AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ಬಾವಿ ದುರಂತ: ಪುಟ್ಟ ಬಾಲಕಿಯ ರಕ್ಷಣಾ ಕಾರ್ಯಾಚರಣೆ ವೇಳೆ  ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ.ಘೋಷಿಸಿದ ಪ್ರಧಾನಿ ಮೋದಿ

Madhya Pradesh: 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದುವರೆಗೆ 19 ಮಂದಿಯನ್ನು ರಕ್ಷಿಸಿದ್ದಾರೆ ಮಧ್ಯಪ್ರದೇಶದ ಸಚಿವ ವಿಶ್ವಾಸ್​ ಸಾರಂಗ್​ ತಿಳಿಸಿದ್ದಾರೆ. ಮೃತರ ಕುಟುಂಗಳಿಗೆ ತಲಾ 5 ಲಕ್ಷ ರೂಪಾಯ ನೀಡುವುದಾಗ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈಗಾಗಲೇ ಘೋಷಿಸಿದ್ದಾರೆ.

ಮಧ್ಯಪ್ರದೇಶ ಬಾವಿ ದುರಂತ: ಪುಟ್ಟ ಬಾಲಕಿಯ ರಕ್ಷಣಾ ಕಾರ್ಯಾಚರಣೆ ವೇಳೆ  ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ.ಘೋಷಿಸಿದ ಪ್ರಧಾನಿ ಮೋದಿ
ವಿದಿಶಾ ಬಾವಿ ದುರಂತದ ಸನ್ನಿವೇಶ
TV9 Web
| Edited By: |

Updated on: Jul 17, 2021 | 8:53 AM

Share

ಮಧ್ಯಪ್ರದೇಶದ ಭೋಪಾಲ್​​ನ ವಿದಿಶಾ (Madhya Pradesh-Vidisha)ದಲ್ಲಿ ನಡೆದ ಬಾವಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Prime Minister Narendra Modi)  ಘೋಷಿಸಿದ್ದಾರೆ. ವಿದಿಶಾ ಜಿಲ್ಲೆಯ ಗಂಜ್​ ಬಸೌಡ ಪ್ರದೇಶದಲ್ಲಿ 8 ವರ್ಷದ ಬಾಲಕಿ ಜುಲೈ 15ರಂದು ಬಾವಿಗೆ ಬಿದ್ದಿದ್ದಳು. ಅವಳನ್ನು ರಕ್ಷಿಸಲು ಕೆಲವರು ಮುಂದಾದರು. ಈ ವೇಳೆ ಬಾವಿಯ ಸುತ್ತ 40ಕ್ಕೂ ಹೆಚ್ಚು ಜನರು ನೆರೆದಿದ್ದರು. ಆಗ ಬಾವಿ ಕುಸಿದ ಪರಿಣಾಮ 40 ಜನರೂ ಬಾವಿಪಾಲಾಗಿದ್ದಾರೆ. ಅದರಲ್ಲಿ ಈಗ 8 ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಈ ದುರಂತದ ಬಗ್ಗೆ ನೋವು ವ್ಯಕ್ತಪಡಿಸಿ ಟ್ವೀಟ್ ಮಾಡಿದ ಪ್ರಧಾನಮಂತ್ರಿ ಕಚೇರಿ, ಮೃತರ ಕುಟುಂಬಗಳಿಗೆ ಸಾಂತ್ವನಗಳು. ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ನೀಡಲಾಗುವುದು ಎಂದು ಹೇಳಿದೆ.

ಇನ್ನು 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದುವರೆಗೆ 19 ಮಂದಿಯನ್ನು ರಕ್ಷಿಸಿದ್ದಾರೆ ಮಧ್ಯಪ್ರದೇಶದ ಸಚಿವ ವಿಶ್ವಾಸ್​ ಸಾರಂಗ್​ ತಿಳಿಸಿದ್ದಾರೆ. ಮೃತರ ಕುಟುಂಗಳಿಗೆ ತಲಾ 5 ಲಕ್ಷ ರೂಪಾಯ ನೀಡುವುದಾಗ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈಗಾಗಲೇ ಘೋಷಿಸಿದ್ದಾರೆ. ಹಾಗೇ ಗಾಯಗೊಂಡವರಿಗೆ ತಲಾ 50,000 ರೂ.ನೀಡಲಾಗುವುದು ಮತ್ತು ಉಚಿತ ಚಿಕಿತ್ಸೆ ನೀಡುವುದಾಗಿಯೂ ಹೇಳಿದ್ದಾರೆ. ಸ್ಥಳೀಯರು ಹೇಳಿರುವಂತೆ ಗುರುವಾರ ಸಂಜೆ ವೇಳೆಗೆ ಬಾವಿಯ ಸಮೀಪ ಆಟವಾಡುತ್ತಿದ್ದ ಬಾಲಕಿ ಆಯತಪ್ಪಿಗೆ ಬಾವಿಗೆ ಬಿದ್ದಿದ್ದಾಳೆ. ಈ ಸುದ್ದಿ ಒಬ್ಬರ ಬಾಯಿಂದ ಒಬ್ಬರಿಗೆ ಹರಡುತ್ತಿದ್ದಂತೆಯೇ ಇಡೀ ಗ್ರಾಮಕ್ಕೆ ಗ್ರಾಮವೇ ಬಾವಿಯ ಸುತ್ತ ಜಮಾಯಿಸಿದೆ. ಬಾವಿಯ ತಡೆಗೋಡೆ ಸುತ್ತ ಒತ್ತಡ ಹೆಚ್ಚಾದ ಪರಿಣಾಮ ತಡೆಗೋಡೆ ಮುರಿದು, ಮಣ್ಣು ಕುಸಿದು ಅನಾಹುತ ಘಟಿಸಿದೆ. ಈ ಬಗ್ಗೆ ಮಾತನಾಡಿರುವ ಭೋಪಾಲ್​ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಾಯಿ ಮನೋಹರ್ ಕೂಡಾ ಇದೇ ಅಭಿಪ್ರಾಯವನ್ನೇ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Petrol Price Today: ಮತ್ತೆ ಪೆಟ್ರೋಲ್​ ಬೆಲೆಯಲ್ಲಿ ಏರಿಕೆ; ಸ್ಥಿರತೆಯನ್ನು ಕಾಯ್ದುಕೊಂಡ ಡೀಸೆಲ್

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!