AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಗೋಡೌನ್‌ಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ಮತ್ತು ದೇಶಾದ್ಯಂತ 18 ಸಾವಿರ ಪಿಎಸಿಎಸ್‌ಗಳಲ್ಲಿ ಗಣಕೀಕರಣದ ಯೋಜನೆಗಾಗಿ ದೇಶಾದ್ಯಂತ ಹೆಚ್ಚುವರಿ 500 ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳಿಗೆ (ಪಿಎಸಿಎಸ್) ಶಂಕುಸ್ಥಾಪನೆ ಮಾಡಿದ್ದಾರೆ.

ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Feb 24, 2024 | 7:17 PM

Share

ದೆಹಲಿ ಫೆಬ್ರವರಿ 24: ‘ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಚಾಲನೆ ನೀಡಿದ್ದು, ದೇಶದ ಮೂಲೆ ಮೂಲೆಗಳಲ್ಲಿ ಸಾವಿರಾರು ವೇರ್ ಹೌಸ್ ಮತ್ತು ಗೋದಾಮುಗಳು ಬರಲಿವೆ ಎಂದು ಹೇಳಿದ್ದಾರೆ. ದೆಹಲಿಯ ಭಾರತ್ ಮಂಟಪದಲ್ಲಿ(Bharat Mandapam ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳಿಗೆ ಚಾಲನೆ ನೀಡಿದ ಮೋದಿ, 700 ಲಕ್ಷ ಮೆಟ್ರಿಕ್ ಟನ್‌ಗಳ ವಿಶ್ವದ ಅತಿದೊಡ್ಡ ಸಂಗ್ರಹಣಾ ಯೋಜನೆಯನ್ನು ಮುಂದಿನ ಐದು ವರ್ಷಗಳಲ್ಲಿ 1.25 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ರೈತರು ತಮ್ಮ ಉತ್ಪನ್ನಗಳನ್ನು ಸಂಗ್ರಹಿಸಿಟ್ಟುಕೊಂಡು ತಮ್ಮ ಅಗತ್ಯಕ್ಕೆ ತಕ್ಕಂತೆ ಸರಿಯಾದ ಸಮಯಕ್ಕೆ ಮಾರಾಟ ಮಾಡುವುದರ ಜೊತೆಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ಸಹಕಾರಿ ಸಂಸ್ಥೆಗಳು ಭಾರತದ ಪ್ರಾಚೀನ ಪರಿಕಲ್ಪನೆ ಎಂದು ಪ್ರಧಾನಿ ಹೇಳಿದ್ದಾರೆ. ಗೋಡೌನ್‌ಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ಮತ್ತು ದೇಶಾದ್ಯಂತ 18 ಸಾವಿರ ಪಿಎಸಿಎಸ್‌ಗಳಲ್ಲಿ ಗಣಕೀಕರಣದ ಯೋಜನೆಗಾಗಿ ದೇಶಾದ್ಯಂತ ಹೆಚ್ಚುವರಿ 500 ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳಿಗೆ (ಪಿಎಸಿಎಸ್) ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಿದ್ದಾರೆ. ಹೊಸ ಸಹಕಾರ ಸಚಿವಾಲಯದ ಮೂಲಕ, ಭಾರತದ ಕೃಷಿ ಕ್ಷೇತ್ರದ ವಿಘಟಿತ ಅಧಿಕಾರಗಳನ್ನು ಒಟ್ಟುಗೂಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಮುಂಬರುವ ವರ್ಷಗಳಲ್ಲಿ ಎರಡು ಲಕ್ಷ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಸರ್ಕಾರದ ಗುರಿಯನ್ನು ಅವರು ಪುನರುಚ್ಚರಿಸಿದ್ದಾರೆ.

ಯೋಜನೆಗೆ ಮೋದಿ ಚಾಲನೆ

ರೈತ ಉತ್ಪಾದಕರ ಸಂಘಟನೆಯ ಉದಾಹರಣೆ ನೀಡಿದ ಅವರು, ಹಳ್ಳಿಗಳಲ್ಲಿ ಸಣ್ಣ ರೈತರಲ್ಲಿ ಬೆಳೆಯುತ್ತಿರುವ ಉದ್ಯಮಶೀಲತೆ ಬಗ್ಗೆಯೂ ಮಾತನಾಡಿದ್ದಾರೆ. ಪ್ರತ್ಯೇಕ ಸಚಿವಾಲಯದ ಕಾರಣ, 10 ಸಾವಿರ ಎಫ್‌ಪಿಒಗಳ ಗುರಿಯಲ್ಲಿ ಎಂಟು ಸಾವಿರ ಎಫ್‌ಪಿಒಗಳು ಈಗಾಗಲೇ ದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ. ಮೀನುಗಾರಿಕೆ ಕ್ಷೇತ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಸಹಕಾರಿ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಪೊಲೀಸ್ ನೇಮಕಾತಿ ಪರೀಕ್ಷೆ ರದ್ದು; 6 ತಿಂಗಳೊಳಗೆ ಮರು ಪರೀಕ್ಷೆಗೆ ಸಿಎಂ ಆದಿತ್ಯನಾಥ್ ಆದೇಶ

ಹೆಚ್ಚಿನ ಸಂಖ್ಯೆಯ ಮಹಿಳೆಯರು ಕೃಷಿ ಮತ್ತು ಡೈರಿ ಸಹಕಾರಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೃಷಿ ವ್ಯವಸ್ಥೆಗಳ ಆಧುನೀಕರಣವು ವಿಕಸಿತ್ ಭಾರತ್‌ಗೆ ಅತ್ಯಗತ್ಯ ಎಂದ ಮೋದಿ, ಅಮುಲ್ ಮತ್ತು ಲಿಜ್ಜತ್ ಪಾಪಡ್ ಯಶಸ್ಸಿನ ಕಥೆಗಳನ್ನು ಉಲ್ಲೇಖಿಸಿ ಅದು ಸಹಕಾರಿ ಸಂಸ್ಥೆಗಳ ಶಕ್ತಿ ಎಂದಿದ್ದಾರೆ. ಈ ಉದ್ಯಮಗಳಲ್ಲಿ ಮಹಿಳೆಯರ ಪ್ರಮುಖ ಪಾತ್ರವನ್ನು ಅವರು ಶ್ಲಾಘಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ