ಮಣ್ಣು ಕುಸಿದು ಅನಾಹುತ ಘಟಿಸಿದೆ. ಈ ಬಗ್ಗೆ ಮಾತನಾಡಿರುವ ಭೋಪಾಲ್​ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಾಯಿ ಮನೋಹರ್ ಕೂಡಾ ಇದೇ ಅಭಿಪ್ರಾಯವನ್ನೇ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Petrol Price Today: ಮತ್ತೆ ಪೆಟ್ರೋಲ್​ ಬೆಲೆಯಲ್ಲಿ ಏರಿಕೆ; ಸ್ಥಿರತೆಯನ್ನು ಕಾಯ್ದುಕೊಂಡ ಡೀಸೆಲ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ