AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ಬಾವಿ ದುರಂತ: ಪುಟ್ಟ ಬಾಲಕಿಯ ರಕ್ಷಣಾ ಕಾರ್ಯಾಚರಣೆ ವೇಳೆ  ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ.ಘೋಷಿಸಿದ ಪ್ರಧಾನಿ ಮೋದಿ

Madhya Pradesh: 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದುವರೆಗೆ 19 ಮಂದಿಯನ್ನು ರಕ್ಷಿಸಿದ್ದಾರೆ ಮಧ್ಯಪ್ರದೇಶದ ಸಚಿವ ವಿಶ್ವಾಸ್​ ಸಾರಂಗ್​ ತಿಳಿಸಿದ್ದಾರೆ. ಮೃತರ ಕುಟುಂಗಳಿಗೆ ತಲಾ 5 ಲಕ್ಷ ರೂಪಾಯ ನೀಡುವುದಾಗ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈಗಾಗಲೇ ಘೋಷಿಸಿದ್ದಾರೆ.

ಮಧ್ಯಪ್ರದೇಶ ಬಾವಿ ದುರಂತ: ಪುಟ್ಟ ಬಾಲಕಿಯ ರಕ್ಷಣಾ ಕಾರ್ಯಾಚರಣೆ ವೇಳೆ  ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ.ಘೋಷಿಸಿದ ಪ್ರಧಾನಿ ಮೋದಿ
ವಿದಿಶಾ ಬಾವಿ ದುರಂತದ ಸನ್ನಿವೇಶ
TV9 Web
| Edited By: |

Updated on: Jul 17, 2021 | 8:53 AM

Share

ಮಧ್ಯಪ್ರದೇಶದ ಭೋಪಾಲ್​​ನ ವಿದಿಶಾ (Madhya Pradesh-Vidisha)ದಲ್ಲಿ ನಡೆದ ಬಾವಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Prime Minister Narendra Modi)  ಘೋಷಿಸಿದ್ದಾರೆ. ವಿದಿಶಾ ಜಿಲ್ಲೆಯ ಗಂಜ್​ ಬಸೌಡ ಪ್ರದೇಶದಲ್ಲಿ 8 ವರ್ಷದ ಬಾಲಕಿ ಜುಲೈ 15ರಂದು ಬಾವಿಗೆ ಬಿದ್ದಿದ್ದಳು. ಅವಳನ್ನು ರಕ್ಷಿಸಲು ಕೆಲವರು ಮುಂದಾದರು. ಈ ವೇಳೆ ಬಾವಿಯ ಸುತ್ತ 40ಕ್ಕೂ ಹೆಚ್ಚು ಜನರು ನೆರೆದಿದ್ದರು. ಆಗ ಬಾವಿ ಕುಸಿದ ಪರಿಣಾಮ 40 ಜನರೂ ಬಾವಿಪಾಲಾಗಿದ್ದಾರೆ. ಅದರಲ್ಲಿ ಈಗ 8 ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಈ ದುರಂತದ ಬಗ್ಗೆ ನೋವು ವ್ಯಕ್ತಪಡಿಸಿ ಟ್ವೀಟ್ ಮಾಡಿದ ಪ್ರಧಾನಮಂತ್ರಿ ಕಚೇರಿ, ಮೃತರ ಕುಟುಂಬಗಳಿಗೆ ಸಾಂತ್ವನಗಳು. ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ನೀಡಲಾಗುವುದು ಎಂದು ಹೇಳಿದೆ.

ಇನ್ನು 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದುವರೆಗೆ 19 ಮಂದಿಯನ್ನು ರಕ್ಷಿಸಿದ್ದಾರೆ ಮಧ್ಯಪ್ರದೇಶದ ಸಚಿವ ವಿಶ್ವಾಸ್​ ಸಾರಂಗ್​ ತಿಳಿಸಿದ್ದಾರೆ. ಮೃತರ ಕುಟುಂಗಳಿಗೆ ತಲಾ 5 ಲಕ್ಷ ರೂಪಾಯ ನೀಡುವುದಾಗ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈಗಾಗಲೇ ಘೋಷಿಸಿದ್ದಾರೆ. ಹಾಗೇ ಗಾಯಗೊಂಡವರಿಗೆ ತಲಾ 50,000 ರೂ.ನೀಡಲಾಗುವುದು ಮತ್ತು ಉಚಿತ ಚಿಕಿತ್ಸೆ ನೀಡುವುದಾಗಿಯೂ ಹೇಳಿದ್ದಾರೆ. ಸ್ಥಳೀಯರು ಹೇಳಿರುವಂತೆ ಗುರುವಾರ ಸಂಜೆ ವೇಳೆಗೆ ಬಾವಿಯ ಸಮೀಪ ಆಟವಾಡುತ್ತಿದ್ದ ಬಾಲಕಿ ಆಯತಪ್ಪಿಗೆ ಬಾವಿಗೆ ಬಿದ್ದಿದ್ದಾಳೆ. ಈ ಸುದ್ದಿ ಒಬ್ಬರ ಬಾಯಿಂದ ಒಬ್ಬರಿಗೆ ಹರಡುತ್ತಿದ್ದಂತೆಯೇ ಇಡೀ ಗ್ರಾಮಕ್ಕೆ ಗ್ರಾಮವೇ ಬಾವಿಯ ಸುತ್ತ ಜಮಾಯಿಸಿದೆ. ಬಾವಿಯ ತಡೆಗೋಡೆ ಸುತ್ತ ಒತ್ತಡ ಹೆಚ್ಚಾದ ಪರಿಣಾಮ ತಡೆಗೋಡೆ ಮುರಿದು, ಮಣ್ಣು ಕುಸಿದು ಅನಾಹುತ ಘಟಿಸಿದೆ. ಈ ಬಗ್ಗೆ ಮಾತನಾಡಿರುವ ಭೋಪಾಲ್​ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಾಯಿ ಮನೋಹರ್ ಕೂಡಾ ಇದೇ ಅಭಿಪ್ರಾಯವನ್ನೇ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Petrol Price Today: ಮತ್ತೆ ಪೆಟ್ರೋಲ್​ ಬೆಲೆಯಲ್ಲಿ ಏರಿಕೆ; ಸ್ಥಿರತೆಯನ್ನು ಕಾಯ್ದುಕೊಂಡ ಡೀಸೆಲ್

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್