AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದಾಬಾದ್​ಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದ ನೀರಜ್​ ಚೋಪ್ರಾರನ್ನು ಸರಣಿ ಟ್ವೀಟ್​ ಮೂಲಕ ಹೊಗಳಿದ ಪ್ರಧಾನಿ ಮೋದಿ

ನೀರಜ್​ ಚೋಪ್ರಾ ಮಕ್ಕಳಿಗೆ ಶೇಕ್​ ಹ್ಯಾಂಡ್ ಮಾಡಿ, ಅವರೊಂದಿಗೆ ಮಾತುಕತೆ ನಡೆಸುತ್ತಿರುವ ವಿಡಿಯೋವನ್ನು ಡಿಡಿ ನ್ಯೂಸ್​​ ಶೇರ್​ ಮಾಡಿಕೊಂಡಿತ್ತು. ಅದನ್ನು ಕೂಡ ಪ್ರಧಾನಿ ಮೋದಿ ರೀಟ್ವೀಟ್​ ಮಾಡಿದ್ದಾರೆ.

ಅಹ್ಮದಾಬಾದ್​ಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದ ನೀರಜ್​ ಚೋಪ್ರಾರನ್ನು ಸರಣಿ ಟ್ವೀಟ್​ ಮೂಲಕ ಹೊಗಳಿದ ಪ್ರಧಾನಿ ಮೋದಿ
ನೀರಜ್​ ಚೋಪ್ರಾ ಮತ್ತು ಪ್ರಧಾನಿ ಮೋದಿ
TV9 Web
| Edited By: |

Updated on: Dec 06, 2021 | 7:47 AM

Share

ಒಲಿಂಪಿಕ್ಸ್​​ನಲ್ಲಿ ಜಾವಲಿನ್​ ಎಸೆತದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ನಿನ್ನೆ ಗುಜರಾತ್​​ನ ಅಹ್ಮದಾಬಾದ್​ನಲ್ಲಿರುವ ಸಂಸ್ಕಾರಧಾಮಕ್ಕೆ ಭೇಟಿ ನೀಡಿದ್ದರು. ಅಲ್ಲಿಗೆ ಆಗಮಿಸಿದ್ದ ಸುಮಾರು 75 ಶಾಲೆಗಳ ಮಕ್ಕಳ ಬಳಿ ಸಂವಾದ ನಡೆಸಿದರು. ಹಾಗೇ, ಜಾವಲಿನ್​ ಎಸೆತದ ತರಬೇತಿ ಕೂಡ ನೀಡಿದರು. ಆಟಗಳನ್ನು ಆಡುವ ಮೂಲಕ ಸದಾ ಫಿಟ್​ ಆಗಿರಿ ಎಂಬ ಸಲಹೆಯನ್ನೂ ಕೊಟ್ಟರು.  ಇದೇವೇಳೆ ಮಕ್ಕಳೊಂದಿಗೆ ಸೇರಿ ಆರ್ಚರಿ, ವಾಲಿಬಾಲ್​, ಜಾವಲಿನ್​ ಎಸೆತದ ಆಟಗಳನ್ನು ಆಡಿದರು. 

ಹೀಗೆ ಸಂಸ್ಕಾರಧಾಮ ಭೇಟಿ ನೀಡಿ ಮಕ್ಕಳೊಂದಿಗೆ ಕಾಲ ಕಳೆದು, ಅವರೊಂದಿಗೆ ಸಂವಾದ ನಡೆಸಿದ ನೀರಜ್​ ಚೋಪ್ರಾರನ್ನು ಪ್ರಧಾನಿ ಮೋದಿ ಸರಣಿ ಟ್ವೀಟ್​ ಮೂಲಕ ಹೊಗಳಿದ್ದಾರೆ. ಚಿಕ್ಕ ಮಕ್ಕಳ ಬಳಿ ಹೋಗಿ, ಅವರಲ್ಲಿ ಆಟ ಮತ್ತು ಫಿಟ್ನೆಸ್​ ಅರಿವು ಮೂಡಿಸುವ ಮೂಲಕ ನೀರಜ್​ ಚೋಪ್ರಾ ಒಂದು ಒಳ್ಳೆಯ ಉಪಕ್ರಮ ತೆಗೆದುಕೊಂಡಿದ್ದಾರೆ. ಇಂಥ ಪ್ರಯತ್ನಗಳನ್ನು ಮಾಡಿದರೆ ಮಕ್ಕಳಲ್ಲಿ ಆಟ ಮತ್ತು ವ್ಯಾಯಾಮದ ಬಗ್ಗೆ ಆಸಕ್ತಿ ಮೂಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.  ಹಾಗೇ, ನಿನ್ನೆ ನೀರಜ್​ ಚೋಪ್ರಾ ತಾವು ಸಂಸ್ಕೃತಧಾಮಕ್ಕೆ ಭೇಟಿಕೊಟ್ಟಿದ್ದಾಗಿ ಮಾಡಿಕೊಂಡಿದ್ದ ಟ್ವೀಟ್​​ನ್ನೂ ರೀಟ್ವೀಟ್​ ಮಾಡಿಕೊಂಡಿದ್ದಾರೆ.

ಹಾಗೇ, ನೀರಜ್​ ಚೋಪ್ರಾ ಮಕ್ಕಳಿಗೆ ಶೇಕ್​ ಹ್ಯಾಂಡ್ ಮಾಡಿ, ಅವರೊಂದಿಗೆ ಮಾತುಕತೆ ನಡೆಸುತ್ತಿರುವ ವಿಡಿಯೋವನ್ನು ಡಿಡಿ ನ್ಯೂಸ್​​ ಶೇರ್​ ಮಾಡಿಕೊಂಡಿತ್ತು. ಅದನ್ನು ಕೂಡ ರೀಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಇದನ್ನು ನೋಡಿದರೆ ಖಂಡಿತ ನಿಮಗೆಲ್ಲರಿಗೂ ಸಂತೋಷವಾಗದೆ ಇರದು. ಇದೇ ಕ್ರಮ ಮುಂದುವರಿಸೋಣ ಮತ್ತು ನಮ್ಮ ಯುವಜನತೆ ಕ್ರೀಡೆಯಲ್ಲಿ ಮಿಂಚುವಂತೆ ಪ್ರೇರೇಪಿಸೋಣ ಎಂದಿದ್ದಾರೆ. ಹಾಗೇ, ನೀರಜ್​ ಚೋಪ್ರಾ ಸಣ್ಣ ಬಾಲಕನಿಗೆ ಜಾವಲಿನ್​ ಎಸೆತದ ಟ್ರೇನಿಂಗ್​ ಕೊಟ್ಟ ವಿಡಿಯೋವೊಂದನ್ನು ಸಂಸ್ಕಾರಧಾಮ ಶೇರ್​ ಮಾಡಿಕೊಂಡಿದ್ದು, ಅದನ್ನು ಕೂಡ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ಅದ್ಭುತ ಎಂದು ಕ್ಯಾಪ್ಷನ್​ ಕೊಟ್ಟಿದ್ದಾರೆ.

ಯುವಜನರಿಗೆ ವ್ಯಾಯಾಮ ಚಟುವಟಿಕೆಗಳು ಮತ್ತು ಸಮತೋಲಿತ ಆಹಾರದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರಧಾನಿ ಪ್ರಾರಂಭಿಸಿರುವ, ಯುವಜನರು, ಮಕ್ಕಳೊಂದಿಗೆ ಕ್ರೀಡಾಪಟುಗಳ ಸಂವಾದ ಕಾರ್ಯಕ್ರಮ ನೀರಜ್​ ಚೋಪ್ರಾ ಉದ್ಘಾಟಿಸಿದ್ದಾರೆ.  ನಂತರ ಟ್ವೀಟ್​ ಮಾಡಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಶ್ರೀ ವಿಷ್ಣುಸಹಸ್ರನಾಮದಲ್ಲಿ ಶ್ರೀ ರಾಮ ರಾಮ ರಾಮೇತಿ ಶ್ಲೋಕದ ಮಹಿಮೆ, ಇದೊಂದು ಮಂತ್ರ ಶ್ರೀ ವಿಷ್ಣುಸಹಸ್ರನಾಮಕ್ಕೆ ಸಮ ಹೇಗೆ?

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ